ಕ್ಷೇತ್ರ ಪರಿಚಯ : ಬೆಂಗಳೂರಿನ ಹೆಬ್ಬಾಗಿಲಿನಲ್ಲಿ ಯಾರಿಗೆ ಜಯ?
ಎರಡು ರಾಷ್ಟ್ರೀಯ ಹೆದ್ದಾರಿಗಳನ್ನು ತನ್ನ ಒಡಲಲ್ಲಿ ಹೊಂದಿರುವ ಕ್ಷೇತ್ರ ನೆಲಮಂಗಲ. ಕರ್ನಾಟಕದ ರಾಜಧಾನಿ ಬೆಂಗಳೂರಿನ ಹೆಬ್ಬಾಗಿಲು ಎಂದು ನೆಲಮಂಗಲವನ್ನು ಕರೆಯಲಾಗುತ್ತದೆ.
ಬೆಂಗಳೂರು-ಮಂಗಳೂರು, ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯನ್ನು ಒಡಲಿಲ್ಲಿ ಹೊಂದಿದೆ ನೆಲಮಂಗಲ. ರಾಷ್ಟ್ರೀಯ ಹೆದ್ದಾರಿ ಇರುವ ಕಾರಣಕ್ಕೆ ರಸ್ತೆ ಅಕ್ಕ-ಪಕ್ಕದ ಭೂಮಿಗೆ ಬಂಗಾರದ ಬೆಲೆ ಇದೆ. ಹಲವಾರು ಕೆರೆಗಳನ್ನು ಕ್ಷೇತ್ರ ಹೊಂದಿದೆ. ಕೆರೆಗೆ ನೀರನ್ನು ಆರಸಿ ಬರುವ ಆನೆಗಳು ರೈತರ ಬೆಳೆಗೆ ಸಂಕಷ್ಟ ತರುತ್ತವೆ.
ಕಿರ್ಲೋಸ್ಕರ್, ಜಿಂದಾಲ್ ಸೇರಿದಂತೆ ವಿವಿಧ ಕಂಪನಿ, 30ಕ್ಕೂ ಹೆಚ್ಚು ಬ್ಯಾಂಕುಗಳು, ಎರಡು ಕೈಗಾರಿಕಾ ಪ್ರದೇಶಗಳು, ನೀರು ಕಲುಷಿತಗೊಂಡಿರುವ ಬೃಹತ್ ಕೆರೆ ಕ್ಷೇತ್ರದ ವ್ಯಾಪ್ತಿಯಲ್ಲಿದೆ.

ವಿಶ್ವಶಾಂತಿ ಆಶ್ರಮ, ಮಹಾಲಿಂಗೇಶ್ವರ ದೇವಾಲಯ, ಶಿವಗಂಗೆ ಬೆಟ್ಟ ಸೇರಿದಂತೆ ವಿವಿಧ ಪ್ರವಾಸಿ ತಾಣಗಳನ್ನು ಕ್ಷೇತ್ರ ಒಳಗೊಂಡಿದೆ. ಬೆಂಗಳೂರು ನಗರಕ್ಕೆ ಹತ್ತಿರದಲ್ಲಿರುವುದರಿಂದ ವಾರಾಂತ್ಯದಲ್ಲಿ ಪ್ರವಾಸಿ ತಾಣಗಳಲ್ಲಿ ಜನರು ಹೆಚ್ಚಿರುತ್ತಾರೆ.
ರಾಜಕೀಯವಾಗಿ ಕ್ಷೇತ್ರ ಜೆಡಿಎಸ್ ವಶದಲ್ಲಿದೆ. ಶಾಸಕ ಡಾ.ಶ್ರೀನಿವಾಸಮೂರ್ತಿ ಕ್ಷೇತ್ರದ ಶಾಸಕರು. ಈ ಕ್ಷೇತ್ರದಲ್ಲಿ ಒಂದು ಬಾರಿ ಮಾತ್ರ ಬಿಜೆಪಿ ಗೆದ್ದಿರುವುದು ಅಚ್ಚರಿಯ ಸಂಗತಿ. ಬಿಜೆಪಿ ಕ್ಷೇತ್ರದಲ್ಲಿ ಯಶಸ್ವಿಯಾಗಲು ಪ್ರಯತ್ನ ಪಡುತ್ತಲೇ ಇದೆ.
ಬಿಜೆಪಿಯ ಎಂ.ವಿ.ನಾಗರಾಜು ಒಮ್ಮೆ ಕ್ಷೇತ್ರದಲ್ಲಿ ಗೆದಿದ್ದರು. ಉಳಿದಂತೆ ಕಾಂಗ್ರೆಸ್-ಜೆಡಿಎಸ್ ಗೆಲುವು ಸಾಧಿಸುತ್ತಿವೆ. ಡಾ.ಶ್ರೀನಿವಾಸ ಮೂರ್ತಿ ಅವರಿಗೆ ಈ ಬಾರಿಯೂ ಜೆಡಿಎಸ್ ಟಿಕೆಟ್ ಖಚಿತ. ಕಾಂಗ್ರೆಸ್ನ ಅಂಜನಮೂರ್ತಿ ಕಳೆದ ಚುನಾವಣೆಯಲ್ಲಿ 15 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದರು.
ಡಾ.ಶ್ರೀನಿವಾಸಮೂರ್ತಿ ಜನರ ಕೈಗೆ ಸುಲಭವಾಗಿ ಸಿಗುತ್ತಾರೆ. ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ. ಕಾಂಗ್ರೆಸ್ ಮತ್ತೆ ಅಂಜನಮೂರ್ತಿ ಅವರಿಗೆ ಟಿಕೆಟ್ ಕೊಡಲಿದೆ. ಈ ಬಾರಿ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಇನ್ನೂ ಖಚಿತವಾಗಿಲ್ಲ.
2013ರ ಚುನಾವಣೆಯಲ್ಲಿ ಡಾ.ಕೆ.ಶ್ರೀನಿವಾಸಮೂರ್ತಿ ಅವರು 60,492 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ನ ಅಂಜನಮೂರ್ತಿ ಅವರು 45,389 ಮತ, ಎಂ.ವಿ.ನಾಗರಾಜು ಅವರು 19,368 ಮತಗಳನ್ನು ಪಡೆದಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications