ಕ್ಷೇತ್ರ ಪರಿಚಯ : ಸಕ್ಕರೆ ನಾಡು ಮಂಡ್ಯಕ್ಕೆ ಯಾರು ಹೊಸ ಅಧಿಪತಿ?
ಇಡೀ ಕರ್ನಾಟಕದಲ್ಲಿ ಅತಿ ಹೆಚ್ಚು ಒಕ್ಕಲಿಗರನ್ನು ಹೊಂದಿರುವ ಜಿಲ್ಲೆಯೆಂದರೆ ಅದು ಮಂಡ್ಯ ಮಾತ್ರ. ಸ್ವಾತಂತ್ರ್ಯ ಪೂರ್ವದಲ್ಲಿ ಮೈಸೂರಿನ ತಾಲೂಕು ಆಗಿದ್ದ ಮಂಡ್ಯವನ್ನು ಆನಂತರ, ಆಡಳಿತಾತ್ಮಕ ದೃಷ್ಟಿಯಿಂದ ವಿಭಜಿಸಿ ಪ್ರತ್ಯೇಕ ಜಿಲ್ಲೆಯನ್ನಾಗಿಸಿತು.
ಇಡೀ ಕರ್ನಾಟಕದಲ್ಲಿ ಅತಿ ಹೆಚ್ಚು ಒಕ್ಕಲಿಗರನ್ನು ಹೊಂದಿರುವ ಜಿಲ್ಲೆಯೆಂದರೆ ಅದು ಮಂಡ್ಯ ಮಾತ್ರ. ಬರದ ನಾಡಾಗಿದ್ದ ಜಿಲ್ಲೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕೃಷ್ಣರಾಜ ಸಾಗರ ಅಣೆಕಟ್ಟು ಕಟ್ಟಿ ಮಂಡ್ಯ ಜಿಲ್ಲೆಯಲ್ಲಿ ಹಸಿರು ತುಂಬಿ ತುಳುಕುವಂತೆ ಮಾಡಿದರು.
ಎಸ್ಸೆಂ ಕೃಷ್ಣ ಅವರಂಥ ರಾಷ್ಟ್ರಮಟ್ಟದ ರಾಜಕಾರಣಿ, ಅಂಬರೀಷ್ ರಂಥ ಜನಪ್ರಿಯ ನಾಯಕ, ಕೆ.ಎಸ್ ಪುಟ್ಟಣ್ಣಯ್ಯ ರಂಥ್ ರೈತ ಮುಖಂಡರನ್ನು ನೀಡಿದೆ. ಪ್ರಸಕ್ತ ರಾಜಕೀಯ ಸನ್ನಿವೇಶದಲ್ಲಿ ಮಂಡ್ಯ ಜಿಲ್ಲೆ ಜೆಡಿಎಸ್ ಪಕ್ಷದ ಭದ್ರಕೋಟೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ 4 ಕ್ಷೇತ್ರಗಳಲ್ಲಿ ಜಯ ಸಾಧಿಸಿತ್ತು.
ಮಂಡ್ಯ ಕ್ಷೇತ್ರಕ್ಕೆ ಹಾಲಿ ಶಾಸಕ ಅಂಬರೀಶ್ ಅವರು ಅಭ್ಯರ್ಥಿ ಎಂದು ತೀರ್ಮಾನಿಸಲಾಗಿತ್ತು. ಆದರೆ, ಅಂಬರೀಶ್ ಅವರು ಚುನಾವಣೆ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಕಾಂಗ್ರೆಸ್ಸಿನಿಂದ ಗಣಿಗ ರವಿ ಕಣಕ್ಕಿಳಿದಿದ್ದಾರೆ.

ಪ್ರಾತಃ ಸ್ಮರಣೀಯ ನಾಲ್ವಡಿ ಕೃಷ್ಣರಾಜ ಒಡೆಯರ್
ಮಂಡ್ಯ ಜಿಲ್ಲೆಯ ಜನರು ನಿಜಕ್ಕೂ ಸ್ಮರಿಸಬೇಕಾದ್ದದ್ದು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು. ಬರದ ನಾಡಾಗಿದ್ದ ಜಿಲ್ಲೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕೃಷ್ಣರಾಜ ಸಾಗರ ಅಣೆಕಟ್ಟು ಕಟ್ಟಿ ಮಂಡ್ಯ ಜಿಲ್ಲೆಯಲ್ಲಿ ಹಸಿರು ತುಂಬಿ ತುಳುಕುವಂತೆ ಮಾಡಿದರು.
ಶ್ರೀರಂಗಪಟ್ಟಣ ತಾಲೂಕಿನಲ್ಲಿ 1912ರಲ್ಲಿ ಆರಂಭಗೊಂಡಿದ್ದ ಅಣೆಕಟ್ಟು, 1935ರ ವೇಳೆಗೆ ಪೂರ್ಣಗೊಂಡು ಈ ಭಾಗದ ರೈತರ ಜೀವನಾಡಿಯಾಯಿತು

ಜೆಡಿಎಸ್ ಇನ್ನಿಲ್ಲದ್ದಂತೆ ಯತ್ನಿಸುತ್ತಿದೆ.
ಪ್ರಸಕ್ತ ರಾಜಕೀಯ ಸನ್ನಿವೇಶದಲ್ಲಿ ಮಂಡ್ಯ ಜಿಲ್ಲೆ ಜೆಡಿಎಸ್ ಪಕ್ಷದ ಭದ್ರಕೋಟೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ 4 ಕ್ಷೇತ್ರಗಳಲ್ಲಿ ಜಯ ಸಾಧಿಸಿತ್ತು. ಆದರೆ, ಮಂಡ್ಯದಲ್ಲಿ ಕಾಂಗ್ರೆಸ್ಸಿಗೆ ಅಂಬರೀಷ್ ಅವರ ಬಲವಿತ್ತು. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಅಂಬರೀಷ್ ಅವರು ಬೆಂಬಲಿಸುತ್ತಾರೋ ಇಲ್ಲವೋ ಕಾದು ನೋಡಬೇಕಿದೆ. ಮಂಡ್ಯ ಕ್ಷೇತ್ರವನ್ನು ವಶಕ್ಕೆ ಪಡೆಯಲು ಜೆಡಿಎಸ್ ಇನ್ನಿಲ್ಲದ್ದಂತೆ ಯತ್ನಿಸುತ್ತಿದೆ.

ಮಂಡ್ಯದಲ್ಲಿನ ಮತದಾರರು
ಮಂಡ್ಯ ಜಿಲ್ಲೆ ಮಳವಳ್ಳಿ, ಮದ್ದೂರು, ಮೇಲುಕೋಟೆ, ಮಂಡ್ಯ, ಶ್ರೀರಂಗಪಟ್ಟಣ, ನಾಗಮಂಗಲ, ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ.
ಏಳು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 14,61,031 ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿದ್ದಾರೆ. ಮಂಡ್ಯದಲ್ಲಿ 2,21,555 (1,09,834 ಪುರುಷ, 1,11,721 ಮಹಿಳೆ) ಮತದಾರರಿದ್ದಾರೆ. ಒಕ್ಕಲಿಗರ ಮತಗಳು ಇಲ್ಲಿ ನಿರ್ಣಾಯಕ.

2013ರ ಫಲಿತಾಂಶ
ಒಟ್ಟು 22 ಮಂದಿ ನಾಮಪತ್ರ ಸಲ್ಲಿಸಿದ್ದರು ಈ ಪೈಕಿ ಮೂವರು ನಾಮಪತ್ರ ಹಿಂಪಡೆದರು. 19 ಮಂದಿ ಸ್ಪರ್ಧಿಗಳ ಪೈಕಿ 17 ಮಂದಿ ಠೇವಣಿ ಕಳೆದುಕೊಂಡರು.
ಶೇ 68.58ರಷ್ಟು ಮತದಾನವಾಗಿತ್ತು. ಸುಮಾರು 152818 ಮತಗಳ ಪೈಕಿ ಕಾಂಗ್ರೆಸ್ ಅಭ್ಯರ್ಥಿ ಎಂ.ಎಚ್ ಅಂಬರೀಷ್ ಅವರು 90329 ಮತಗಳನ್ನು ಪಡೆದುಕೊಂಡು 42937 ಮತಗಳ (ಶೇ 28.10) ಅಂತರದಿಂದ ಜೆಡಿಎಸ್ ನ ಎಂ ಶ್ರೀನಿವಾಸ (47392 ಮತಗಳು) ಅವರನ್ನು ಸುಲಭವಾಗಿ ಸೋಲಿಸಿದ್ದರು.-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications