ಕೆ.ಆರ್. ನಗರ : ಜೆಡಿಎಸ್- ಬಿಜೆಪಿ ನಡುವಿನ ಯುದ್ಧ
ಕೃಷ್ಣರಾಜನಗರ(ಕೆ.ಆರ್ ನಗರ) ಕ್ಷೇತ್ರದಲ್ಲಿ ಸಾ.ರಾ. ಮಹೇಶ್ ಶಾಸಕರು. ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ದೊಡ್ಡಸ್ವಾಮಿ ಗೌಡ ಸೋಲು ಕಂಡಿದ್ದರು. ಒಕ್ಕಲಿಗರು, ಕುರುಬರು ಹೆಚ್ಚಾಗಿರುವ ಈ ಕ್ಷೇತ್ರದಲ್ಲಿ ಎಚ್. ವಿಶ್ವನಾಥ್ ಅವರು ಜೆಡಿಎಸ್ ಗೆ ಹಾರಿರುವುದರಿಂದ ಜೆಡಿಎಸ್ ಗೆ ಇದು ಅನುಕೂಲವಾಗಿಯೂ ಇದೆ.
ಆದರೆ, ಶ್ರೀನಿವಾಸ್ ಪ್ರಸಾದ್ ಹಾಗೂ ಎಸ್.ಎಂ. ಕೃಷ್ಣ ಅವರು ಬಿಜೆಪಿ ಸೇರ್ಪಡೆಗೊಂಡಿದ್ದು ಇಲ್ಲಿ ಬಿಜೆಪಿಗೆ ಬಲ ತುಂಬಿರುವುದರಿಂದ ಜೆಡಿಎಸ್- ಬಿಜೆಪಿ ನಡುವಿನ ಯುದ್ಧ ನಿಶ್ಚಿತ. ಇದು ಮುಖ್ಯಮಂತ್ರಿಯವರ ತವರು ಜಿಲ್ಲೆಯಾದರೂ, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ನದ್ದೇನೂ ನಡೆಯುವಂತಿಲ್ಲ. ಏನಿದ್ದರೂ ಇಲ್ಲಿ ಬಿಜೆಪಿ, ಜೆಡಿಎಸ್ ನದ್ದೇ ಕಾರುಬಾರು ಎಂದು ಹೇಳಲಾಗುತ್ತಿದೆ.

ಈ ಹಿಂದೆ, ಇಲ್ಲಿ ಕಾಂಗ್ರೆಸ್ ವರ್ಚಸ್ಸಿನಲ್ಲ ಎನ್ನಬಹುದಾದರೂ ಸಿದ್ದು ಬೆಂಬಲಿಗರ ಸಂಖ್ಯೆಯೇನೂ ಕಮ್ಮಿಯಿಲ್ಲ. ಕುರುಬರು, ಹಿಂದುಳಿದ ವರ್ಗದವರು ಸಿದ್ದು ಬೆಂಬಲಕ್ಕಿದ್ದರೆ, ಒಕ್ಕಲಿಗರು ಜೆಡಿಎಸ್ ಬೆಂಬಲಕ್ಕೆ ನಿಂತಿದ್ದಾರೆ. ಲಿಂಗಾಯತರೆಲ್ಲಾ ಬಿಜೆಪಿ ಬೆನ್ನಿಗೆ ನಿಂತಿದ್ದಾರೆ ಎಂಬ ಮಾತು ಚಾಲ್ತಿಯಲ್ಲಿರುತ್ತಿತ್ತು. ಆದರೆ, ಈ ಬಾರಿ ಹಾಗಾಗದು ಎಂದು ಈ ಕ್ಷೇತ್ರದ ರಾಜಕೀಯ ಅರಿತ ಕೆಲವರು ಹೇಳುತ್ತಾರೆ.
2013ರ ಫಲಿತಾಂಶ:
* ಒಟ್ಟು 11 ಮಂದಿ ನಾಮಪತ್ರ ಸಲ್ಲಿಸಿದ್ದರು, 4 ಮಂದಿ ಹಿಂಪಡೆದರು, 7 ಮಂದಿ ಸ್ಪರ್ಧಿಸಿದ್ದರು. 5 ಮಂದಿ ಠೇವಣಿ ಕಳೆದುಕೊಂಡರು.
* ಶೇ 83.61 ರಷ್ಟು ಮತದಾನವಾಗಿತ್ತು. 157467 ಮತಗಳ ಪೈಕಿ ಜೆಡಿಎಸ್ ನ ಸಾ.ರಾ ಮಹೇಶ್ ಅವರು 81457 ಮತಗಳನ್ನು ಪಡೆದರೆ, ಕಾಂಗ್ರೆಸ್ಸಿನ ದೊಡ್ದಸ್ವಾಮೇಗೌಡ 66405 ಮತಗಳನ್ನು ಗಳಿಸಿ ಸೋಲು ಕಂಡರು. 15052 ಮತಗಳ (ಶೇ 9.56) ಮತಗಳ ಅಂತರದಲ್ಲಿ ಮಹೇಶ್ ಜಯ ದಾಖಲಿಸಿದರು.
ಕಾಂಗ್ರೆಸ್ ನಿಂದ ಅಧಿಕೃತವಾಗಿ ಅಭ್ಯರ್ಥಿ ಪ್ರಕಟವಾಗಿಲ್ಲವಾದರೂ, ಕೆಲ ದಿನಗಳ ಹಿಂದೆ ಕೆ.ಆರ್.ನಗರದಲ್ಲಿ ನಡೆದ ಸಭೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ದೊಡ್ಡಸ್ವಾಮೇಗೌಡ ಅವರ ಪುತ್ರ, ಜಿಪಂ ವಿರೋಧ ಪಕ್ಷದ ನಾಯಕ ಡಿ.ರವಿಶಂಕರ್ ಅವರೇ ಕಾಂಗ್ರೆಸ್ ಅಭ್ಯರ್ಥಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಜೆಡಿಎಸ್ ನಿಂದ ಮಹೇಶ್ ಈ ಬಾರಿಯೂ ಸ್ಪರ್ಧೆ ಬಯಸಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications