ರಾಮದುರ್ಗ ಕ್ಷೇತ್ರ ಪರಿಚಯ : ಗೊಡಚಿ ವೀರಭದ್ರೇಶ್ವರ ಕೃಪೆ ಯಾರಿಗೆ?
ಬೆಳಗಾವಿ, ಏಪ್ರಿಲ್ 11 : ಬೆಳಗಾವಿ ಜಿಲ್ಲೆಯ ಒಂದು ತಾಲೂಕು ಕೇಂದ್ರ ರಾಮದುರ್ಗ. ಮಲಪ್ರಭಾ ನದಿಯ ದಡದಲ್ಲಿರುವ ಕ್ಷೇತ್ರವಿದು. ತಾಲೂಕಿನ ಗೊಡಚಿ ವೀರಭದ್ರೇಶ್ವರ ದೇವಾಲಯ ತುಂಬಾ ಪ್ರಸಿದ್ಧಿ ಪಡೆದಿದೆ.
2011ರ ಜನಗಣತಿ ಪ್ರಕಾರ ರಾಮದುರ್ಗ ಕ್ಷೇತ್ರದ ಜನಸಂಖ್ಯೆ 31822. ತಾಲೂಕಿನ ಕಿತ್ತೂರ ಗ್ರಾಮದ ಕಂಬಳಿಗಳು ಬಹಳ ಪ್ರಸಿದ್ಧಿ ಪಡೆದಿವೆ. ಪ್ರತಿ ವರ್ಷದ ಡಿಸೆಂಬರ್ನಲ್ಲಿ ಗೊಡಚಿ ವೀರಭದ್ರೇಶ್ವರ ಜಾತ್ರೆ ನಡೆಯುತ್ತದೆ. ಸಾವಿರಾರು ಭಕ್ತರು ಇದರಲ್ಲಿ ಪಾಲ್ಗೊಳ್ಳುತ್ತಾರೆ.
ರಾಜ್ಯ ಸರ್ಕಾರ ರಾಮುದುರ್ಗ ಸಂಸ್ಥಾನಿಕರ ಕಾಲದ ಕಾರಾಗೃಹವನ್ನು ಸುಮಾರು 60 ಲಕ್ಷ ವೆಚ್ಚದಲ್ಲಿ ನವೀಕರಣ ಮಾಡಿದೆ. ಆಕರ್ಷಕ ವಸ್ತು ಸಂಗ್ರಹಾಲಯವನ್ನು ನಿರ್ಮಾಣ ಮಾಡಲಾಗಿದೆ. ರಾಮದುರ್ಗ ಅರಸು ಮನೆತನದ ಕುರುಹುಗಳನ್ನು ಇಲ್ಲಿ ಕಾಣಬಹುದಾಗಿದೆ.

ರಾಜಕೀಯವಾಗಿ ಕ್ಷೇತ್ರದ ಶಾಸಕರು ಕಾಂಗ್ರೆಸ್ನ ಅಶೋಕ ಪಟ್ಟಣ. ಸ್ವಾತಂತ್ರ್ಯ ನಂತರದಿಂದ ಇಲ್ಲಿಯ ವರೆಗೆ ಕ್ಷೇತ್ರದಲ್ಲಿ ಲಿಂಗಾಯತ ಮತ್ತು ಲಿಂಗಾಯತ ರೆಡ್ಡಿ ಸಮುದಾಯವರದ್ದೆ ಅಧಿಕಾರವಿದೆ. ಈ ಬಾರಿಯೂ ಅಶೋಕ ಪಟ್ಟಣ ಮತ್ತೊಮ್ಮೆ ಆಯ್ಕೆಯಾಗುವ ಸಾಧ್ಯತೆ ಇದೆ.
ಕ್ಷೇತ್ರದ ಬಿಜೆಪಿ ನಾಯಕರು ಅಸಮಾಧಾನವನ್ನು ಬದಿಗೊತ್ತಿದರೆ ಅಶೋಕ ಪಟ್ಟಣ ಅವರನ್ನು ಸೋಲಿಸಬಹುದಾಗಿದೆ. ಜೆಡಿಎಸ್ ಪಕ್ಷ ಮುಸ್ಲಿಂ ಸಮುದಾಯಕ್ಕೆ ಸೇರಿದ ಜಾವೇದ್ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿದೆ.
2013ರಲ್ಲಿ ಅಶೋಕ ಪಟ್ಟಣ ಅವರು 42,310 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿಯ ಮಹದೇವಪ್ಪ ಯದವಾಡ ಅವರು 37,326 ಮತ ಪಡೆದಿದ್ದರು. ಜೆಡಿಎಸ್ನಿಂದ ಕಣಕ್ಕಿಳಿದಿದ್ದ ಪಾರಪ್ಪ ಗೌಡ ಪಾಟೀಲ ಅವರು 17,303 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದಿದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications