ಕ್ಷೇತ್ರ ಪರಿಚಯ: ಕುಂದಾಪುರದಲ್ಲಿ ಈ ಬಾರಿಯೂ ಹಾಲಾಡಿ ನಾಗಾಲೋಟ?
ಸುಂದರವಾದ ಕುಂದಗನ್ನಡ ಭಾಷೆಯನ್ನು ಕುಂದಾಪುರದಲ್ಲಿ ಕಾಣಬಹುದಾಗಿದೆ. ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಸಾಲಿಗ್ರಾಮದ ಗುರುನರಸಿಂಹ ಹಾಗೂ ಆಂಜನೇಯ ದೇವಾಲಯಗಳು ಇಲ್ಲಿವೆ.
ಸುಂದರ ಕಡಲನ್ನು ಹೊಂದಿರುವ ತಾಲೂಕು ಕುಂದಾಪುರ. ತ್ರಾಸಿ ಕಡಲ ತೀರ, ಮರವಂತೆ ಬೀಚ್, ಗಂಗೊಳ್ಳಿಯ ಹಿನ್ನೀರು ಇಲ್ಲಿನ ಸೌಂದರ್ಯವನ್ನು ಹೆಚ್ಚಿಸಿವೆ. ಕುಂದಾಪುರ ಮತ್ತು ಇಲ್ಲಿನ ಬಸ್ರೂರು ಅನಾದಿ ರಾಜರ ಕಾಲದಿಂದಲೂ ವ್ಯಾಪಾರಿ ಕೇಂದ್ರವಾಗಿ ಜನಪ್ರಿಯವಾಗಿತ್ತು. ಕುಂದಾಪುರ ಸ್ವಲ್ಪ ಮಟ್ಟಿಗೆ ನಕ್ಸಲ್ ಪೀಡಿತ ತಾಲೂಕೂ ಹೌದು.
ಕುಂದಾಪುರ ರಾಜಕೀಯ ಇತಿಹಾಸವನ್ನು ನೋಡಿದರೆ ಇಲ್ಲಿ 1983, 85, 89, 1994ರಲ್ಲಿ ಕಾಂಗ್ರೆಸಿನ ಕೆ. ಪ್ರತಾಪ್ ಚಂದ್ರ ಶೆಟ್ಟಿ ಗೆಲುವು ಸಾಧಿಸಿದ್ದರು. ಹೀಗೆ ನಾಲ್ಕು ಬಾರಿ ಗೆದ್ದಿದ್ದ ಪ್ರತಾಪ್ ಚಂದ್ರ ಶೆಟ್ಟಿಗೆ 1999ರಲ್ಲಿ ಕಣಕ್ಕಿಳಿದ ಮೊದಲ ಚುನಾವಣೆಯಲ್ಲೇ ಸೋಲುಣಿಸಿದವರು ಕೆಲವೇ ದಿನಗಳ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ.

1999ರಲ್ಲಿ 1 ಸಾವಿರ ಮತಗಳಿಂದ ಪ್ರತಾಪ್ ಚಂದ್ರ ಶೆಟ್ಟಿಗೆ ಸೋಲುಣಿಸಿದ ಹಾಲಾಡಿ, 2004ರಲ್ಲಿ ಗೆಲುವಿನ ಅಂತರವನ್ನು 20 ಸಾವಿರಕ್ಕೆ ವಿಸ್ತರಿಸಿಕೊಂಡರು. 2008ರಲ್ಲಿ ಕಾಂಗ್ರೆಸಿನಿಂದ ಕಣಕ್ಕಿಳಿದಿದ್ದ ಪ್ರಭಾವಿ ರಾಜಕಾರಣ ಕೆ. ಜಯಪ್ರಕಾಶ್ ಹೆಗ್ಡೆಯನ್ನೇ 25 ಸಾವಿರ ಮತಗಳಿಂದ ಮಣ್ಣುಮುಕ್ಕಿಸಿದರು ಹಾಲಾಡಿ.
ಹೀಗೆ ಮೂರು ಬಾರಿ ಗೆದ್ದಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟರಿಗೆ 2012ರಲ್ಲಿ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಸಚಿವ ಸ್ಥಾನ ನೀಡುವುದಾಗಿ ಹೇಳಿ ಬೆಂಗಳೂರಿಗೆ ಕರೆಸಿಕೊಂಡಿದ್ದರು. ಕೊನೆಗೆ ಕೊನೆಯ ಕ್ಷಣದಲ್ಲಿ ಅವರಿಗೆ ಸಚಿವ ಸ್ಥಾನ ನೀಡಿರಲಿಲ್ಲ. ಹೀಗಾಗಿ ಸಚಿವ ಸ್ಥಾನ ನೀಡದ್ದಕ್ಕೆ ಬೇಸರಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷವನ್ನೇ ತೊರೆದಿದ್ದರು.
ಅವರನ್ನು ಬಿಜೆಪಿಯಲ್ಲಿ ಉಳಿಸಿಕೊಳ್ಳಬೇಕೆಂದು ಸಾಕಷ್ಟು ಪ್ರಯತ್ನಗಳು ನಡೆದಿತ್ತು. ಆದರೆ, ಪ್ರಯತ್ನಗಳಷ್ಟೂ ನೆಲಕಚ್ಚಿ ಹಾಲಾಡಿ ಕೇಸರಿ ಪಾಳಯ ತೊರೆದಿದ್ದರು.
ಮುಂದೆ 2013ರ ವಿಧಾನಸಭೆ ಚುನಾವಣೆಗೆ ಸ್ವತಂತ್ರವಾಗಿ ಕಣಕ್ಕಿಳಿದು 89 ಸಾವಿರ ಮತಗಳನ್ನು ಪಡೆದು 40 ಸಾವಿರ ಮತಗಳ ಅಂತರದಿಂದ ಹಾಲಾಡಿ ಭಾರೀ ಜಯ ದಾಖಲಿಸಿದ್ದರು. ಇಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿದಿತ್ತು. ಇದು ಹಾಲಾಡಿ ವೈಯಕ್ತಿಕ ವರ್ಚಸ್ಸಿಗೆ ಕನ್ನಡಿ ಹಿಡಿದಂತಿತ್ತು.
ಸದ್ಯ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಬಿಜೆಪಿಗೆ ಮರಳಿದ್ದಾರೆ. ಕಳೆದ ಬಾರಿ ಸ್ವತಂತ್ರವಾಗಿ ಸ್ಪರ್ಧಿಸಿಯೂ ಅವರು ಗಳಿಸಿದ ಭರ್ಜರಿ ಗೆಲುವು ನೋಡಿದರೆ, ಜತೆಗೆ ಇದೀಗ ಬಿಜೆಪಿಗೂ ಬಂದಿರುವುದರಿಂದ ಅವರು ಗೆಲ್ಲುವ ಸಾಧ್ಯತೆಗಳು ನಿಚ್ಚಳವಾಗಿವೆ.
ಕಾಂಗ್ರೆಸ್ ಹಾಲಾಡಿ ಎಂಬ ಅಶ್ವಮೇಧದ ಕುದುರೆಗೆ ತಡೆಯೊಡ್ಡುತ್ತಾ ನೋಡಬೇಕಷ್ಟೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications