ಕೆ.ಆರ್. ನಗರ : ಜೆಡಿಎಸ್- ಬಿಜೆಪಿ ನಡುವಿನ ಯುದ್ಧ
ಕೃಷ್ಣರಾಜನಗರ(ಕೆ.ಆರ್ ನಗರ) ಕ್ಷೇತ್ರದಲ್ಲಿ ಸಾ.ರಾ. ಮಹೇಶ್ ಶಾಸಕರು. ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ದೊಡ್ಡಸ್ವಾಮಿ ಗೌಡ ಸೋಲು ಕಂಡಿದ್ದರು. ಒಕ್ಕಲಿಗರು, ಕುರುಬರು ಹೆಚ್ಚಾಗಿರುವ ಈ ಕ್ಷೇತ್ರದಲ್ಲಿ ಎಚ್. ವಿಶ್ವನಾಥ್ ಅವರು ಜೆಡಿಎಸ್ ಗೆ ಹಾರಿರುವುದರಿಂದ ಜೆಡಿಎಸ್ ಗೆ ಇದು ಅನುಕೂಲವಾಗಿಯೂ ಇದೆ.
ಆದರೆ, ಶ್ರೀನಿವಾಸ್ ಪ್ರಸಾದ್ ಹಾಗೂ ಎಸ್.ಎಂ. ಕೃಷ್ಣ ಅವರು ಬಿಜೆಪಿ ಸೇರ್ಪಡೆಗೊಂಡಿದ್ದು ಇಲ್ಲಿ ಬಿಜೆಪಿಗೆ ಬಲ ತುಂಬಿರುವುದರಿಂದ ಜೆಡಿಎಸ್- ಬಿಜೆಪಿ ನಡುವಿನ ಯುದ್ಧ ನಿಶ್ಚಿತ. ಇದು ಮುಖ್ಯಮಂತ್ರಿಯವರ ತವರು ಜಿಲ್ಲೆಯಾದರೂ, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ನದ್ದೇನೂ ನಡೆಯುವಂತಿಲ್ಲ. ಏನಿದ್ದರೂ ಇಲ್ಲಿ ಬಿಜೆಪಿ, ಜೆಡಿಎಸ್ ನದ್ದೇ ಕಾರುಬಾರು ಎಂದು ಹೇಳಲಾಗುತ್ತಿದೆ.

ಈ ಹಿಂದೆ, ಇಲ್ಲಿ ಕಾಂಗ್ರೆಸ್ ವರ್ಚಸ್ಸಿನಲ್ಲ ಎನ್ನಬಹುದಾದರೂ ಸಿದ್ದು ಬೆಂಬಲಿಗರ ಸಂಖ್ಯೆಯೇನೂ ಕಮ್ಮಿಯಿಲ್ಲ. ಕುರುಬರು, ಹಿಂದುಳಿದ ವರ್ಗದವರು ಸಿದ್ದು ಬೆಂಬಲಕ್ಕಿದ್ದರೆ, ಒಕ್ಕಲಿಗರು ಜೆಡಿಎಸ್ ಬೆಂಬಲಕ್ಕೆ ನಿಂತಿದ್ದಾರೆ. ಲಿಂಗಾಯತರೆಲ್ಲಾ ಬಿಜೆಪಿ ಬೆನ್ನಿಗೆ ನಿಂತಿದ್ದಾರೆ ಎಂಬ ಮಾತು ಚಾಲ್ತಿಯಲ್ಲಿರುತ್ತಿತ್ತು. ಆದರೆ, ಈ ಬಾರಿ ಹಾಗಾಗದು ಎಂದು ಈ ಕ್ಷೇತ್ರದ ರಾಜಕೀಯ ಅರಿತ ಕೆಲವರು ಹೇಳುತ್ತಾರೆ.
2013ರ ಫಲಿತಾಂಶ:
* ಒಟ್ಟು 11 ಮಂದಿ ನಾಮಪತ್ರ ಸಲ್ಲಿಸಿದ್ದರು, 4 ಮಂದಿ ಹಿಂಪಡೆದರು, 7 ಮಂದಿ ಸ್ಪರ್ಧಿಸಿದ್ದರು. 5 ಮಂದಿ ಠೇವಣಿ ಕಳೆದುಕೊಂಡರು.
* ಶೇ 83.61 ರಷ್ಟು ಮತದಾನವಾಗಿತ್ತು. 157467 ಮತಗಳ ಪೈಕಿ ಜೆಡಿಎಸ್ ನ ಸಾ.ರಾ ಮಹೇಶ್ ಅವರು 81457 ಮತಗಳನ್ನು ಪಡೆದರೆ, ಕಾಂಗ್ರೆಸ್ಸಿನ ದೊಡ್ದಸ್ವಾಮೇಗೌಡ 66405 ಮತಗಳನ್ನು ಗಳಿಸಿ ಸೋಲು ಕಂಡರು. 15052 ಮತಗಳ (ಶೇ 9.56) ಮತಗಳ ಅಂತರದಲ್ಲಿ ಮಹೇಶ್ ಜಯ ದಾಖಲಿಸಿದರು.
ಕಾಂಗ್ರೆಸ್ ನಿಂದ ಅಧಿಕೃತವಾಗಿ ಅಭ್ಯರ್ಥಿ ಪ್ರಕಟವಾಗಿಲ್ಲವಾದರೂ, ಕೆಲ ದಿನಗಳ ಹಿಂದೆ ಕೆ.ಆರ್.ನಗರದಲ್ಲಿ ನಡೆದ ಸಭೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ದೊಡ್ಡಸ್ವಾಮೇಗೌಡ ಅವರ ಪುತ್ರ, ಜಿಪಂ ವಿರೋಧ ಪಕ್ಷದ ನಾಯಕ ಡಿ.ರವಿಶಂಕರ್ ಅವರೇ ಕಾಂಗ್ರೆಸ್ ಅಭ್ಯರ್ಥಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಜೆಡಿಎಸ್ ನಿಂದ ಮಹೇಶ್ ಈ ಬಾರಿಯೂ ಸ್ಪರ್ಧೆ ಬಯಸಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications