ಕ್ಷೇತ್ರ ಪರಿಚಯ : ಮಸ್ಕಿಯಲ್ಲಿ ಗೆಲುವಿನ ಸಿಹಿ ಯಾರಿಗೆ?
ಅಶೋಕ ಚಕ್ರವರ್ತಿ ಶಿಲಾ ಶಾಸನ ಹೊಂದಿರುವ ಐತಿಹಾಸಿಕ ಕ್ಷೇತ್ರ ಮಸ್ಕಿ. ಮಸ್ಕಿಯನ್ನು ತಾಲೂಕು ಕೇಂದ್ರವಾಗಿ ಮಾಡಬೇಕು ಎನ್ನುವ ಬೇಡಿಕೆ 2018ರ ಜನವರಿ 1ರಂದು ಈಡೇರಿದೆ.
ದೇವನಾಂಪಿಯ ಅಶೋಕ ಎಂಬ ಶಾಸನವು ಕ್ಷೇತ್ರದಲ್ಲಿದೆ. 1951ರಲ್ಲಿ ಗಣಿ ಇಂಜಿನಿಯರ್ ಆಗಿದ್ದ ಸಿ.ಬಿಡನ್ ಅವರು ಶಾಸನ ಪತ್ತೆ ಹಚ್ಚಿದ್ದರು. ಬ್ರಾಹ್ಮಿಲಿಪಿಯಲ್ಲಿ ಕೆತ್ತಲಾಗಿರುವ ಶಾಸನವಿದಾಗಿದೆ.
ಅನೇಕ ವೀರಗಲ್ಲುಗಳು, ಶಾಸನಗಳು ಕ್ಷೇತ್ರದಲ್ಲಿ ಕಾಣಸಿಗುತ್ತವೆ. ಮಸ್ಕಿಯ ಬೆಟ್ಟದ ಮೇಲಿನ ಮಲ್ಲಿಕಾರ್ಜುನ ದೇವಸ್ಥಾನದ ಗೋಡೆ ಮೇಲೆ ಮೂರು ಮುಖವುಳ್ಳ ಹಂಸದ ಚಿತ್ರ ಕೆತ್ತಲಾಗಿದೆ. ದೆಹಲಿಯ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಕೇಂದ್ರ ಇದನ್ನು ಲಾಂಛನವನ್ನಾಗಿ ಮಾಡಿಕೊಂಡಿದೆ.

ರಾಜಕೀಯವಾಗಿ ಹೊಸದಾಗಿ ರಚನೆಯಾದ ವಿಧಾನಸಭಾ ಕ್ಷೇತ್ರ ಮಸ್ಕಿ. 2008ರಲ್ಲಿ ಬಿಜೆಪಿಯ ಪ್ರತಾಪ ಗೌಡ ಪಾಟೀಲರು ಗೆಲುವು ಕಂಡಿದ್ದರು. 2013ರಲ್ಲಿ ಪಕ್ಷಾಂತರ ಮಾಡಿ, ಕಾಂಗ್ರೆಸ್ ಸೇರಿ ಚುನಾವಣೆಯಲ್ಲಿ ಜಯಗಳಿಸಿದ್ದಾರೆ.
ಈ ಬಾರಿ ಅವರು ಪುನಃ ಬಿಜೆಪಿಗೆ ಮರಳಲು ಪ್ರಯತ್ನ ನಡೆಸಿದ್ದಾರೆ. ಆದರೆ, ಇದಕ್ಕೆ ಅಡ್ಡಿಯಾಗಿರುವುದು ಬಿಜೆಪಿಯ ಮಹಾದೇವಪ್ಪ ಗೌಡ. ಎಸ್ಸಿ ಮತ್ತು ಲಿಂಗಾಯತ ಮತದಾರರು ಶಾಸಕರು ಯಾರು? ಎಂಬುದನ್ನು ತೀರ್ಮಾನಿಸುತ್ತಾರೆ.
ಮಸ್ಕಿ ಎಸ್ಟಿ ಮೀಸಲು ಕ್ಷೇತ್ರ. ಆದ್ದರಿಂದ, ಆ ಸಮಯದಾಯದ ಮತಗಳು ಹಂಚಿಕೆಯಾದರೆ, ಯಾರು ಗೆಲ್ಲುತ್ತಾರೆ? ಎಂಬುದನ್ನು ಲೆಕ್ಕಾಚಾರ ಹಾಕುವುದು ಕಷ್ಟವಾಗಲಿದೆ.
ಈ ಬಾರಿಯ ಚುನಾವಣೆಯಲ್ಲಿಯೂ ಪ್ರತಾಪಗೌಡ ಪಾಟೀಲ್, ಬಿಜೆಪಿಯ ಮಹಾದೇವಪ್ಪ ಗೌಡ ನಡುವೆ ಪ್ರಬಲ ಪೈಪೋಟಿ ನಿರೀಕ್ಷಿಸಲಾಗಿದೆ. ಜೆಡಿಎಸ್ನಿಂದ ರಾಜಾ ಸೋಮನಾಥ ನಾಯಕ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.
2013ರ ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ್ ಅವರು 45,552 ಮತಗಳನ್ನು ಪಡೆದಿದ್ದಾರೆ. ಬಿಜೆಪಿಯ ಶಂಕರಕುಮಾರ ಮೇದಾರ ಅವರು 18,197 ಮತ, ಜೆಡಿಎಸ್ನ ಅಮರೀಶ್ 3,488 ಮತಗಳನ್ನು ಪಡೆದಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications