ಕ್ಷೇತ್ರ ಪರಿಚಯ: ಬಿಜೆಪಿಗೆ ಒಲಿಯದ ಕಾಂಗ್ರೆಸ್ ಭದ್ರಕೋಟೆ ಮೂಡಬಿದಿರೆ
ಮಂಗಳೂರು ತಾಲೂಕಿಗೆ ಒಳಪಡುವ ವಿಧಾನಸಭಾ ಕ್ಷೇತ್ರವಿದು. ಸದ್ಯ ಮೂಡಬಿದಿರೆ ತಾಲೂಕಾಗಿದೆ. ಜಿಲ್ಲಾ ಕೇಂದ್ರ ಮಂಗಳೂರಿನಿಂದ 34 ಕಿಲೋ ಮೀಟರ್ ದೂರದಲ್ಲಿದೆ. ಸಾವಿರ ಕಂಬದ ಬಸದಿ, ಆಳ್ವಾಸ್ ಶಿಕ್ಷಣ ಸಂಸ್ಥೆಗಳು, ಇನ್ನೂ ಹಲವಾರು ಕಾಲೇಜುಗಳನ್ನು ಹೊಂದಿರುವ ಆಧುನಿಕ ಶಿಕ್ಷಣ ಕಾಶಿ ಮೂಡಬಿದಿರೆ.
ಕರಾವಳಿ ಜಿಲ್ಲೆಗಳಲ್ಲಿ ಕೆರೆಗಳು ಅಪರೂಪವಾದರೂ ಮೂಡಬಿದಿರೆ ಅದಕ್ಕೆ ಅಪವಾದ. ಇಲ್ಲಿ 18 ಕೆರೆಗಳು ಕಾಣ ಸಿಗುತ್ತವೆ. ಕೇತ್ರದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜೈನ ಮತದಾರರಿದ್ದಾರೆ. ಹಾಲಿ ಶಾಸಕ ಅಭಯಚಂದ್ರ ಜೈನ್ ಕೂಡಾ ಜೈನ ಸಮುದಾಯದವರೇ ಆಗಿದ್ದಾರೆ.
ಇಲ್ಲಿ ಕಾಂಗ್ರೆಸ್ ಗೆದ್ದಿದೆ. ಜೆಡಿಎಸ್ ಗೆದ್ದಿದೆ. 1983ಕ್ಕೂ ಹಿಂದೆ ಜನತಾ ಪಕ್ಷವೂ ಗೆದ್ದಿದೆ. ಆದರೆ ಒಮ್ಮೆಯೂ ಬಿಜೆಪಿ ಗೆದ್ದಿಲ್ಲ. ದಕ್ಷಿಣ ಕನ್ನಡ ಮತ್ತು ಉಡುಪಿಯ ಎಲ್ಲಾ ಕ್ಷೇತ್ರಗಳಲ್ಲಿ ಒಂದಲ್ಲ ಒಂದು ಬಾರಿ ಬಿಜೆಪಿ ಗೆದ್ದಿದೆ. ಮುಸ್ಲಿಂ ಬಾಹುಳ್ಯದ ಉಳ್ಳಾಲದಲ್ಲೂ ಒಮ್ಮೆ ಕೇಸರಿ ಪಕ್ಷ ತನ್ನ ಬಾವುಟ ಊರಿದೆ. ಆದರೆ ಬಿಜೆಪಿ ಪಾಲಿಗೆ ಒಲಿಯದ ಕರಾವಳಿಯ ಏಕೈಕ ಕ್ಷೇತ್ರವೆಂದರೆ ಅದು ಮೂಡಬಿದಿರೆ.

ಇಲ್ಲಿ 1983, 85ರಲ್ಲಿ ಜನತಾ ಪಕ್ಷ ಮತ್ತು 94ರಲ್ಲಿ ಜನತಾ ದಳದಿಂದ ಸ್ಪರ್ಧಿಸಿ ಗೆದ್ದು ಅಮರನಾಥ ಶೆಟ್ಟಿ ಸಚಿವರೂ ಆಗಿದ್ದರು. ಬೆಳ್ತಂಗಡಿ ಬಿಟ್ಟರೆ ದಕ್ಷಿಣ ಕನ್ನಡದಲ್ಲಿ ಜನತಾ ದಳದ ಧ್ವಜ ಹಾರಾಡಿದ ಮತ್ತೊಂದು ಕ್ಷೇತ್ರ ಇದಾಗಿತ್ತು. ಸದ್ಯ ಅಮರನಾಥ ಶೆಟ್ಟಿ ಜಾತ್ಯಾತೀತ ಜನತಾ ದಳದಲ್ಲಿದ್ದಾರೆ. ಆದರೆ ಹಿಂದಿನ ಚಾರ್ಮ್ ಇವತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ಇಲ್ಲಿ ಜೆಡಿಎಸ್ ಮತಗಳಿಕೆ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಇದೇ ಕಾಲಕ್ಕೆ ಬಿಜೆಪಿ ತನ್ನ ಮತಗಳಿಕೆ ಹೆಚ್ಚಿಸಿಕೊಂಡು ಸಾಗಿದೆ.
1999ರಲ್ಲಿ ಇಲ್ಲಿ ಚುನಾವಣೆ ನಡೆದಾಗ ಹಾಲಿ ಶಾಸಕ ಅಭಯಚಂದ್ರ ಜೈನ್ ಮೊದಲ ಬಾರಿಗೆ ಕಾಂಗ್ರೆಸ್ ನಿಂದ ಚುನಾವಣೆಯ ಅಖಾಡಕ್ಕೆ ಇಳಿದಿದ್ದರು. ಮೊದಲ ಯತ್ನದಲ್ಲೇ ಅವರು ಮೂರು ಬಾರಿಯ ಶಾಸಕ ಅಮರನಾಥ ಶೆಟ್ಟರಿಗೆ ಸೋಲುಣಿಸಿದ್ದರು. ಅಲ್ಲಿಂದ ಅಭಯಚಂದ್ರ ಜೈನ್ ನಾಗಾಲೋಟಕ್ಕೆ ತಡೆ ಒಡ್ಡಲು ಯಾರಿಗೂ ಸಾಧ್ಯವಾಗಿಲ್ಲ.
1999, 2004, 2008, 2013... ಹೀಗೆ ಇಲ್ಲಿಯವರೆಗೆ ಸತತ 4 ಚುನಾವಣೆಗಳಲ್ಲಿ ಅಭಯಚಂದ್ರ ಜೈನ್ ಮೂಡಬಿದಿರೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಸಿದ್ದರಾಮಯ್ಯ ಸರಕಾರದಲ್ಲಿ ಜೈನ್ ಸಚಿವರಾಗಿಯೂ ನೇಮಕವಾಗಿದ್ದರು; ಆದರೆ ಕಳಪೆ ಸಾಧನೆಗಳ ಕಾರಣಕ್ಕೆ ಸಂಪುಟದಿಂದ ಮುಂದೆ ಅವರನ್ನು ಕೈ ಬಿಡಲಾಯಿತು.
ಇತ್ತೀಚಿಗಿನ ವರ್ಷಗಳಲ್ಲಿ ಇಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಮತಗಳಿಕೆ ಅಂತರ ಕಡಿಮೆಯಾಗಿದ್ದನ್ನು ಗಮನಿಸಬಹುದು. 2008ರಲ್ಲಿ 10 ಸಾವಿರ ಮತಗಳಿಂದ ಗೆದ್ದಿದ್ದ ಜೈನ್, 2013ರಲ್ಲಿ ಕಾಂಗ್ರೆಸ್ ಪರ ಅಲೆ ಇದ್ದೂ 5 ಸಾವಿರ ಮತಗಳ ಅಂತರದಿಂದ ಪ್ರಯಾಸದ ಗೆಲುವು ದಾಖಲಿಸಿದ್ದರು. ಈ ಚುನಾವಣೆಯಲ್ಲಿ ಜೈನ್ 53,180 ಮತಗಳನ್ನು ಪಡೆದರೆ ಬಿಜೆಪಿಯ ಉಮಾನಾಥ ಕೋಟ್ಯಾನ್ 48,630 ಮತಗಳನ್ನು ಪಡೆದಿದ್ದರು. ಈ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ, ಮೂರು ಬಾರಿಯ ಶಾಸಕ ಅಮರನಾಥ ಶೆಟ್ಟಿ 20,471 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ಜಾರಿದ್ದರು.
2018ರ ಚುನಾವಣೆಯಲ್ಲಿ ತಾನು ಸ್ಪರ್ಧಿಸುತ್ತಿಲ್ಲ ಎಂದು ಅಭಯಚಂದ್ರ ಜೈನ್ ಈಗಾಗಲೇ ಹೇಳಿರುವುದರಿಂದ ಕಾಂಗ್ರೆಸ್ ಟಿಕೆಟ್ ಯಾರಿಗೆ ಎಂಬುದೇ ಕುತೂಹಲಕಾರಿಯಾಗಿದೆ. ಈಗಾಗಲೇ ಜೈನ್ ಉತ್ತರಾಧಿಕಾರಿಯಾಗಿ ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಟವೆಲ್ ಹಾಕಿದ್ದಾರೆ. ಅದಕ್ಕೆ ಬೇಕಾದ ಭರ್ಜರಿ ಸಿದ್ಧತೆಗಳನ್ನೂ ಅವರು ನಡೆಸಿದ್ದಾರೆ.
ಮೂಡಬಿದಿರೆ ಬಿಜೆಪಿ ಅಭ್ಯರ್ಥಿ ಸ್ಥಾನಕ್ಕೆ ಕಳೆದ ಬಾರಿ ಸೋತಗ ಉಮಾನಾಥ ಕೋಟ್ಯಾನ್, 2008ರಲ್ಲಿ ಸೋತ ಜಗದೀಶ್ ಅಧಿಕಾರಿ ನಡುವೆ ಪ್ರಬಲ ಪೈಪೋಟಿ ಇದೆ. ಜತೆಗೆ ಉಳಿದ ಕೆಲವು ನಾಯಕರೂ ಟಿಕೆಟ್ ಬಯಸಿದ್ದಾರೆ. ತನಗೆ ಎಂದೂ ಒಲಿಯದ ಮೂಡಬಿದಿರೆ ಕ್ಷೇತ್ರದಲ್ಲಿ ಈ ಬಾರಿಯಾದರೂ ಬಿಜೆಪಿ ಗೆಲುವು ಸಾಧಿಸುತ್ತಾ ಕಾದು ನೋಡಬೇಕಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications