ಕ್ಷೇತ್ರ ಪರಿಚಯ : ರಾಯಚೂರು ಗ್ರಾಮಾಂತರದಲ್ಲಿ ಯಾರಿಗೆ ಜಯ?
ನಕ್ಸಲ್ ಪೀಡಿತ ಗ್ರಾಮಗಳಿರುವ ಕ್ಷೇತ್ರ ರಾಯಚೂರು ಗ್ರಾಮಾಂತರ. ಪಕ್ಷ, ಅಭಿವೃದ್ಧಿ ವಿಚಾರಗಳಿಗಿಂತ ವ್ಯಕ್ತಿಗೆ ಹೆಚ್ಚಿನ ಆದ್ಯತೆ ನೀಡುವ ಕ್ಷೇತ್ರವಿದು. ಹೊರಗಿನಿಂದ ಬಂದು ಚುನಾವಣೆಗೆ ಸ್ಪರ್ಧಿಸಿದರೂ ಅವರನ್ನು ಇಲ್ಲಿನ ಮತದಾರರು ಗೆಲ್ಲಿಸಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎಂಬ ಕೂಗು ಎದ್ದಿದೆ. ರಾಯಚೂರು ಗ್ರಾಮಾಂತರ ಕ್ಷೇತ್ರ ಬಿಜೆಪಿಯ ವಶದಲ್ಲಿದೆ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಷ್ಟ ಪಡಬೇಕು.
ಪ್ರಸ್ತುತ ಕ್ಷೇತ್ರದ ಶಾಸಕರು ಬಿಜೆಪಿಯ ತಿಪ್ಪರಾಜು. ಈ ಬಾರಿಯು ಅವರಿಗೆ ಟಿಕೆಟ್ ಸಿಗುವುದು ಬಹುತೇಕ ಖಚಿತವಾಗಿದೆ. ಆದರೆ, ದೇವದುರ್ಗದ ಬಿಜೆಪಿ ಶಾಸಕ, ಮಾಜಿ ಸಚಿವ ಶಿವನಗೌಡ ನಾಯಕ ಮತ್ತು ತಿಪ್ಪರಾಜು ನಡುವೆ ಅಸಮಾಧಾನವಿದೆ.

ದೇವದುರ್ಗ ಉಪ ಚುನಾವಣೆಯಲ್ಲಿ ತಿಪ್ಪರಾಜು ಅವರು ಸಹಕಾರ ನೀಡಲಿಲ್ಲ ಎಂಬುದು ಅಸಮಾಧಾನಕ್ಕೆ ಕಾರಣವಾಗಿದೆ. ಶಿವನಗೌಡ ನಾಯಕ ಅವರ ಬೆಂಬಲ ಸಿಕ್ಕರೆ ತಿಪ್ಪರಾಜು ಅವರು ಗೆಲುವು ಸಾಧಿಸಬಹುದು.
ಕಾಂಗ್ರೆಸ್ ಪಕ್ಷದಲ್ಲಿ ಕ್ಷೇತ್ರದ ಟಿಕೆಟ್ಗೆ ಪೈಪೋಟಿ ಆರಂಭವಾಗಿದೆ. ಜಾರಕಿಹೊಳಿ ಕುಟುಂಬದ ಸಂಬಂಧಿಯಾಗಿರುವ ರವಿ ಪಾಟೀಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಎಂಎಲ್ಸಿ, ಎನ್.ಎಸ್.ಬೋಸರಾಜು ಆಪ್ತರಾದ ರಾಯಪ್ಪ ಟಿಕೆಟ್ ಆಕಾಂಕ್ಷಿಗಳು.
2013ರ ಚುನಾವಣೆಯಲ್ಲಿ ತಿಪ್ಪರಾಜು ಅವರು 50,497 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ನ ರಾಜಾ ರಾಯಪ್ಪ ನಾಯಕ್ 47,227 ಮತ, ಜೆಡಿಎಸ್ನ ರಾಜಾ ಅಮರೇಶ್ವರ ನಾಯಕ್ 21,584 ಮತಗಳನ್ನು ಪಡೆದಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications