ನರಗುಂದದ ಮತದಾರ ಯಾರ ಕೈ ಹಿಡಿಯಲಿದ್ದಾನೆ..?
ನರಗುಂದ ಎಂದೊಡನೆ ನೆನಪಾಗುವುದು ಸ್ವಾತಂತ್ರ್ಯ ಹೋರಾಟ. ಬ್ರಿಟೀಶರನ್ನು ಭಾರತಿಂದ ಓಡಿಸುವಲ್ಲಿ ನರಗುಂದದ ಸ್ವಾತಂತ್ರ್ಯ ಹೋರಾಟಗಾರರ ಪಾತ್ರವನ್ನು ಎಂದೂ ಮರೆಯುವುದಕ್ಕೆ ಸಾಧ್ಯವಿಲ್ಲ. ಪ್ರಮುಖ ಸ್ವಾತಂತ್ರ್ಯ ಹೋರಾಟಗಾರ ನರಗುಂದ ಬಾಬಾಸಾಹೇಬರು, ಜಗನ್ನಾಥ ಜೋಷಿಯವರು ಸಹ ಇದೇ ಊರಿನವರು.
1857 ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಬಾಬಾಸಾಹೇಬರು ಬ್ರಿಟಿಶರ ವಿರುದ್ಧ ದಂಗೆ ಆರಂಭಿಸಿ, ನರಗುಂದವೂ ಭಾರತದ ಸ್ವಾತಂತ್ರ್ಯ ಹೋರಾಟದ ಪುಟಗಳಲ್ಲಿ ಭದ್ರಸ್ಥಾನ ಪಡೆವಂತೆ ಮಾಡಿದರು.
ಭಾರತದಲ್ಲಿರುವ ಮೂರು ಬೃಹತ್ ರಾಷ್ಟ್ರ ದ್ಹಜಗಳಲ್ಲಿ ಒಂದನ್ನು ಪ್ರತಿವರ್ಷವೂ ನರಗುಂದ ಬೆಟ್ಟದಲ್ಲಿ ಹಾರಿಸಲಾಗುತ್ತದೆ. ಅಷ್ಟೇ ಅಲ್ಲ, ಪ್ರತಿ ಗಣರಾಜ್ಯ ದಿನ ಮತ್ತು ಸ್ವಾತಂತ್ರ್ಯ ದಿನದಂದು ಧ್ವಜಾರೋಹಣವಾಗುವ ರಾಷ್ಟ್ರಧ್ವಜ ನರಗುಂದದ ಖಾದಿ ಗ್ರಾಮೋದ್ಯೋಗದಲ್ಲೇ ತಯಾರಾಗುವಂಥದು.

ನರಗುಂದ ಗುಡ್ಡ ನೋಡುವುದಕ್ಕೆ ಮಲಗಿದ ಸಿಂಹದಂತೆಯೇ ಕಾಣಿಸುತ್ತದೆ! ಗುಡ್ಡದ ಮೇಲೆ ಸಿದ್ದೇಶ್ವರ ದೇವಸ್ಥಾನ ಹಾಗೂ ಇಳಿಜಾರಿನಲ್ಲಿ ಬೃಹತ್ತಾದ ವೆಂಕಟೇಶ್ವರ ದೇವಾಲಯವಿದೆ. ಇಲ್ಲಿನ ಪುರಸಭೆಯ ಎದುರಿಗೆ 1857 ರ ದಂಗೆಯ ಬಾಬಾಸಾಹೇಬನ ಎದೆಮಟ್ಟದ ಆಧುನಿಕ ಪ್ರತಿಮೆ ಇದೆ. ಮಲಪ್ರಭಾ ನದಿಯ ನೀರಾವರಿಯಿಂದಾಗಿ ಇಲ್ಲಿನ ರೈತರು ವಾಣಿಜ್ಯ ಬೆಳೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ಕೊಡುತ್ತಾರೆ. ನರಗುಂದ ತನ್ನ ಹತ್ತಿ ಬೆಳೆಗೆ ಪ್ರಸಿದ್ಧವಾಗಿದೆ.
ಇನ್ನು ಇಲ್ಲಿನ ರಾಜಕೀಯ ಚಿತ್ರಣದ ಬಗ್ಗೆ ಯೋಚಿಸುವುದಾದರೆ ಬಿಜೆಪಿಯ ಸ್ಥಳಿಯ ನಾಯಕರ ಅಪ್ರಬುದ್ಧ ಹೇಳಿಕೆಗಳು ಎದುರಾಳಿ ಕಾಂಗ್ರೆಸ್ ಗೆ ಲಾಭವಾಗಬಹುದು. ಕಳಸಾಬಂಡೂರಿ ಹೋರಾಟವೂ ಇಲ್ಲಿನ ರಾಜಕೀಯದ ಮೇಲೆ ಪರಿಣಾಮ ಬೀರುವುದನ್ನು ಅಲ್ಲಗಳೆಯುವಂತಿಲ್ಲ. ಈಗಾಗಲೇ ಗೆದ್ದಿರುವ ಬಿ.ಆರ್.ಯಾವಗಲ್ ಅವರಿಗೆ ಮತ್ತೊಮ್ಮೆ ಮತದಾರರನ್ನು ಸೆಳೆಯುವುದು ಕಷ್ಟದ ಕೆಲಸವಾಗಲಾರದು.
2013 ರ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ನ ಬಿ.ಆರ್.ಯಾವಗಲ್ 59620 ಮತ ಪಡೆದಿದ್ದರೆ, ಬಿಜೆಪಿಯ ಸಿ ಸಿ ಪಾಟೀಲ್ 51035 ಮತ ಗಳಿಸಿದ್ದರು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications