Get Updates
Get notified of breaking news, exclusive insights, and must-see stories!

ಕ್ಷೇತ್ರ ಪರಿಚಯ : ಬಿಸಿಲನಾಡು ರಾಯಚೂರಲ್ಲಿ ಗೆಲ್ಲುವವರು ಯಾರು?

ಹೈದರಾಬಾದ್-ಕರ್ನಾಟಕ ಭಾಗದ ಪ್ರಮುಖ ಜಿಲ್ಲೆ ರಾಯಚೂರು. ನಾಡಿಗೆ ಬೆಳಕನ್ನು ನೀಡುವ ಉಷ್ಣ ವಿದ್ಯುತ್ ಸ್ಥಾವರವನ್ನು ತನ್ನ ಒಡಲಲ್ಲಿ ಹೊಂದಿರುವ ಕ್ಷೇತ್ರ ರಾಯಚೂರು ನಗರ. ಉಷ್ಣ ವಿದ್ಯುತ್ ಸ್ಥಾವರದ ಜೊತೆ ಬಿಸಿಲಿನ ಶಾಖವೂ ರಾಯಚೂರಿನಲ್ಲಿ ಹೆಚ್ಚು.

ರಾಯಚೂರು ನಗರ ಕ್ಷೇತ್ರದಲ್ಲಿ ಮೂಲ ಸೌಕರ್ಯಗಳ ವ್ಯವಸ್ಥೆ ಇನ್ನೂ ಉತ್ತಮವಾಗಬೇಕು. ಐಐಟಿ ಕೇಂದ್ರವನ್ನು ಪಡೆಯುವ ಜಿಲ್ಲೆಗಳ ಸಾಲಿನಲ್ಲಿ ರಾಯಚೂರು ಇತ್ತು. ಕೊನೆ ಕ್ಷಣದಲ್ಲಿ ಐಐಟಿ ಧಾರವಾಡದ ಪಾಲಾಯಿತು.

ರಾಯಚೂರು ನಗರ ಕ್ಷೇತ್ರದ ಶಾಸಕರು ಜೆಡಿಎಸ್‌ನ ಶಿವರಾಜ ಪಾಟೀಲ. 2018ರ ಜನವರಿಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದಾರೆ. ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಜಾಫರ್ ಷರೀಫ್ ಅವರ ಅಳಿಯ ಸೈಯದ್ ಯಾಸಿನ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ.

Karnataka Assembly Election 2018 : Raichur constituency profile

ಬಿಜೆಪಿಯಲ್ಲಿದ್ದು ಒಮ್ಮೆ ಶಾಸಕರಾಗಿ ಆಯ್ಕೆಯಾಗಿದ್ದ ಎ.ಪಾಪರೆಡ್ಡಿ ಅವರು ಕಾಂಗ್ರೆಸ್ ಸೇರಿದ್ದರು. ಈಗ ಅವರು ಬಿಜೆಪಿಗೆ ಮರಳಿದ್ದಾರೆ. ಮುಸ್ಲಿಂ, ಕಮ್ಮ, ಲಿಂಗಾಯತ ಸಮುದಾಯದ ಮತಗಳು ಕ್ಷೇತ್ರದಲ್ಲಿ ನಿರ್ಣಾಯಕವಾಗಿವೆ.

ಕಳೆದ ಬಾರಿ ಕಾಂಗ್ರೆಸ್ ಪಕ್ಷದಲ್ಲಿನ ಒಳಜಗಳ, ಪ್ರಬಲವಿಲ್ಲದ ಬಿಜೆಪಿ ಅಭ್ಯರ್ಥಿಯಿಂದಾಗಿ ಶಿವರಾಜ ಪಾಟೀಲ್ ಗೆಲುವು ಕಂಡಿದ್ದರು. ಆದರೆ, ಈ ಬಾರಿ ಅವರು ಬಿಜೆಪಿಯಿಂದ ಸ್ಪರ್ಧಿಸಲಿದ್ದು, ಗೆಲುವು ಅಷ್ಟು ಸುಲಭವಿಲ್ಲ.

2013ರ ಚುನಾವಣೆಯಲ್ಲಿ ಡಾ.ಶಿವರಾಜ್ ಪಾಟೀಲ್ 45,263 ಮತ, ಕಾಂಗ್ರೆಸ್‌ನ ಸೈಯದ್ ಯಾಸೀನ್ 37,392 ಮತ, ಬಿಜೆಪಿಯ ತ್ರಿವಿಕ್ರಮ ಜೋಷಿ 6,186 ಮತಗಳನ್ನು ಪಡೆದಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+