ಕುಂದಗೋಳ: ಕೆಜೆಪಿ-ಬಿಜೆಪಿ ವಿಲೀನ ಕಾಂಗ್ರೆಸ್ ಗೆ ಏಟು ಕೊಟ್ಟೀತಾ!?
ಇತಿಹಾಸ ಪ್ರಸಿದ್ಧ ಕುಂದಗೋಳ ಕ್ಷೇತ್ರ ಕಲೆ ಮತ್ತು ಸಂಗೀತಕ್ಕಾಗಿ ಸಾಕಷ್ಟು ಹೆಸರುವಾಸಿಯಾಗಿತ್ತು. ಗಂಗೂಬಾಯಿ ಹಾನಗಲ್ ಮತ್ತು ಭೀಮಸೇನ ಜೋಶಿಯವರಂಥ ಗಾನಮಾಂತ್ರಿಕರಿಗೆ ಸಂಗೀತ ಕಲಿಸಿದ ಗುರುಗಳಾದ ಹಿಂದುಸ್ತಾನ ಸಂಗೀತ ದಿಗ್ಗಜರಾದ ಪಂ.ಸವಾಯಿ ಗಂಧರ್ವ ಅವರ ಮೂಲ ಊರು ಕುಂದಗೋಳ.
ಇಲ್ಲಿಯ ಶಂಭುಲಿಂಗ ದೇವಾಲಯ ಚಾಲುಕ್ಯ ಶೈಲಿಯಲ್ಲಿ ನಿರ್ಮಿತವಾಗಿದ್ದು, ಸಭಾಮಂಟಪದ ವೃತ್ತಿನಲ್ಲಿ ಅಷ್ಟದಿಕ್ಪಾಲಕರನ್ನು ಕೆತ್ತಲಾಗಿದೆ. ಹೊರಬದಿಯಲ್ಲಿ ಕೀರ್ತಿ ಮುಖಗಳಿವೆ. ಗರ್ಭಗುಡಿಯಲ್ಲಿ ಶಿವಲಿಂಗವೂ ಮುಂಭಾಗದ ಕೋಣೆಯ ಎಡಬಲಗಳಲ್ಲಿ ಪಾರ್ವತಿ ವಿಘ್ನೇಶ್ವರರ ವಿಗ್ರಹಗಳೂ ಇವೆ. ಬ್ರಹ್ಮದೇವರ ಗುಡಿ, ದತ್ತಾತ್ರೇಯಗುಡಿ, ಶಂಕರಾಚಾರ್ಯರ ಗುಡಿ ಹಾಗೂ ಮಲ್ಲಿಕಾರ್ಜುನ ಗುಡಿಸೇರಿದಂತೆ ಹಲವು ದೇವಾಲಯಗಳು ಇಲ್ಲಿವೆ.
ಇಲ್ಲಿಚಾಲುಕ್ಯ, ಕಳಚುರಿ ಮತ್ತು ವಿಜಯನಗರ ಕಾಲಗಳಿಗೆ ಸೇರಿದ ಹನ್ನೊಂದಕ್ಕೂ ಹೆಚ್ಚು ಶಿಲಾಶಾಸನಗಳು ಪತ್ತೆಯಾಗಿವೆ. ಇತಿಹಾಸ ತಾಣಗಳ ಮೂಲಕ ಹಲವು ಪ್ರವಾಸಿಗರನ್ನು ತನ್ನತ್ತ ಸೆಳೆವ ಕುಂದಗೋಳ ಧಾರವಾಡದ ಪ್ರಮುಖ ತಾಣಗಳಲ್ಲೊಂದು.

ಈ ತಾಣದ ರಾಜಕೀಯ ಚಿತ್ರಣವನ್ನು ಅವಲೋಕಿಸುವುದಾದರೆ, 2013 ರ ಚುನಾವಣೆಯಲ್ಲಿ ಕೆಜೆಪಿ ಮತ್ತು ಬಿಜೆಪಿ ಕಲಹದಿಂದ ಲಾಭ ಪಡೆದ ಕಾಂಗ್ರೆಸ್ ನ ಕುರುಬ ಸಮುದಾಯದ ಸಿ. ಎಸ್.ಶಿವಳ್ಳಿ ಕಳೆದ ಬಾರಿ ಗೆದ್ದಿದ್ದರು. ಈ ಭಾಗದಲ್ಲಿ ಲಿಂಗಾಯತರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿರುವುದರಿಂದ ಲಿಂಗಾಯತ ಮತಗಳು ಯಾರನ್ನು ಸೆಳೆಯಲಿವೆ ಎಂಬುದು ಮುಖ್ಯ ಪ್ರಶ್ನೆಯಾಗಿದೆ.
2018 ರ ಚುನಾವಣೆಯಲ್ಲಿ ಕೆಜೆಪಿ ಅಸ್ಥಿತ್ವದಲ್ಲಿಲ್ಲದ ಕಾರಣ ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡ್ರಗೆ ವರದಾನವಾಬಹುದು.
2013 ರ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ನ ಸಿ.ಎಸ್.ಶಿವಳ್ಳಿ ಅವರು 52690 ಮತ ಪಡೆದಿದ್ದರೆ, ಕೆಜೆಪಿ(ಈಗ ಬಿಜೆಪಿಯಲ್ಲಿರು)ಯ ಚಿಕ್ಕನಗೌಡ್ರ 31618 ಮತ ಗಳಿಸಿದ್ದರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications