ಕ್ಷೇತ್ರ ಪರಿಚಯ : ಕಾರಜೋಳ ಗೆಲುವಿಗೆ ತಡೆ ಬೀಳುತ್ತಾ?
ಬಾಗಲಕೋಟೆ ಜಿಲ್ಲೆಯ ತಾಲೂಕು ಕೇಂದ್ರ ಮುಧೋಳ. ಘಟಪ್ರಭಾ ನದಿ ತೀರದಲ್ಲಿರುವ ಕ್ಷೇತ್ರ ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ.ದೂರದಲ್ಲಿದೆ. 'ಮುಧೋಳ' ಎಂಬ ನಾಯಿಯ ತಳಿಗೂ ಕ್ಷೇತ್ರ ಪ್ರಸಿದ್ಧಿ ಪಡೆದಿದ್ದು, ಭಾರತೀಯ ಸೇನೆಯಲ್ಲಿಯೂ ನಾಯಿಗಳು ಸೇವೆ ಸಲ್ಲಿಸುತ್ತಿವೆ.
ರಾಜಕೀಯವಾಗಿ ಮುಧೋಳದ ಹಾಲಿ ಶಾಸಕ ಬಿಜೆಪಿಯ ಗೋವಿಂದ ಕಾರಜೋಳ. ಬಾಗಲಕೋಟೆ ಜಿಲ್ಲೆಯಲ್ಲಿ ಒಂದೇ ಒಂದು ಎಸ್.ಟಿ.ಮೀಸಲಾತಿ ಹೊಂದಿರುವ ಕ್ಷೇತ್ರವಿದು. ಕಳೆದ ಮೂರು ಚುನಾವಣೆಗಳಿಂದ ಗೋವಿಂಧ ಕಾರಜೋಳ ಅವರು ಗೆಲ್ಲುತ್ತ ಬಂದಿದ್ದಾರೆ. ಇವರ ವಿರುದ್ಧ ಕಾಂಗ್ರೆಸ್ ಪಕ್ಷದ ಆರ್.ಬಿ.ತಿಮ್ಮಾಪುರ ಸತತ ಮೂರು ಬಾರಿ ಸೋಲು ಕಂಡಿದ್ದಾರೆ.
ಶಾಸಕ ಗೋವಿಂದ ಕಾರಜೋಳ ಅವರು ನೀರಾವರಿ ಸೇರಿದಂತೆ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂಬುದು ಇಲ್ಲಿನ ಕಾರ್ಯಕರ್ತರ ಮಾತು. ಇಲ್ಲಿ ರೆಡ್ಡಿ ಸುಮಾಯದ ಮತಗಳು ನಿರ್ಣಾಯಕ. ಒಳ ಒಪ್ಪಂದದ ರಾಜಕೀಯ ನಡೆಯುತ್ತೆ ಎನ್ನುವುದು ಸದ್ಯದ ಸುದ್ದಿ. ಗೋವಿಂದ ಕಾರಜೋಳ ಅವರ ತಂತ್ರಗಾರಿಕೆಯಿಂದ ಈ ಬಾರಿ ಮತ್ತೆ ಗೆಲ್ಲಲಿದ್ದಾರೆಯೇ?.

ಗೋವಿಂದ ಕಾರಜೋಳ ವಿರುದ್ಧ ಸೋತಿದ್ದ ಆರ್.ಬಿ.ತಿಮ್ಮಾಪುರ ಅವರು ಈಗ ಸಿದ್ದರಾಮಯ್ಯ ಸಂಪುಟದಲ್ಲಿ ಅಬಕಾರಿ ಸಚಿವರು. ಕಳೆದ ವರ್ಷ ಅವರನ್ನು ವಿಧಾನಪರಿಷತ್ ಸದಸ್ಯರಾಗಿ ಮಾಡಿ, ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ ಸಿದ್ದರಾಮಯ್ಯ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಪರಿಷತ್ ಸದಸ್ಯರಾಗಿದ್ದರೂ ಈ ಬಾರಿ ಪುನಃ ಚುನಾವಣೆಗೆ ಸ್ಪರ್ಧಿಸಲು ಅವರು ಬಯಸಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಸತೀಶ ಬಂಡಿವಡ್ಡರ್ ಅವರು ಟಿಕೆಟ್ಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ.
2013ರ ಫಲಿತಾಂಶ
* ಗೋವಿಂದ ಕಾರಜೋಳ : 64,727
* ಆರ್.ಬಿ.ತಿಮ್ಮಾಪುರ : 59,549
* ಗೆಲುವಿನ ಅಂತರ : 5,178
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications