ಕ್ಷೇತ್ರ ಪರಿಚಯ: ಬಿಜೆಪಿಗೆ ಒಲಿಯದ ಕಾಂಗ್ರೆಸ್ ಭದ್ರಕೋಟೆ ಮೂಡಬಿದಿರೆ
ಮಂಗಳೂರು ತಾಲೂಕಿಗೆ ಒಳಪಡುವ ವಿಧಾನಸಭಾ ಕ್ಷೇತ್ರವಿದು. ಸದ್ಯ ಮೂಡಬಿದಿರೆ ತಾಲೂಕಾಗಿದೆ. ಜಿಲ್ಲಾ ಕೇಂದ್ರ ಮಂಗಳೂರಿನಿಂದ 34 ಕಿಲೋ ಮೀಟರ್ ದೂರದಲ್ಲಿದೆ. ಸಾವಿರ ಕಂಬದ ಬಸದಿ, ಆಳ್ವಾಸ್ ಶಿಕ್ಷಣ ಸಂಸ್ಥೆಗಳು, ಇನ್ನೂ ಹಲವಾರು ಕಾಲೇಜುಗಳನ್ನು ಹೊಂದಿರುವ ಆಧುನಿಕ ಶಿಕ್ಷಣ ಕಾಶಿ ಮೂಡಬಿದಿರೆ.
ಕರಾವಳಿ ಜಿಲ್ಲೆಗಳಲ್ಲಿ ಕೆರೆಗಳು ಅಪರೂಪವಾದರೂ ಮೂಡಬಿದಿರೆ ಅದಕ್ಕೆ ಅಪವಾದ. ಇಲ್ಲಿ 18 ಕೆರೆಗಳು ಕಾಣ ಸಿಗುತ್ತವೆ. ಕೇತ್ರದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜೈನ ಮತದಾರರಿದ್ದಾರೆ. ಹಾಲಿ ಶಾಸಕ ಅಭಯಚಂದ್ರ ಜೈನ್ ಕೂಡಾ ಜೈನ ಸಮುದಾಯದವರೇ ಆಗಿದ್ದಾರೆ.
ಇಲ್ಲಿ ಕಾಂಗ್ರೆಸ್ ಗೆದ್ದಿದೆ. ಜೆಡಿಎಸ್ ಗೆದ್ದಿದೆ. 1983ಕ್ಕೂ ಹಿಂದೆ ಜನತಾ ಪಕ್ಷವೂ ಗೆದ್ದಿದೆ. ಆದರೆ ಒಮ್ಮೆಯೂ ಬಿಜೆಪಿ ಗೆದ್ದಿಲ್ಲ. ದಕ್ಷಿಣ ಕನ್ನಡ ಮತ್ತು ಉಡುಪಿಯ ಎಲ್ಲಾ ಕ್ಷೇತ್ರಗಳಲ್ಲಿ ಒಂದಲ್ಲ ಒಂದು ಬಾರಿ ಬಿಜೆಪಿ ಗೆದ್ದಿದೆ. ಮುಸ್ಲಿಂ ಬಾಹುಳ್ಯದ ಉಳ್ಳಾಲದಲ್ಲೂ ಒಮ್ಮೆ ಕೇಸರಿ ಪಕ್ಷ ತನ್ನ ಬಾವುಟ ಊರಿದೆ. ಆದರೆ ಬಿಜೆಪಿ ಪಾಲಿಗೆ ಒಲಿಯದ ಕರಾವಳಿಯ ಏಕೈಕ ಕ್ಷೇತ್ರವೆಂದರೆ ಅದು ಮೂಡಬಿದಿರೆ.

ಇಲ್ಲಿ 1983, 85ರಲ್ಲಿ ಜನತಾ ಪಕ್ಷ ಮತ್ತು 94ರಲ್ಲಿ ಜನತಾ ದಳದಿಂದ ಸ್ಪರ್ಧಿಸಿ ಗೆದ್ದು ಅಮರನಾಥ ಶೆಟ್ಟಿ ಸಚಿವರೂ ಆಗಿದ್ದರು. ಬೆಳ್ತಂಗಡಿ ಬಿಟ್ಟರೆ ದಕ್ಷಿಣ ಕನ್ನಡದಲ್ಲಿ ಜನತಾ ದಳದ ಧ್ವಜ ಹಾರಾಡಿದ ಮತ್ತೊಂದು ಕ್ಷೇತ್ರ ಇದಾಗಿತ್ತು. ಸದ್ಯ ಅಮರನಾಥ ಶೆಟ್ಟಿ ಜಾತ್ಯಾತೀತ ಜನತಾ ದಳದಲ್ಲಿದ್ದಾರೆ. ಆದರೆ ಹಿಂದಿನ ಚಾರ್ಮ್ ಇವತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ಇಲ್ಲಿ ಜೆಡಿಎಸ್ ಮತಗಳಿಕೆ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಇದೇ ಕಾಲಕ್ಕೆ ಬಿಜೆಪಿ ತನ್ನ ಮತಗಳಿಕೆ ಹೆಚ್ಚಿಸಿಕೊಂಡು ಸಾಗಿದೆ.
1999ರಲ್ಲಿ ಇಲ್ಲಿ ಚುನಾವಣೆ ನಡೆದಾಗ ಹಾಲಿ ಶಾಸಕ ಅಭಯಚಂದ್ರ ಜೈನ್ ಮೊದಲ ಬಾರಿಗೆ ಕಾಂಗ್ರೆಸ್ ನಿಂದ ಚುನಾವಣೆಯ ಅಖಾಡಕ್ಕೆ ಇಳಿದಿದ್ದರು. ಮೊದಲ ಯತ್ನದಲ್ಲೇ ಅವರು ಮೂರು ಬಾರಿಯ ಶಾಸಕ ಅಮರನಾಥ ಶೆಟ್ಟರಿಗೆ ಸೋಲುಣಿಸಿದ್ದರು. ಅಲ್ಲಿಂದ ಅಭಯಚಂದ್ರ ಜೈನ್ ನಾಗಾಲೋಟಕ್ಕೆ ತಡೆ ಒಡ್ಡಲು ಯಾರಿಗೂ ಸಾಧ್ಯವಾಗಿಲ್ಲ.
1999, 2004, 2008, 2013... ಹೀಗೆ ಇಲ್ಲಿಯವರೆಗೆ ಸತತ 4 ಚುನಾವಣೆಗಳಲ್ಲಿ ಅಭಯಚಂದ್ರ ಜೈನ್ ಮೂಡಬಿದಿರೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಸಿದ್ದರಾಮಯ್ಯ ಸರಕಾರದಲ್ಲಿ ಜೈನ್ ಸಚಿವರಾಗಿಯೂ ನೇಮಕವಾಗಿದ್ದರು; ಆದರೆ ಕಳಪೆ ಸಾಧನೆಗಳ ಕಾರಣಕ್ಕೆ ಸಂಪುಟದಿಂದ ಮುಂದೆ ಅವರನ್ನು ಕೈ ಬಿಡಲಾಯಿತು.
ಇತ್ತೀಚಿಗಿನ ವರ್ಷಗಳಲ್ಲಿ ಇಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಮತಗಳಿಕೆ ಅಂತರ ಕಡಿಮೆಯಾಗಿದ್ದನ್ನು ಗಮನಿಸಬಹುದು. 2008ರಲ್ಲಿ 10 ಸಾವಿರ ಮತಗಳಿಂದ ಗೆದ್ದಿದ್ದ ಜೈನ್, 2013ರಲ್ಲಿ ಕಾಂಗ್ರೆಸ್ ಪರ ಅಲೆ ಇದ್ದೂ 5 ಸಾವಿರ ಮತಗಳ ಅಂತರದಿಂದ ಪ್ರಯಾಸದ ಗೆಲುವು ದಾಖಲಿಸಿದ್ದರು. ಈ ಚುನಾವಣೆಯಲ್ಲಿ ಜೈನ್ 53,180 ಮತಗಳನ್ನು ಪಡೆದರೆ ಬಿಜೆಪಿಯ ಉಮಾನಾಥ ಕೋಟ್ಯಾನ್ 48,630 ಮತಗಳನ್ನು ಪಡೆದಿದ್ದರು. ಈ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ, ಮೂರು ಬಾರಿಯ ಶಾಸಕ ಅಮರನಾಥ ಶೆಟ್ಟಿ 20,471 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ಜಾರಿದ್ದರು.
2018ರ ಚುನಾವಣೆಯಲ್ಲಿ ತಾನು ಸ್ಪರ್ಧಿಸುತ್ತಿಲ್ಲ ಎಂದು ಅಭಯಚಂದ್ರ ಜೈನ್ ಈಗಾಗಲೇ ಹೇಳಿರುವುದರಿಂದ ಕಾಂಗ್ರೆಸ್ ಟಿಕೆಟ್ ಯಾರಿಗೆ ಎಂಬುದೇ ಕುತೂಹಲಕಾರಿಯಾಗಿದೆ. ಈಗಾಗಲೇ ಜೈನ್ ಉತ್ತರಾಧಿಕಾರಿಯಾಗಿ ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಟವೆಲ್ ಹಾಕಿದ್ದಾರೆ. ಅದಕ್ಕೆ ಬೇಕಾದ ಭರ್ಜರಿ ಸಿದ್ಧತೆಗಳನ್ನೂ ಅವರು ನಡೆಸಿದ್ದಾರೆ.
ಮೂಡಬಿದಿರೆ ಬಿಜೆಪಿ ಅಭ್ಯರ್ಥಿ ಸ್ಥಾನಕ್ಕೆ ಕಳೆದ ಬಾರಿ ಸೋತಗ ಉಮಾನಾಥ ಕೋಟ್ಯಾನ್, 2008ರಲ್ಲಿ ಸೋತ ಜಗದೀಶ್ ಅಧಿಕಾರಿ ನಡುವೆ ಪ್ರಬಲ ಪೈಪೋಟಿ ಇದೆ. ಜತೆಗೆ ಉಳಿದ ಕೆಲವು ನಾಯಕರೂ ಟಿಕೆಟ್ ಬಯಸಿದ್ದಾರೆ. ತನಗೆ ಎಂದೂ ಒಲಿಯದ ಮೂಡಬಿದಿರೆ ಕ್ಷೇತ್ರದಲ್ಲಿ ಈ ಬಾರಿಯಾದರೂ ಬಿಜೆಪಿ ಗೆಲುವು ಸಾಧಿಸುತ್ತಾ ಕಾದು ನೋಡಬೇಕಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications