ನರಗುಂದದ ಮತದಾರ ಯಾರ ಕೈ ಹಿಡಿಯಲಿದ್ದಾನೆ..?
ನರಗುಂದ ಎಂದೊಡನೆ ನೆನಪಾಗುವುದು ಸ್ವಾತಂತ್ರ್ಯ ಹೋರಾಟ. ಬ್ರಿಟೀಶರನ್ನು ಭಾರತಿಂದ ಓಡಿಸುವಲ್ಲಿ ನರಗುಂದದ ಸ್ವಾತಂತ್ರ್ಯ ಹೋರಾಟಗಾರರ ಪಾತ್ರವನ್ನು ಎಂದೂ ಮರೆಯುವುದಕ್ಕೆ ಸಾಧ್ಯವಿಲ್ಲ. ಪ್ರಮುಖ ಸ್ವಾತಂತ್ರ್ಯ ಹೋರಾಟಗಾರ ನರಗುಂದ ಬಾಬಾಸಾಹೇಬರು, ಜಗನ್ನಾಥ ಜೋಷಿಯವರು ಸಹ ಇದೇ ಊರಿನವರು.
1857 ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಬಾಬಾಸಾಹೇಬರು ಬ್ರಿಟಿಶರ ವಿರುದ್ಧ ದಂಗೆ ಆರಂಭಿಸಿ, ನರಗುಂದವೂ ಭಾರತದ ಸ್ವಾತಂತ್ರ್ಯ ಹೋರಾಟದ ಪುಟಗಳಲ್ಲಿ ಭದ್ರಸ್ಥಾನ ಪಡೆವಂತೆ ಮಾಡಿದರು.
ಭಾರತದಲ್ಲಿರುವ ಮೂರು ಬೃಹತ್ ರಾಷ್ಟ್ರ ದ್ಹಜಗಳಲ್ಲಿ ಒಂದನ್ನು ಪ್ರತಿವರ್ಷವೂ ನರಗುಂದ ಬೆಟ್ಟದಲ್ಲಿ ಹಾರಿಸಲಾಗುತ್ತದೆ. ಅಷ್ಟೇ ಅಲ್ಲ, ಪ್ರತಿ ಗಣರಾಜ್ಯ ದಿನ ಮತ್ತು ಸ್ವಾತಂತ್ರ್ಯ ದಿನದಂದು ಧ್ವಜಾರೋಹಣವಾಗುವ ರಾಷ್ಟ್ರಧ್ವಜ ನರಗುಂದದ ಖಾದಿ ಗ್ರಾಮೋದ್ಯೋಗದಲ್ಲೇ ತಯಾರಾಗುವಂಥದು.

ನರಗುಂದ ಗುಡ್ಡ ನೋಡುವುದಕ್ಕೆ ಮಲಗಿದ ಸಿಂಹದಂತೆಯೇ ಕಾಣಿಸುತ್ತದೆ! ಗುಡ್ಡದ ಮೇಲೆ ಸಿದ್ದೇಶ್ವರ ದೇವಸ್ಥಾನ ಹಾಗೂ ಇಳಿಜಾರಿನಲ್ಲಿ ಬೃಹತ್ತಾದ ವೆಂಕಟೇಶ್ವರ ದೇವಾಲಯವಿದೆ. ಇಲ್ಲಿನ ಪುರಸಭೆಯ ಎದುರಿಗೆ 1857 ರ ದಂಗೆಯ ಬಾಬಾಸಾಹೇಬನ ಎದೆಮಟ್ಟದ ಆಧುನಿಕ ಪ್ರತಿಮೆ ಇದೆ. ಮಲಪ್ರಭಾ ನದಿಯ ನೀರಾವರಿಯಿಂದಾಗಿ ಇಲ್ಲಿನ ರೈತರು ವಾಣಿಜ್ಯ ಬೆಳೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ಕೊಡುತ್ತಾರೆ. ನರಗುಂದ ತನ್ನ ಹತ್ತಿ ಬೆಳೆಗೆ ಪ್ರಸಿದ್ಧವಾಗಿದೆ.
ಇನ್ನು ಇಲ್ಲಿನ ರಾಜಕೀಯ ಚಿತ್ರಣದ ಬಗ್ಗೆ ಯೋಚಿಸುವುದಾದರೆ ಬಿಜೆಪಿಯ ಸ್ಥಳಿಯ ನಾಯಕರ ಅಪ್ರಬುದ್ಧ ಹೇಳಿಕೆಗಳು ಎದುರಾಳಿ ಕಾಂಗ್ರೆಸ್ ಗೆ ಲಾಭವಾಗಬಹುದು. ಕಳಸಾಬಂಡೂರಿ ಹೋರಾಟವೂ ಇಲ್ಲಿನ ರಾಜಕೀಯದ ಮೇಲೆ ಪರಿಣಾಮ ಬೀರುವುದನ್ನು ಅಲ್ಲಗಳೆಯುವಂತಿಲ್ಲ. ಈಗಾಗಲೇ ಗೆದ್ದಿರುವ ಬಿ.ಆರ್.ಯಾವಗಲ್ ಅವರಿಗೆ ಮತ್ತೊಮ್ಮೆ ಮತದಾರರನ್ನು ಸೆಳೆಯುವುದು ಕಷ್ಟದ ಕೆಲಸವಾಗಲಾರದು.
2013 ರ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ನ ಬಿ.ಆರ್.ಯಾವಗಲ್ 59620 ಮತ ಪಡೆದಿದ್ದರೆ, ಬಿಜೆಪಿಯ ಸಿ ಸಿ ಪಾಟೀಲ್ 51035 ಮತ ಗಳಿಸಿದ್ದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications