ನಾಗಮಂಗಲ ಕ್ಷೇತ್ರ : ಜೆಡಿಎಸ್ ವಿರುದ್ಧ ಜೆಡಿಎಸ್ ರೆಬೆಲ್
ಮಂಡ್ಯ ಜಿಲ್ಲೆಯ ಅತ್ಯಂತ ದೊಡ್ಡ ತಾಲೂಕು ಕೇಂದ್ರವಾಗಿರುವ ನಾಗಮಂಗಲದ ಮೇಲೆ ಹಾಸನ, ಮೈಸೂರು ಜಿಲ್ಲೆ ಪ್ರಭಾವ ಹೆಚ್ಚಾಗಿದೆ. ಬಯಲು, ಬೆಟ್ಟಗುಡ್ಡ ಪ್ರದೇಶ ಹೊಂದಿರುವ ಕ್ಷೇತ್ರದಲ್ಲಿ ಶಿಂಷಾ,ಲೋಕಪಾವನಿ ನದಿಗಳು ಹರಿಯುತ್ತಿವೆ.
ರಾಗಿ, ಜೋಳ, ಹುರುಳಿ, ತೊಗರಿ ಬೆಳೆಗಳಿಗೆ ಎರಡು ನದಿಗಳಲ್ಲದೆ ಕೆರೆಗಳು ಆಸರೆಯಾಗಿವೆ. ಇದಲ್ಲದೆ, ತೆಂಗು, ಕಬ್ಬು, ಬಾಳೆ, ಮೆಣಸಿನಕಾಯಿ, ತರಕಾರಿ ಕೂಡಾ ಬೆಳೆಯಲಾಗುತ್ತದೆ. ಹೈನುಗಾರಿಕೆ, ಕುರಿ ಸಾಕಾಣಿಕೆ ಕೂಡಾ ಹೆಚ್ಚಾಗಿದೆ.
ತಾಲೂಕು ಕೇಂದ್ರದಲ್ಲಿ ಹೊಯ್ಸಳರ ಕಾಲದ ದೇಗುಲಗಳು, ಆದಿ ಚುಂಚನಗಿರಿ ಕ್ಷೇತ್ರ, ಗಂಗರ ಕಾಲದ ಕಂಬದಹಳ್ಳಿ, ದ್ರಾವಿಡ ಶೈಲಿಯ ಬಸದಿ ಹೀಗೆ, ಗುಡಿ, ದೇಗುಲಗಳಿಂದ ತಾಲೂಕು ತುಂಬಿಕೊಂಡಿದೆ.
ಆದರೆ, ಯಾವುದಕ್ಕೂ ಹೆಚ್ಚಿನ ಪ್ರವಾಸೋದ್ಯಮ ದೃಷ್ಟಿಯಿಂದ ಪ್ರಾಮುಖ್ಯತೆ ಸಿಕ್ಕಿಲ್ಲ. ರಸ್ತೆ ಸಂಪರ್ಕ ತಕ್ಕಮಟ್ಟಿಗೆ ಸುಧಾರಿಸಿದೆ. ಆದರೆ, ರೈತರ ಶ್ರಮಕ್ಕೆ ತಕ್ಕಂತೆ ಫಲ ಸಿಗುತ್ತಿಲ್ಲ ಎಂಬ ಕೊರಗು ಕ್ಷೇತ್ರದ ಜನತೆಯಲ್ಲಿದೆ.

ಮಂಡ್ಯ ಜಿಲ್ಲೆಯ ಅತ್ಯಂತ ದೊಡ್ಡ ತಾಲೂಕು ಕೇಂದ್ರ
ಮಂಡ್ಯ ಜಿಲ್ಲೆಯ ಅತ್ಯಂತ ದೊಡ್ಡ ತಾಲೂಕು ಕೇಂದ್ರವಾಗಿರುವ ನಾಗಮಂಗಲದ ಮೇಲೆ ಹಾಸನ, ಮೈಸೂರು ಜಿಲ್ಲೆ ಪ್ರಭಾವ ಹೆಚ್ಚಾಗಿದೆ. ಬಯಲು, ಬೆಟ್ಟಗುಡ್ಡ ಪ್ರದೇಶ ಹೊಂದಿರುವ ಕ್ಷೇತ್ರದಲ್ಲಿ ಶಿಂಷಾ,ಲೋಕಪಾವನಿ ನದಿಗಳು ಹರಿಯುತ್ತಿವೆ.
ರಾಗಿ, ಜೋಳ, ಹುರುಳಿ, ತೊಗರಿ ಬೆಳೆಗಳಿಗೆ ಎರಡು ನದಿಗಳಲ್ಲದೆ ಕೆರೆಗಳು ಆಸರೆಯಾಗಿವೆ. ಇದಲ್ಲದೆ, ತೆಂಗು, ಕಬ್ಬು, ಬಾಳೆ, ಮೆಣಸಿನಕಾಯಿ, ತರಕಾರಿ ಕೂಡಾ ಬೆಳೆಯಲಾಗುತ್ತದೆ. ಹೈನುಗಾರಿಕೆ, ಕುರಿ ಸಾಕಾಣಿಕೆ ಕೂಡಾ ಹೆಚ್ಚಾಗಿದೆ.

ಚುನಾವಣೆಯಲ್ಲಿ ಗೆದ್ದಿದ್ದು ಚೆಲುವರಾಯ ಸ್ವಾಮಿ
ಈ ಕ್ಷೇತ್ರದಲ್ಲಿ ಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದ್ದು ಚೆಲುವರಾಯ ಸ್ವಾಮಿ. ಜೆಡಿಎಸ್ ಮೂಲಕ ಜಯ ಸಾಧಿಸಿದ್ದ ಅವರು ಜೆಡಿಎಸ್ ಬಂಡಾಯ ಅಭ್ಯರ್ಥಿಯಾಗಿ ನಂತರ ಕಾಂಗ್ರೆಸ್ ಬಲದಿಂದ ಕಣಕ್ಕಿಳಿಯುತ್ತಿದ್ದಾರೆ.
ಇದೇ ರೀತಿ ಜೆಡಿಎಸ್ ನಿಂದ ಬಂಡಾಯವೆದ್ದಿರುವ ಜಮೀರ್ ಅಹ್ಮದ್ ಸೇರಿದಂತೆ ಉಳಿದ 6 ಮಂದಿ ಜತೆಗೂಡಿ ಅವರೀಗ ಕಾಂಗ್ರೆಸ್ ಅಭ್ಯರ್ಥಿಗಳಾಗಿದ್ದಾರೆ. ಇವರಲ್ಲಿ ಯಾರಿಗೂ ತಮ್ಮ ಕ್ಷೇತ್ರಗಳಲ್ಲಿ ಜೆಡಿಎಸ್ ಆಶ್ರಯವಿಲ್ಲದೆ, ಸ್ವಂತ ವರ್ಚಸ್ಸಿನಿಂದ ಗೆಲುವು ಸಾಧಿಸುವುದು ಸಾಧ್ಯವಿಲ್ಲ ಎಂದು ಜೆಡಿಎಸ್ ನಾಯಕ ದೇವೇಗೌಡರೇ ಹೇಳಿದ್ದಾರೆ. ಹಾಗಾಗಿ, ಈ ಬಾರಿಯ ಚುನಾವಣೆಯು ಚೆಲುವರಾಯ ಸ್ವಾಮಿಗೂ, ಜೆಡಿಎಸ್ ಗೂ ಸವಾಲು.
ಕಳೆದ ಬಾರಿ ಸೋಲು ಕಂಡಿದ್ದ ಸುರೇಶ್ ಗೌಡ ಅವರು ಈ ಬಾರಿ ಜೆಡಿಎಸ್ ನಿಂದ ಸ್ಪರ್ಧಿಸುತ್ತಿದ್ದು, ಪೈಪೋಟಿ ಜೋರಾಗಿದೆ.

ನಾಗಮಂಗಲ ಕ್ಷೇತ್ರದ ಮತದಾರರು
ಮಂಡ್ಯ ಜಿಲ್ಲೆ ಮಳವಳ್ಳಿ, ಮದ್ದೂರು, ಮೇಲುಕೋಟೆ, ಮಂಡ್ಯ, ಶ್ರೀರಂಗಪಟ್ಟಣ, ನಾಗಮಂಗಲ, ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ.
ಏಳು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 14,61,031 ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿದ್ದಾರೆ. ನಾಗಮಂಗಲದಲ್ಲಿ ಒಟ್ಟು 2,03,209 (1,02,776 ಪುರುಷ, 1,00,433 ಮಹಿಳೆ) ಮತದಾರರಿದ್ದಾರೆ.

2013ರ ಫಲಿತಾಂಶ
2013ರಲ್ಲಿ ಒಟ್ಟು 14 ಮಂದಿ ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ 3 ಮಂದಿ ನಾಮಪತ್ರ ಹಿಂಪಡೆದರು. 11 ಮಂದಿ ಸ್ಪರ್ಧಿಗಳ ಪೈಕಿ 9 ಮಂದಿ ಠೇವಣಿ ಕಳೆದುಕೊಂಡರು.
ಒಟ್ಟು ಶೇ 81.64ರಷ್ಟು ಮತದಾನವಾಗಿತ್ತು. 163624 ಮತಗಳ ಪೈಕಿ ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಎನ್ ಚೆಲುವರಾಯಸ್ವಾಮಿ (ಸ್ವಾಮಿ ಗೌಡ) ಅವರು 89203 ಮತಗಳನ್ನು ಗಳಿಸಿ ಜಯ ದಾಖಲಿಸಿದ್ದರು. ಕಾಂಗ್ರೆಸ್ಸಿನ ಸುರೇಶ್ ಗೌಡ ಅವರು 68840 ಮತಗಳಿಸಿ ಸೋಲು ಕಂಡಿದ್ದರು. 20363 ಮತಗಳ (ಶೇ 12.44) ಅಂತರದಿಂದ ಚಲುವರಾಯಸ್ವಾಮಿ ಗೆಲುವಿನ ನಗೆ ಬೀರಿದ್ದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications