ಕ್ಷೇತ್ರ ಪರಿಚಯ : ಲಿಂಗಸಗೂರು ಕ್ಷೇತ್ರದಲ್ಲಿ ಯಾರಿಗೆ ಜಯ?
ರಾಯಚೂರು ಜಿಲ್ಲೆಯ ವಿಧಾನಸಭಾ ಕ್ಷೇತ್ರ ಲಿಂಗಸಗೂರು. ಹಲವಾರು ದೇವಾಲಯಗಳು, ಬೆಟ್ಟ ಕ್ಷೇತ್ರದ ಪ್ರಮುಖ ಆಕರ್ಷಣೆ. ಮುದಗಲ್ ನಲ್ಲಿರುವ ಪುರಾತನ ಕೋಟೆ ಪ್ರಸಿದ್ಧಿ ಪಡೆದಿದೆ.
ಲಿಂಗಸಗೂರಿನಿಂದ ಬೆಂಗಳೂರು, ಹುಬ್ಬಳ್ಳಿ, ಹೈದರಾಬಾದ್ಗಳಿಗೆ ಉತ್ತಮ ಸಾರಿಗೆ ವ್ಯವಸ್ಥೆ ಇದೆ. ಹೈದರಾಬಾದ್ ವಿಮಾನ ನಿಲ್ದಾಣ ಕ್ಷೇತ್ರಕ್ಕೆ ತುಂಬಾ ಹತ್ತಿರವಾಗಿದೆ. ಪಟ್ಟಣ್ಣದಿಂದ ವಿವಿಧ ಗ್ರಾಮಗಳಿಗೆ ಹಲವು ಕೆಎಸ್ಆರ್ಟಿಸಿ ಬಸ್ಸುಗಳು ಸಂಚಾರ ನಡೆಸುತ್ತವೆ.
ಪಟ್ಟಣ್ಣದ ಹೊರವಲಯದಲ್ಲಿ ತುಂಗಭದ್ರಾ ಎಡದಂಡೆ ಕಾಲುವೆ ಹರಿಯುತ್ತದೆ. ಕೆರೆಗಳಿಗೆ ನೀರನ್ನು ಹರಿಸಿ ಕುಡಿಯುವ ನೀರು ಒದಗಿಸಲಾಗುತ್ತದೆ. ಕ್ಷೇತ್ರದ ವ್ಯಾಪ್ತಿಯ ಹಲವು ಗ್ರಾಮಗಳ ಜನರು ಕುಡಿಯುವ ನೀರಿಗಾಗಿ ಪರದಾಡುವುದು ತಪ್ಪಿಲ್ಲ.

ವಿಶ್ವಸಂಸ್ಥೆಯ ವರದಿ ಪ್ರಕಾರ ದಕ್ಷಿಣ ಭಾರತದಲ್ಲಿ ಅಂತರ್ ಜಲದಲ್ಲಿ ಆರ್ಸೆನಿಕ್ ಕಂಡುಬಂದಿರುವುದು ರಾಯಚೂರು ಜಿಲ್ಲೆಯಲ್ಲಿ. ಅದರಲ್ಲಿ ಹಲವು ಗ್ರಾಮಗಳು ಲಿಂಗಸಗೂರು ಕ್ಷೇತ್ರಕ್ಕೆ ಸೇರಿವೆ.
ರಾಜಕೀಯವಾಗಿ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಏಕೈಕ ಕ್ಷೇತ್ರ ಲಿಂಗಸಗೂರು. ಜೆಡಿಎಸ್ ವಶದಲ್ಲಿದೆ ಕ್ಷೇತ್ರ, ಬೋವಿ ಸಮುದಾಯದ ಮಾನಪ್ಪ ವಜ್ಜಲ್ ಶಾಸಕರಾಗಿದ್ದರು. ಕೆಲವು ದಿನಗಳ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ.
2008ರಲ್ಲಿ ಬಿಜೆಪಿ ಗೆದ್ದಿದ್ದ ಕ್ಷೇತ್ರವನ್ನು ಜೆಡಿಎಸ್ ಕೈವಶ ಮಾಡಿಕೊಳ್ಳಲು ಕಾರಣ ಬಿಜೆಪಿ-ಕೆಜೆಪಿ ನಡುವಿನ ಮತ ಹಂಚಿಕೆ. ವಜ್ಜಲ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿಯಲಿದ್ದಾರೆ. ಕಾಂಗ್ರೆಸ್ ಟಿಕೆಟ್ಗಾಗಿ ಎ.ವಸಂತ ಕುಮಾರ್ ಪ್ರಯತ್ನ ನಡೆಸುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಪ್ತರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಎಂಎಲ್ಸಿ ಎನ್.ಎಸ್.ಬೋಸರಾಜು ಅವರು ವಸಂತ ಕುಮಾರ್ ಅವರಿಗೆ ಟಿಕೆಟ್ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪ್ರಭಾವಿ ನಾಯಕ ಎಂದು ಹೆಸರುಗಳಿಸಿರುವ ಬಿ.ಎಫ್.ಹೂಲಿಗೇರಿ ಅವರ ಹೆಸರು ಟಿಕೆಟ್ಗೆ ಕೇಳಿಬರುತ್ತಿದೆ.
ಬಿಜೆಪಿಯಲ್ಲಿ ಕುಳಸಿದ್ದು ಬಂಡಿ ಅವರ ಹೆಸರು ಕೇಳಿಬರುತ್ತಿದೆ. ಆದರೆ, ಗೋವಿಂದ ಕಾರಜೋಳ ಅವರ ಪುತ್ರ ರವಿ ಕಾರಜೋಳರಿಗೆ ಟಿಕೆಟ್ ಕೊಡಿಸುವ ಪ್ರಯತ್ನವೂ ನಡೆದಿದೆ. ಕ್ಷೇತ್ರವನ್ನು ಉಳಿಸಿಕೊಳ್ಳಲು, ವಜ್ಜಲ್ಗೆ ಪಾಠ ಕಲಿಸಲು ಜೆಡಿಎಸ್ ಯಾರಿಗೆ ಟಿಕೆಟ್ ನೀಡಲಿದೆ? ಎಂಬುದು ಕುತೂಹಲದ ಪ್ರಶ್ನೆ.
2013ರ ಚುನಾವಣೆಯಲ್ಲಿ ಮಾನಪ್ಪ ವಜ್ಜಲ್ 31,737, ಕಾಂಗ್ರೆಸ್ನ ಡಿ.ಎಸ್.ಹೂಲಗೇರಿ 30,451, ಬಿಜೆಪಿಯ ಟಿ.ಆರ್.ನಾಯಕ್ 13,545 ಮತಗಳನ್ನು ಪಡೆದಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications