Get Updates
Get notified of breaking news, exclusive insights, and must-see stories!

ನರಗುಂದದ ಮತದಾರ ಯಾರ ಕೈ ಹಿಡಿಯಲಿದ್ದಾನೆ..?

ನರಗುಂದ ಎಂದೊಡನೆ ನೆನಪಾಗುವುದು ಸ್ವಾತಂತ್ರ್ಯ ಹೋರಾಟ. ಬ್ರಿಟೀಶರನ್ನು ಭಾರತಿಂದ ಓಡಿಸುವಲ್ಲಿ ನರಗುಂದದ ಸ್ವಾತಂತ್ರ್ಯ ಹೋರಾಟಗಾರರ ಪಾತ್ರವನ್ನು ಎಂದೂ ಮರೆಯುವುದಕ್ಕೆ ಸಾಧ್ಯವಿಲ್ಲ. ಪ್ರಮುಖ ಸ್ವಾತಂತ್ರ್ಯ ಹೋರಾಟಗಾರ ನರಗುಂದ ಬಾಬಾಸಾಹೇಬರು, ಜಗನ್ನಾಥ ಜೋಷಿಯವರು ಸಹ ಇದೇ ಊರಿನವರು.

1857 ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಬಾಬಾಸಾಹೇಬರು ಬ್ರಿಟಿಶರ ವಿರುದ್ಧ ದಂಗೆ ಆರಂಭಿಸಿ, ನರಗುಂದವೂ ಭಾರತದ ಸ್ವಾತಂತ್ರ್ಯ ಹೋರಾಟದ ಪುಟಗಳಲ್ಲಿ ಭದ್ರಸ್ಥಾನ ಪಡೆವಂತೆ ಮಾಡಿದರು.

ಭಾರತದಲ್ಲಿರುವ ಮೂರು ಬೃಹತ್ ರಾಷ್ಟ್ರ ದ್ಹಜಗಳಲ್ಲಿ ಒಂದನ್ನು ಪ್ರತಿವರ್ಷವೂ ನರಗುಂದ ಬೆಟ್ಟದಲ್ಲಿ ಹಾರಿಸಲಾಗುತ್ತದೆ. ಅಷ್ಟೇ ಅಲ್ಲ, ಪ್ರತಿ ಗಣರಾಜ್ಯ ದಿನ ಮತ್ತು ಸ್ವಾತಂತ್ರ್ಯ ದಿನದಂದು ಧ್ವಜಾರೋಹಣವಾಗುವ ರಾಷ್ಟ್ರಧ್ವಜ ನರಗುಂದದ ಖಾದಿ ಗ್ರಾಮೋದ್ಯೋಗದಲ್ಲೇ ತಯಾರಾಗುವಂಥದು.

Karnataka Assembly Election 2018: Nargund Constituency Profile

ನರಗುಂದ ಗುಡ್ಡ ನೋಡುವುದಕ್ಕೆ ಮಲಗಿದ ಸಿಂಹದಂತೆಯೇ ಕಾಣಿಸುತ್ತದೆ! ಗುಡ್ಡದ ಮೇಲೆ ಸಿದ್ದೇಶ್ವರ ದೇವಸ್ಥಾನ ಹಾಗೂ ಇಳಿಜಾರಿನಲ್ಲಿ ಬೃಹತ್ತಾದ ವೆಂಕಟೇಶ್ವರ ದೇವಾಲಯವಿದೆ. ಇಲ್ಲಿನ ಪುರಸಭೆಯ ಎದುರಿಗೆ 1857 ರ ದಂಗೆಯ ಬಾಬಾಸಾಹೇಬನ ಎದೆಮಟ್ಟದ ಆಧುನಿಕ ಪ್ರತಿಮೆ ಇದೆ. ಮಲಪ್ರಭಾ ನದಿಯ ನೀರಾವರಿಯಿಂದಾಗಿ ಇಲ್ಲಿನ ರೈತರು ವಾಣಿಜ್ಯ ಬೆಳೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ಕೊಡುತ್ತಾರೆ. ನರಗುಂದ ತನ್ನ ಹತ್ತಿ ಬೆಳೆಗೆ ಪ್ರಸಿದ್ಧವಾಗಿದೆ.

ಇನ್ನು ಇಲ್ಲಿನ ರಾಜಕೀಯ ಚಿತ್ರಣದ ಬಗ್ಗೆ ಯೋಚಿಸುವುದಾದರೆ ಬಿಜೆಪಿಯ ಸ್ಥಳಿಯ ನಾಯಕರ ಅಪ್ರಬುದ್ಧ ಹೇಳಿಕೆಗಳು ಎದುರಾಳಿ ಕಾಂಗ್ರೆಸ್ ಗೆ ಲಾಭವಾಗಬಹುದು. ಕಳಸಾಬಂಡೂರಿ ಹೋರಾಟವೂ ಇಲ್ಲಿನ ರಾಜಕೀಯದ ಮೇಲೆ ಪರಿಣಾಮ ಬೀರುವುದನ್ನು ಅಲ್ಲಗಳೆಯುವಂತಿಲ್ಲ. ಈಗಾಗಲೇ ಗೆದ್ದಿರುವ ಬಿ.ಆರ್.ಯಾವಗಲ್ ಅವರಿಗೆ ಮತ್ತೊಮ್ಮೆ ಮತದಾರರನ್ನು ಸೆಳೆಯುವುದು ಕಷ್ಟದ ಕೆಲಸವಾಗಲಾರದು.

2013 ರ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ನ ಬಿ.ಆರ್.ಯಾವಗಲ್ 59620 ಮತ ಪಡೆದಿದ್ದರೆ, ಬಿಜೆಪಿಯ ಸಿ ಸಿ ಪಾಟೀಲ್ 51035 ಮತ ಗಳಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+