ಕುಂದಗೋಳ: ಕೆಜೆಪಿ-ಬಿಜೆಪಿ ವಿಲೀನ ಕಾಂಗ್ರೆಸ್ ಗೆ ಏಟು ಕೊಟ್ಟೀತಾ!?
ಇತಿಹಾಸ ಪ್ರಸಿದ್ಧ ಕುಂದಗೋಳ ಕ್ಷೇತ್ರ ಕಲೆ ಮತ್ತು ಸಂಗೀತಕ್ಕಾಗಿ ಸಾಕಷ್ಟು ಹೆಸರುವಾಸಿಯಾಗಿತ್ತು. ಗಂಗೂಬಾಯಿ ಹಾನಗಲ್ ಮತ್ತು ಭೀಮಸೇನ ಜೋಶಿಯವರಂಥ ಗಾನಮಾಂತ್ರಿಕರಿಗೆ ಸಂಗೀತ ಕಲಿಸಿದ ಗುರುಗಳಾದ ಹಿಂದುಸ್ತಾನ ಸಂಗೀತ ದಿಗ್ಗಜರಾದ ಪಂ.ಸವಾಯಿ ಗಂಧರ್ವ ಅವರ ಮೂಲ ಊರು ಕುಂದಗೋಳ.
ಇಲ್ಲಿಯ ಶಂಭುಲಿಂಗ ದೇವಾಲಯ ಚಾಲುಕ್ಯ ಶೈಲಿಯಲ್ಲಿ ನಿರ್ಮಿತವಾಗಿದ್ದು, ಸಭಾಮಂಟಪದ ವೃತ್ತಿನಲ್ಲಿ ಅಷ್ಟದಿಕ್ಪಾಲಕರನ್ನು ಕೆತ್ತಲಾಗಿದೆ. ಹೊರಬದಿಯಲ್ಲಿ ಕೀರ್ತಿ ಮುಖಗಳಿವೆ. ಗರ್ಭಗುಡಿಯಲ್ಲಿ ಶಿವಲಿಂಗವೂ ಮುಂಭಾಗದ ಕೋಣೆಯ ಎಡಬಲಗಳಲ್ಲಿ ಪಾರ್ವತಿ ವಿಘ್ನೇಶ್ವರರ ವಿಗ್ರಹಗಳೂ ಇವೆ. ಬ್ರಹ್ಮದೇವರ ಗುಡಿ, ದತ್ತಾತ್ರೇಯಗುಡಿ, ಶಂಕರಾಚಾರ್ಯರ ಗುಡಿ ಹಾಗೂ ಮಲ್ಲಿಕಾರ್ಜುನ ಗುಡಿಸೇರಿದಂತೆ ಹಲವು ದೇವಾಲಯಗಳು ಇಲ್ಲಿವೆ.
ಇಲ್ಲಿಚಾಲುಕ್ಯ, ಕಳಚುರಿ ಮತ್ತು ವಿಜಯನಗರ ಕಾಲಗಳಿಗೆ ಸೇರಿದ ಹನ್ನೊಂದಕ್ಕೂ ಹೆಚ್ಚು ಶಿಲಾಶಾಸನಗಳು ಪತ್ತೆಯಾಗಿವೆ. ಇತಿಹಾಸ ತಾಣಗಳ ಮೂಲಕ ಹಲವು ಪ್ರವಾಸಿಗರನ್ನು ತನ್ನತ್ತ ಸೆಳೆವ ಕುಂದಗೋಳ ಧಾರವಾಡದ ಪ್ರಮುಖ ತಾಣಗಳಲ್ಲೊಂದು.

ಈ ತಾಣದ ರಾಜಕೀಯ ಚಿತ್ರಣವನ್ನು ಅವಲೋಕಿಸುವುದಾದರೆ, 2013 ರ ಚುನಾವಣೆಯಲ್ಲಿ ಕೆಜೆಪಿ ಮತ್ತು ಬಿಜೆಪಿ ಕಲಹದಿಂದ ಲಾಭ ಪಡೆದ ಕಾಂಗ್ರೆಸ್ ನ ಕುರುಬ ಸಮುದಾಯದ ಸಿ. ಎಸ್.ಶಿವಳ್ಳಿ ಕಳೆದ ಬಾರಿ ಗೆದ್ದಿದ್ದರು. ಈ ಭಾಗದಲ್ಲಿ ಲಿಂಗಾಯತರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿರುವುದರಿಂದ ಲಿಂಗಾಯತ ಮತಗಳು ಯಾರನ್ನು ಸೆಳೆಯಲಿವೆ ಎಂಬುದು ಮುಖ್ಯ ಪ್ರಶ್ನೆಯಾಗಿದೆ.
2018 ರ ಚುನಾವಣೆಯಲ್ಲಿ ಕೆಜೆಪಿ ಅಸ್ಥಿತ್ವದಲ್ಲಿಲ್ಲದ ಕಾರಣ ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡ್ರಗೆ ವರದಾನವಾಬಹುದು.
2013 ರ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ನ ಸಿ.ಎಸ್.ಶಿವಳ್ಳಿ ಅವರು 52690 ಮತ ಪಡೆದಿದ್ದರೆ, ಕೆಜೆಪಿ(ಈಗ ಬಿಜೆಪಿಯಲ್ಲಿರು)ಯ ಚಿಕ್ಕನಗೌಡ್ರ 31618 ಮತ ಗಳಿಸಿದ್ದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications