ಕ್ಷೇತ್ರ ಪರಿಚಯ : ಬಿಸಿಲನಾಡು ರಾಯಚೂರಲ್ಲಿ ಗೆಲ್ಲುವವರು ಯಾರು?
ಹೈದರಾಬಾದ್-ಕರ್ನಾಟಕ ಭಾಗದ ಪ್ರಮುಖ ಜಿಲ್ಲೆ ರಾಯಚೂರು. ನಾಡಿಗೆ ಬೆಳಕನ್ನು ನೀಡುವ ಉಷ್ಣ ವಿದ್ಯುತ್ ಸ್ಥಾವರವನ್ನು ತನ್ನ ಒಡಲಲ್ಲಿ ಹೊಂದಿರುವ ಕ್ಷೇತ್ರ ರಾಯಚೂರು ನಗರ. ಉಷ್ಣ ವಿದ್ಯುತ್ ಸ್ಥಾವರದ ಜೊತೆ ಬಿಸಿಲಿನ ಶಾಖವೂ ರಾಯಚೂರಿನಲ್ಲಿ ಹೆಚ್ಚು.
ರಾಯಚೂರು ನಗರ ಕ್ಷೇತ್ರದಲ್ಲಿ ಮೂಲ ಸೌಕರ್ಯಗಳ ವ್ಯವಸ್ಥೆ ಇನ್ನೂ ಉತ್ತಮವಾಗಬೇಕು. ಐಐಟಿ ಕೇಂದ್ರವನ್ನು ಪಡೆಯುವ ಜಿಲ್ಲೆಗಳ ಸಾಲಿನಲ್ಲಿ ರಾಯಚೂರು ಇತ್ತು. ಕೊನೆ ಕ್ಷಣದಲ್ಲಿ ಐಐಟಿ ಧಾರವಾಡದ ಪಾಲಾಯಿತು.
ರಾಯಚೂರು ನಗರ ಕ್ಷೇತ್ರದ ಶಾಸಕರು ಜೆಡಿಎಸ್ನ ಶಿವರಾಜ ಪಾಟೀಲ. 2018ರ ಜನವರಿಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದಾರೆ. ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಜಾಫರ್ ಷರೀಫ್ ಅವರ ಅಳಿಯ ಸೈಯದ್ ಯಾಸಿನ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ.

ಬಿಜೆಪಿಯಲ್ಲಿದ್ದು ಒಮ್ಮೆ ಶಾಸಕರಾಗಿ ಆಯ್ಕೆಯಾಗಿದ್ದ ಎ.ಪಾಪರೆಡ್ಡಿ ಅವರು ಕಾಂಗ್ರೆಸ್ ಸೇರಿದ್ದರು. ಈಗ ಅವರು ಬಿಜೆಪಿಗೆ ಮರಳಿದ್ದಾರೆ. ಮುಸ್ಲಿಂ, ಕಮ್ಮ, ಲಿಂಗಾಯತ ಸಮುದಾಯದ ಮತಗಳು ಕ್ಷೇತ್ರದಲ್ಲಿ ನಿರ್ಣಾಯಕವಾಗಿವೆ.
ಕಳೆದ ಬಾರಿ ಕಾಂಗ್ರೆಸ್ ಪಕ್ಷದಲ್ಲಿನ ಒಳಜಗಳ, ಪ್ರಬಲವಿಲ್ಲದ ಬಿಜೆಪಿ ಅಭ್ಯರ್ಥಿಯಿಂದಾಗಿ ಶಿವರಾಜ ಪಾಟೀಲ್ ಗೆಲುವು ಕಂಡಿದ್ದರು. ಆದರೆ, ಈ ಬಾರಿ ಅವರು ಬಿಜೆಪಿಯಿಂದ ಸ್ಪರ್ಧಿಸಲಿದ್ದು, ಗೆಲುವು ಅಷ್ಟು ಸುಲಭವಿಲ್ಲ.
2013ರ ಚುನಾವಣೆಯಲ್ಲಿ ಡಾ.ಶಿವರಾಜ್ ಪಾಟೀಲ್ 45,263 ಮತ, ಕಾಂಗ್ರೆಸ್ನ ಸೈಯದ್ ಯಾಸೀನ್ 37,392 ಮತ, ಬಿಜೆಪಿಯ ತ್ರಿವಿಕ್ರಮ ಜೋಷಿ 6,186 ಮತಗಳನ್ನು ಪಡೆದಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications