ಕ್ಷೇತ್ರ ಪರಿಚಯ : ರಾಯಚೂರು ಗ್ರಾಮಾಂತರದಲ್ಲಿ ಯಾರಿಗೆ ಜಯ?
ನಕ್ಸಲ್ ಪೀಡಿತ ಗ್ರಾಮಗಳಿರುವ ಕ್ಷೇತ್ರ ರಾಯಚೂರು ಗ್ರಾಮಾಂತರ. ಪಕ್ಷ, ಅಭಿವೃದ್ಧಿ ವಿಚಾರಗಳಿಗಿಂತ ವ್ಯಕ್ತಿಗೆ ಹೆಚ್ಚಿನ ಆದ್ಯತೆ ನೀಡುವ ಕ್ಷೇತ್ರವಿದು. ಹೊರಗಿನಿಂದ ಬಂದು ಚುನಾವಣೆಗೆ ಸ್ಪರ್ಧಿಸಿದರೂ ಅವರನ್ನು ಇಲ್ಲಿನ ಮತದಾರರು ಗೆಲ್ಲಿಸಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎಂಬ ಕೂಗು ಎದ್ದಿದೆ. ರಾಯಚೂರು ಗ್ರಾಮಾಂತರ ಕ್ಷೇತ್ರ ಬಿಜೆಪಿಯ ವಶದಲ್ಲಿದೆ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಷ್ಟ ಪಡಬೇಕು.
ಪ್ರಸ್ತುತ ಕ್ಷೇತ್ರದ ಶಾಸಕರು ಬಿಜೆಪಿಯ ತಿಪ್ಪರಾಜು. ಈ ಬಾರಿಯು ಅವರಿಗೆ ಟಿಕೆಟ್ ಸಿಗುವುದು ಬಹುತೇಕ ಖಚಿತವಾಗಿದೆ. ಆದರೆ, ದೇವದುರ್ಗದ ಬಿಜೆಪಿ ಶಾಸಕ, ಮಾಜಿ ಸಚಿವ ಶಿವನಗೌಡ ನಾಯಕ ಮತ್ತು ತಿಪ್ಪರಾಜು ನಡುವೆ ಅಸಮಾಧಾನವಿದೆ.

ದೇವದುರ್ಗ ಉಪ ಚುನಾವಣೆಯಲ್ಲಿ ತಿಪ್ಪರಾಜು ಅವರು ಸಹಕಾರ ನೀಡಲಿಲ್ಲ ಎಂಬುದು ಅಸಮಾಧಾನಕ್ಕೆ ಕಾರಣವಾಗಿದೆ. ಶಿವನಗೌಡ ನಾಯಕ ಅವರ ಬೆಂಬಲ ಸಿಕ್ಕರೆ ತಿಪ್ಪರಾಜು ಅವರು ಗೆಲುವು ಸಾಧಿಸಬಹುದು.
ಕಾಂಗ್ರೆಸ್ ಪಕ್ಷದಲ್ಲಿ ಕ್ಷೇತ್ರದ ಟಿಕೆಟ್ಗೆ ಪೈಪೋಟಿ ಆರಂಭವಾಗಿದೆ. ಜಾರಕಿಹೊಳಿ ಕುಟುಂಬದ ಸಂಬಂಧಿಯಾಗಿರುವ ರವಿ ಪಾಟೀಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಎಂಎಲ್ಸಿ, ಎನ್.ಎಸ್.ಬೋಸರಾಜು ಆಪ್ತರಾದ ರಾಯಪ್ಪ ಟಿಕೆಟ್ ಆಕಾಂಕ್ಷಿಗಳು.
2013ರ ಚುನಾವಣೆಯಲ್ಲಿ ತಿಪ್ಪರಾಜು ಅವರು 50,497 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ನ ರಾಜಾ ರಾಯಪ್ಪ ನಾಯಕ್ 47,227 ಮತ, ಜೆಡಿಎಸ್ನ ರಾಜಾ ಅಮರೇಶ್ವರ ನಾಯಕ್ 21,584 ಮತಗಳನ್ನು ಪಡೆದಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications