ಮಂಗಳೂರು ಕ್ಷೇತ್ರ ಪರಿಚಯ: ಖಾದರ್ ಅಶ್ವಮೇಧಕ್ಕೆ ತಡೆ ಸಾಧ್ಯವೇ?
ಹಿಂದಿನ ಉಳ್ಳಾಲ ಕ್ಷೇತ್ರ ಮತ್ತು ಬೇರೆ ಒಂದಷ್ಟು ಪ್ರದೇಶಗಳನ್ನು ಸೇರ್ಪಡೆ ಮತ್ತು ತೆರವುಗೊಳಿಸಿ ಈಗಿನ ಮಂಗಳೂರನ್ನು 2008ರಲ್ಲಿ ರಚಿಸಲಾಯಿತು. ಉಳ್ಳಾಲ ದೇಶದ ಹಳೇ ನಗರಗಳಲ್ಲಿ ಒಂದು. ರಾಣಿ ಅಬ್ಬಕ್ಕ ಪೋರ್ಚುಗೀಸರನ್ನು ಎದುರಿಸಿದ್ದು ಇದೇ ನಗರದಲ್ಲಿ. ಅರಬ್ಬೀ ಸಮುದ್ರಕ್ಕೆ ಹೊಂದಿಕೊಂಡ ಉಳ್ಳಾಲದಲ್ಲಿ ಸೋಮೇಶ್ವರ ಬೀಚ್, ಜುಮ್ಮಾ ಮಸೀದಿಗಳು ಬರುತ್ತವೆ.
ಮಂಗಳೂರು ತಾಲೂಕು ವ್ಯಾಪ್ತಿಗೆ ಬರುವ ಇಲ್ಲಿ ಮುಸ್ಲಿಂ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಕಾರಣಕ್ಕೆ 1994ರಲ್ಲಿ ಮಾತ್ರ ಇಲ್ಲಿ ಹಿಂದೂ ಧರ್ಮೀಯರಾದ ಕೆ. ಜಯರಾಮ ಶೆಟ್ಟಿ ಬಿಜೆಪಿಯಿಂದ ಗೆಲುವು ಸಾಧಿಸಿದ್ದರು. ಇದೊಂದು ಅವಧಿ ಬಿಟ್ಟರೆ ಇಲ್ಲಿನ ಜನ ಮುಸ್ಲಿಂ ಅಭ್ಯರ್ಥಿಗಳನ್ನೇ ಎತ್ತಿ ಆಡಿಸುತ್ತಾ ಬಂದಿದ್ದಾರೆ.

ಕಾಂಗ್ರೆಸ್ ಪಾಲಿಗೆ ಉಳ್ಳಾಲ ಭದ್ರಕೋಟೆ. 1994ರಲ್ಲಿ ಇಲ್ಲಿ ಕಮಲ ಅರಳಿದ್ದು ಬಿಟ್ಟರೆ ಇತ್ತೀಚಿನ ಎಲ್ಲಾ ಚುನಾವಣೆಗಳಲ್ಲೂ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. 1962 ಮತ್ತು 1983ರಲ್ಲಿ ಇಲ್ಲಿ ಸಿಪಿಐ ಮತ್ತು ಸಿಪಿಎಂ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು ಎಂಬುದೂ ವಿಶೇಷ.
ಈ ಕ್ಷೇತ್ರದ ಜತೆಗೆ ಹಾಲಿ ಶಾಸಕ ಯು.ಟಿ. ಖಾದರ್ ಕುಟುಂಬ ಸಾಕಷ್ಟು ಒಡನಾಟ ಇಟ್ಟುಕೊಂಡಿದೆ. ಇಲ್ಲಿ ಖಾದರ್ ತಂದೆ ಯು.ಟಿ ಫರೀದ್ 1972, 1978, 1999ಮತ್ತು 2004ರಲ್ಲಿ ಗೆಲುವು ಸಾಧಿಸಿದ್ದರು.
2004ರಲ್ಲಿ ಗೆದ್ದ ನಂತರ ಫರೀದ್ 2007ರಲ್ಲಿ ನಿಧನರಾದರು. ಆಗ ಅವರ ಜಾಗದಲ್ಲಿ ಮಗ ಯು.ಟಿ. ಖಾದರ್ ರನ್ನು ಕಾಂಗ್ರೆಸ್ ಕಣಕ್ಕಿಳಿಸಿತು. ಈ ಚುನಾವಣೆಯಲ್ಲಿ ಖಾದರ್ ಗೆದ್ದರು.
ಮುಂದೆ 2008ರಲ್ಲಿ ಕ್ಷೇತ್ರ ಮರು ವಿಂಗಡಣೆ ನಂತರ ಉಳ್ಳಾಲ ಹೋಗಿ ಮಂಗಳೂರಾಯಿತು. ಹೆಸರು ಪ್ರದೇಶ ಬದಲಾದರೇನಂತೆ 2008 ಮತ್ತು 2013ರಲ್ಲೂ ಖಾದರ್ ಇಲ್ಲಿ ಗೆಲುವು ಸಾಧಿಸಿದರು. ಈ ಮೂಲಕ 1994ರ ನಂತರ ಕಳೆದ 6 ಚುನಾವಣೆಗಳಲ್ಲಿ ಆರನ್ನೂ ಖಾದರ್ ಕುಟುಂಬ ಗೆದ್ದಿದೆ.
ಸದ್ಯ ಕಾಂಗ್ರೆಸ್ ಸರಕಾರದಲ್ಲಿ ಪ್ರಭಾವಿ ಸಚಿವರಾಗಿರುವ ಖಾದರ್ 2007ರಲ್ಲಿ ಗೆದ್ದಾಗ ಇದ್ದ 6 ಸಾವಿರ ಮತಗಳ ಅಂತರವನ್ನು 2013ರ ಹೊತ್ತಿಗೆ ಬರೋಬ್ಬರಿ 29 ಸಾವಿರಕ್ಕೆ ಹೆಚ್ಚಿಸಿಕೊಂಡಿದ್ದಾರೆ. ಈ ಚುನಾವಣೆಯಲ್ಲಿ ಖಾದರ್ 69,450 ಮತಗಳನ್ನು ಪಡೆದರೆ ಬಿಜೆಪಿಯ ಚಂದ್ರಹಾಸ್ ಉಳ್ಳಾಲ್ 40,339 ಮತಗಳನ್ನು ಪಡೆದಿದ್ದರು. ಈ ಬಾರಿಯೂ ಅವರ ಗೆಲುವು ಬಹುತೇಕ ನಿರ್ಧಾರವಾಗಿದೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications