ನಂಜನಗೂಡು : ಶ್ರೀನಿವಾಸ, ಕೇಶವ ಯಾರಿಗೆ ಜಯ?
ಕಪಿಲ ನದಿ ತೀರದ ಪ್ರಮುಖ ಧಾರ್ಮಿಕ, ಐತಿಹಾಸಿಕ ಪಟ್ಟಣ ನಂಜನಗೂಡಿನಲ್ಲಿ ಈ ಬಾರಿ ಬಿಸಿಲಿನ ಬಾಳೆಹಣ್ಣು ತಿನ್ನುತ್ತಾ ಎಲ್ಲಾ ಪಕ್ಷದ ಟಿಕೆಟ್ ಆಕಾಂಕ್ಷಿಗಳು ಓಡಾಡುತ್ತಿದ್ದಾರೆ. ಯಾರಿಗೆ ಟಿಕೆಟ್ ಸಿಗಲಿದೆ ಎಂಬುದು ಖಚಿತವಾಗಿಲ್ಲ. ಯಾರು ಗೆಲ್ಲಬಹುದು ಎಂಬುದನ್ನು ಊಹಿಸುವುದು ಈ ಬಾರಿ ಕಷ್ಟ.
ಸುಮಾರು 188ಕ್ಕೂ ಅಧಿಕ ಗ್ರಾಮಗಳನ್ನು ಒಳಗೊಂಡ ನಂಜನಗೂಡು ಕ್ಷೇತ್ರ ತಕ್ಕಮಟ್ಟಿಗೆ ಸುಭಿಕ್ಷವಾಗಿದೆ. ನೀರಾವರಿ, ಖನಿಜ ಭೂಮಿ ಒಳಗೊಂಡಿದ್ದು, ಭತ್ತ, ಕಬ್ಬು, ಕಡಲೆಕಾಯಿ, ಧಾನ್ಯಗಳು ಪ್ರಮುಖ ಬೆಳೆಯಾಗಿವೆ. ಜೋಳ, ರಾಗಿ ಸೀಸನ್ ಗೆ ತಕ್ಕಂತೆ ಬದಲಾಗುತ್ತಿರುತ್ತದೆ. ಇನ್ನು ನಂಜನಗೂಡಿನ ರಸಬಾಳೆ ಜಗತ್ ಪ್ರಸಿದ್ಧ.
ಬಟ್ಟೆ ಗಿರಣಿ, ಕಾಗದದ ಕಾರ್ಖಾನೆ, ಔಷಧ ಮತ್ತು ಸುಗಂಧ ದ್ರವ್ಯಗಳ ಕಾರ್ಖಾನೆ, ಅಕ್ಕಿ ಗಿರಣಿಗಳು ಮತ್ತು ಮರ ಕೊಯ್ಯುವ ಕಾರ್ಖಾನೆಗಳು, ರೇಷ್ಮೆ ಉದ್ಯಮವಿದೆ. ವಿದ್ಯುತ್ ಪೂರೈಕೆ ಎಲ್ಲೆಡೆ ಸಮರ್ಪಕವಾಗಿ ಸಿಗುತ್ತಿದೆ. ಉದಕಮಂಡಲಕ್ಕೆ ತೆರಳುವ ಹೆದ್ದಾರಿ, ಮೈಸೂರು-ಚಾಮರಾಜನಗರ ಜಿಲ್ಲೆ ರೈಲು ಮಾರ್ಗವಿದೆ.
ಕಳಲೆ, ದೇವನೂರು, ಹೆಡತಲೆ, ಸುತ್ತೂರು, ದೇವನೂರುಗಳಲ್ಲಿನ ದೇಗುಲಗಳು, ಮಠಗಳು ಪ್ರಭಾವಿಯಾಗಿವೆ. ಆಸ್ಪತ್ರೆ ಮತ್ತು ಪಶುವೈದ್ಯಶಾಲೆ, ಶಾಲೆಗಳಿದ್ದರೂ, ಉನ್ನತಮಟ್ಟದ ವ್ಯಾಸಂಗಕ್ಕೆ ಮೈಸೂರನ್ನು ಆಶ್ರಯಿಸಬೇಕಾಗಿದೆ.

ಜೆಡಿಎಸ್ ಇಲ್ಲಿ ಜಯ ಸಾಧಿಸುವ ಲೆಕ್ಕಾಚಾರ
ಇಲ್ಲಿ ಕಾಂಗ್ರೆಸ್ ತೊರೆದ ಶ್ರೀನಿವಾಸ್ ಪ್ರಸಾದ್ ಈಗ ಬಿಜೆಪಿಯ ನಾಯಕರಾಗಿದ್ದಾರೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನ ಕಳಲೆ ಕೇಶವಮೂರ್ತಿ ವಿರುದ್ಧ ಸೋಲು ಕಂಡಿದ್ದಾರೆ. ಕೇಶವಮೂರ್ತಿ ಅವರು ಈ ಹಿಂದೆ ಜೆಡಿಎಸ್ ನಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಈಗ ಕಾಂಗ್ರೆಸ್ ಹಾಗೂ ಬಿಜೆಪಿ ಪೈಪೋಟಿಯಲ್ಲಿ ಜಾತ್ಯಾತೀತ ಜನತಾ ದಳಕ್ಕೆ ಲಾಭವಾಗುವ ಸಾಧ್ಯತೆಗಳನ್ನೂ ತಳ್ಳಿಹಾಕುವಂತಿಲ್ಲ. ಶಿವಮೂರ್ತಿ ಅವರನ್ನು ಕಣಕ್ಕಿಳಿಸಲು ಸಜ್ಜಾಗಿರುವ ಜೆಡಿಎಸ್ ಇಲ್ಲಿ ಜಯ ಸಾಧಿಸುವ ಲೆಕ್ಕಾಚಾರದಲ್ಲಿ ತೊಡಗಿದೆ.

ಉಪಚುನಾವಣೆಯಿಂದಾಗಿ ನಂಜನಗೂಡು
ಇತ್ತೀಚೆಗೆ, ಈ ಕ್ಷೇತ್ರದ ಉಪಚುನಾವಣೆಯಿಂದಾಗಿ ನಂಜನಗೂಡು ಸುದ್ದಿಯಲ್ಲಿತ್ತು. ಕಾಂಗ್ರೆಸ್ ತೊರೆದ ಶ್ರೀನಿವಾಸ್ ಪ್ರಸಾದ್ ಈಗ ಬಿಜೆಪಿಯ ನಾಯಕರಾಗಿದ್ದಾರೆ ಇಲ್ಲಿ. ಆದರೆ, ಉಪ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಸ್ಪರ್ಧಿಸಿ, ಕಾಂಗ್ರೆಸ್ ನ ಕಳಲೆ ಕೇಶವಮೂರ್ತಿ ವಿರುದ್ಧ ಸೋಲು ಕಂಡಾಗ ತಾವು ಮತ್ತೆ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಘೋಷಿಸಿದ್ದರು ಶ್ರೀನಿವಾಸ್. ಆದರೆ, ಬಿಜೆಪಿ ನಾಯಕರು ಸತತವಾಗಿ ಮನವೊಲಿಸಿದರೆ ಅವರು ಮತ್ತೆ ಚುನಾವಣೆ ಅಖಾಡಕ್ಕೆ ಇಳಿಯಬಹುದು.

ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳು
ಆದರೆ, ಕಳಲೆ ಕೇಶವಮೂರ್ತಿಯವರದ್ದು ಇಲ್ಲಿ ಆಕಸ್ಮಿಕ ಗೆಲುವುದು ಎಂಬ ಅನಿಸಿಕೆ ಕಾಂಗ್ರೆಸ್ ವಲಯದಲ್ಲೇ ಇರುವುದರಿಂದ, ಈ ಬಾರಿ ಕೇಶವ ಮೂರ್ತಿ ಬದಲಿಗೆ ಬೇರೆಯವರನ್ನು ಕಣಕ್ಕಿಳಿಸುವುದೇ ಎಂಬುದನ್ನು ಕಾದು ನೋಡಬೇಕಿದೆ.
ಹಾಗಾಗಿ, ಕಾಂಗ್ರೆಸ್ ಹಾಗೂ ಬಿಜೆಪಿ ಪೈಪೋಟಿಯಲ್ಲಿ ಜಾತ್ಯಾತೀತ ಜನತಾ ದಳಕ್ಕೆ ಲಾಭವಾಗುವ ಸಾಧ್ಯತೆಗಳನ್ನೂ ತಳ್ಳಿಹಾಕುವಂತಿಲ್ಲ. ಶಿವಮೂರ್ತಿ ಅವರನ್ನು ಕಣಕ್ಕಿಳಿಸಲು ಸಜ್ಜಾಗಿರುವ ಜೆಡಿಎಸ್ ಇಲ್ಲಿ ಜಯ ಸಾಧಿಸುವ ಲೆಕ್ಕಾಚಾರದಲ್ಲಿ ತೊಡಗಿದೆ.

ಕೋಟೆ ಎಂ.ಶಿವಣ್ಣ ಪ್ರಬಲ ಟಿಕೆಟ್ ಆಕಾಂಕ್ಷಿಗಳು
ಎಸ್.ಮಹದೇವಯ್ಯ, ಜಿಲ್ಲಾ ಪಂಚಾಯತ್ ಸದಸ್ಯ ಎಚ್.ಎಸ್. ದಯಾನಂದಮೂರ್ತಿ, ಮೈಸೂರು ಜಿಲ್ಲಾ ಬಿಜೆಪಿ ಅಧ್ಯಕ್ಷ, ಮಾಜಿ ಸಚಿವ ಕೋಟೆ ಎಂ.ಶಿವಣ್ಣ ಪ್ರಬಲ ಟಿಕೆಟ್ ಆಕಾಂಕ್ಷಿಗಳು. ಮಹದೇವಯ್ಯ ಕಳೆದ ಉಪ ಚುನಾವಣೆಯಲ್ಲಿ ಶ್ರೀನಿವಾಸಪ್ರಸಾದ್ ಅವರಿಗಾಗಿ ಪಕ್ಷದ ಟಿಕೆಟ್ ಬಿಟ್ಟುಕೊಟ್ಟಿದ್ದರು. ಉಪ ಚುನಾವಣೆಯಲ್ಲಿ ಬಿಜೆಪಿ ಸೋತು ಮುಖಂಡರು ಸ್ವಲ್ಪ ನಿಷ್ಕ್ರಿಯರಾಗಿದ್ದಾಗ ಮುನ್ನುಗ್ಗಿ ಕಾರ್ಯಕರ್ತರನ್ನು ಹುರಿದುಂಬಿಸಿ ಸಂಘಟನೆಯಲ್ಲಿ ತೊಡಗಿದವರು ದಯಾನಂದಮೂರ್ತಿ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications