ಕ್ಷೇತ್ರ ಪರಿಚಯ : ಜೆಡಿಎಸ್ ವಶದಲ್ಲಿರುವ ಕ್ಷೇತ್ರ ಮಹಾಲಕ್ಷ್ಮೀ ಲೇಔಟ್
ಬಡ ಮತ್ತು ಮಧ್ಯಮ ಮರ್ಗದ ಜನರು ಹೆಚ್ಚಾಗಿ ನೆಲೆಸಿರುವ ಕ್ಷೇತ್ರ ಮಹಾಲಕ್ಷ್ಮೀ ಲೇಔಟ್. ರಾಜಕೀಯವಾಗಿ ಜೆಡಿಎಸ್ ವಶದಲ್ಲಿರುವ ಕ್ಷೇತ್ರವಿದು. ಬಿಜೆಪಿ ಮತ್ತು ಕಾಂಗ್ರೆಸ್ ಜೆಡಿಎಸ್ ಗೆಲುವಿನ ಓಟಕ್ಕೆ ತಡೆ ಹಾಕಲು ತಂತ್ರ ರೂಪಿಸುತ್ತಿವೆ.
ಮಹಾಲಕ್ಷ್ಮೀ ಲೇಔಟ್, ಶಾರದಾ ಕಾಲೋನಿ, ಹೌಸಿಂಗ್ ಬೋರ್ಡ್, ಕಾಮಾಕ್ಷಿಪಾಳ್ಯ, ಡಾ.ರಾಜ್ ಸಮಾಧಿ, ರಾಜಾಜಿನಗರ ಮೊದಲನೇ ಬ್ಲಾಕ್, ನಂದಿನಿ ಲೇಔಟ್ ಕುರುಬರಹಳ್ಳಿ ಸೇರಿದಂತೆ ವಿವಿಧ ಬಡಾವಣೆಗಳು ಕ್ಷೇತ್ರದ ವ್ಯಾಪ್ತಿಗೆ ಬರುತ್ತವೆ.
ವಾರ್ಡ್ಗಳು : ನಂದಿನಿ ಲೇಔಟ್, ಮಾರಪ್ಪನಪಾಳ್ಯ, ನಾಗಪುರ, ಮಹಾಲಕ್ಷ್ಮೀಪುರಂ, ಶಕ್ತಿ ಗಣಪತಿ ನಗರ, ಶಂಕರಮಠ, ವೃಷಭಾವತಿ ನಗರ ವಾರ್ಡ್ಗಳು ಕ್ಷೇತ್ರದ ವ್ಯಾಪ್ತಿಗೆ ಬರುತ್ತವೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 7 ವಾರ್ಡ್ಗಳಲ್ಲಿ 4 ವಾರ್ಡ್ಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ನಾಯಕರು ಜಯಗಳಿಸಿದ್ದಾರೆ.

ಕ್ಷೇತ್ರದ ಕಾಂಗ್ರೆಸ್ ನಾಯಕರಾಗಿದ್ದ ನೆ.ಲ.ನರೇಂದ್ರ ಬಾಬು ಅವರು ಬಿಜೆಪಿ ಸೇರಿದ್ದು ಕ್ಷೇತ್ರದ ರಾಜಕೀಯ ಚಿತ್ರವಣವನ್ನು ಬದಲಾವಣೆ ಮಾಡಿದೆ. ಈ ಬಾರಿಯ ಚುನಾವಣೆಯಲ್ಲಿ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಟಿಕೆಟ್ ರಾಜಕೀಯ
ಕ್ಷೇತ್ರ ಜಾತಿ ಲೆಕ್ಕಾಚಾರ : ಒಕ್ಕಲಿಗರು 80,000, ಹಿಂದುಳಿದ ವರ್ಗ 50,000, ಎಸ್ಸಿ 30,000, ಲಿಂಗಾಯತ 22,000, ಮುಸ್ಲಿಂ 7000
2013ರ ಚುನಾವಣೆ ಫಲಿತಾಂಶ : ಕಳೆದ ಚುನಾವಣೆಯಲ್ಲಿ ಜೆಡಿಎಸ್ನ ಕೆ.ಗೋಪಾಲಯ್ಯ ಅವರು 66,127 ಮತ ಪಡೆದು ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ನೆ.ಲ.ನರೇಂದ್ರ ಬಾಬು 50,757 ಮತ್ತು ಬಿಜೆಪಿ ಅಭ್ಯರ್ಥಿ ಎಸ್.ಹರೀಶ್ 23,545 ಮತಗಳನ್ನು ಪಡೆದಿದ್ದರು.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ












Click it and Unblock the Notifications