ಕ್ಷೇತ್ರ ಪರಿಚಯ : ಮಸ್ಕಿಯಲ್ಲಿ ಗೆಲುವಿನ ಸಿಹಿ ಯಾರಿಗೆ?
ಅಶೋಕ ಚಕ್ರವರ್ತಿ ಶಿಲಾ ಶಾಸನ ಹೊಂದಿರುವ ಐತಿಹಾಸಿಕ ಕ್ಷೇತ್ರ ಮಸ್ಕಿ. ಮಸ್ಕಿಯನ್ನು ತಾಲೂಕು ಕೇಂದ್ರವಾಗಿ ಮಾಡಬೇಕು ಎನ್ನುವ ಬೇಡಿಕೆ 2018ರ ಜನವರಿ 1ರಂದು ಈಡೇರಿದೆ.
ದೇವನಾಂಪಿಯ ಅಶೋಕ ಎಂಬ ಶಾಸನವು ಕ್ಷೇತ್ರದಲ್ಲಿದೆ. 1951ರಲ್ಲಿ ಗಣಿ ಇಂಜಿನಿಯರ್ ಆಗಿದ್ದ ಸಿ.ಬಿಡನ್ ಅವರು ಶಾಸನ ಪತ್ತೆ ಹಚ್ಚಿದ್ದರು. ಬ್ರಾಹ್ಮಿಲಿಪಿಯಲ್ಲಿ ಕೆತ್ತಲಾಗಿರುವ ಶಾಸನವಿದಾಗಿದೆ.
ಅನೇಕ ವೀರಗಲ್ಲುಗಳು, ಶಾಸನಗಳು ಕ್ಷೇತ್ರದಲ್ಲಿ ಕಾಣಸಿಗುತ್ತವೆ. ಮಸ್ಕಿಯ ಬೆಟ್ಟದ ಮೇಲಿನ ಮಲ್ಲಿಕಾರ್ಜುನ ದೇವಸ್ಥಾನದ ಗೋಡೆ ಮೇಲೆ ಮೂರು ಮುಖವುಳ್ಳ ಹಂಸದ ಚಿತ್ರ ಕೆತ್ತಲಾಗಿದೆ. ದೆಹಲಿಯ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಕೇಂದ್ರ ಇದನ್ನು ಲಾಂಛನವನ್ನಾಗಿ ಮಾಡಿಕೊಂಡಿದೆ.

ರಾಜಕೀಯವಾಗಿ ಹೊಸದಾಗಿ ರಚನೆಯಾದ ವಿಧಾನಸಭಾ ಕ್ಷೇತ್ರ ಮಸ್ಕಿ. 2008ರಲ್ಲಿ ಬಿಜೆಪಿಯ ಪ್ರತಾಪ ಗೌಡ ಪಾಟೀಲರು ಗೆಲುವು ಕಂಡಿದ್ದರು. 2013ರಲ್ಲಿ ಪಕ್ಷಾಂತರ ಮಾಡಿ, ಕಾಂಗ್ರೆಸ್ ಸೇರಿ ಚುನಾವಣೆಯಲ್ಲಿ ಜಯಗಳಿಸಿದ್ದಾರೆ.
ಈ ಬಾರಿ ಅವರು ಪುನಃ ಬಿಜೆಪಿಗೆ ಮರಳಲು ಪ್ರಯತ್ನ ನಡೆಸಿದ್ದಾರೆ. ಆದರೆ, ಇದಕ್ಕೆ ಅಡ್ಡಿಯಾಗಿರುವುದು ಬಿಜೆಪಿಯ ಮಹಾದೇವಪ್ಪ ಗೌಡ. ಎಸ್ಸಿ ಮತ್ತು ಲಿಂಗಾಯತ ಮತದಾರರು ಶಾಸಕರು ಯಾರು? ಎಂಬುದನ್ನು ತೀರ್ಮಾನಿಸುತ್ತಾರೆ.
ಮಸ್ಕಿ ಎಸ್ಟಿ ಮೀಸಲು ಕ್ಷೇತ್ರ. ಆದ್ದರಿಂದ, ಆ ಸಮಯದಾಯದ ಮತಗಳು ಹಂಚಿಕೆಯಾದರೆ, ಯಾರು ಗೆಲ್ಲುತ್ತಾರೆ? ಎಂಬುದನ್ನು ಲೆಕ್ಕಾಚಾರ ಹಾಕುವುದು ಕಷ್ಟವಾಗಲಿದೆ.
ಈ ಬಾರಿಯ ಚುನಾವಣೆಯಲ್ಲಿಯೂ ಪ್ರತಾಪಗೌಡ ಪಾಟೀಲ್, ಬಿಜೆಪಿಯ ಮಹಾದೇವಪ್ಪ ಗೌಡ ನಡುವೆ ಪ್ರಬಲ ಪೈಪೋಟಿ ನಿರೀಕ್ಷಿಸಲಾಗಿದೆ. ಜೆಡಿಎಸ್ನಿಂದ ರಾಜಾ ಸೋಮನಾಥ ನಾಯಕ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.
2013ರ ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ್ ಅವರು 45,552 ಮತಗಳನ್ನು ಪಡೆದಿದ್ದಾರೆ. ಬಿಜೆಪಿಯ ಶಂಕರಕುಮಾರ ಮೇದಾರ ಅವರು 18,197 ಮತ, ಜೆಡಿಎಸ್ನ ಅಮರೀಶ್ 3,488 ಮತಗಳನ್ನು ಪಡೆದಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications