ರಾಯಭಾಗ ಕ್ಷೇತ್ರ: ಬಿಜೆಪಿಯ ದುರ್ಯೋಧನ ಐಹೊಳೆಗೆ ಹ್ಯಾಟ್ರಿಕ್ ಜಯದ ಕನಸು
ರಾಯಭಾಗ ಬೆಳಗಾವಿ ಜಿಲ್ಲೆಯ ಒಂದು ಪಟ್ಟಣ ಮತ್ತು ತಾಲೂಕು. ಇಲ್ಲಿ ಬಾಳೆ ಮತ್ತು ಕಬ್ಬನ್ನು ಹೆಚ್ಚಾಗಿ ಬೆಳೆಯುತ್ತಾರೆ. ರಾಯಭಾಗದಲ್ಲೊಂದು ಬ್ರಿಟೀಷರು ಕಟ್ಟಿದ ಅತ್ಯಂತ ಹಳೆಯ ರೈಲ್ವೇ ನಿಲ್ದಾಣವೂ ಇದೆ.
ಪರಿಶಿಷ್ಟ ಜಾತಿಗೆ ಮೀಸಲಾಗಿರುವ ರಾಯಭಾಗ ಕ್ಷೇತ್ರವನ್ನು ಬಿಜೆಪಿಯ ದುರ್ಯೋಧನ ಐಹೊಳೆ ಪ್ರತಿನಿಧಿಸುತ್ತಿದ್ದಾರೆ. 2008ರಲ್ಲೂ ಅವರು ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು.
ಹಾಗೆ ನೋಡಿದರೆ ರಾಯಭಾಗ ಕ್ಷೇತ್ರ ಕಾಂಗ್ರೆಸ್ ಪಾಲಿನ ಭದ್ರಕೋಟೆಯಾಗಿತ್ತು. ಆದರೆ 2004ರಲ್ಲಿ ಕಾಂಗ್ರೆಸ್ ಕೋಟೆಗೆ ಜೆಡಿಯುನ ಸರಿಕರ್ ಭೀಮಪ್ಪ ಕನ್ನ ಕೊರೆದರು. ಮುಂದೆ 2008ರಲ್ಲಿ ಮತ್ತು 13ರಲ್ಲಿ ಬಿಜೆಪಿಯ ದುರ್ಯೋಧನ ಐಹೊಳೆ ಇಲ್ಲಿ ಸತತ ಗೆಲುವು ಸಾಧಿಸಿದರು.

2008ರಲ್ಲಿ ಐಹೊಳೆ ಗೆಲುವು ಸಾಧಿಸಿದಾಗ ಕಾಂಗ್ರೆಸಿನ ಓಂ ಪ್ರಕಾಶ್ ಕನಗಳಿ ಎರಡನೇ ಸ್ಥಾನವನ್ನು ಪಡೆದಿದ್ದರು. 2013ರಲ್ಲಿ ಬಿಜೆಪಿ ಅಭ್ಯರ್ಥಿ ಐಹೊಳೆ 37,535 ಮತಗಳನ್ನು ಪಡೆದು ಜಯ ಸಾಧಿಸಿದರು. ಎರಡನೇ ಸ್ಥಾನವನ್ನು ಸ್ವತಂತ್ರ ಅಭ್ಯರ್ಥಿ ಪ್ರದೀಪ್ ಮಳಗಿ ಪಡೆದಿದ್ದರು. ಅವರು ಈ ಚುನಾವಣೆಯಲ್ಲಿ 36,706 ಮತಗಳನ್ನು ಪಡೆದಿದ್ದರು. ಇನ್ನು ಈ ಚುನಾವಣೆಯಲ್ಲಿ ಕಾಂಗ್ರೆಸಿನ ಸುಕುಮಾರ್ ಪುಂಡಲೀಕ್ 30,043 ಮತಗಳನ್ನಷ್ಟೇ ಪಡೆದಿದ್ದರು.
ಈ ಬಾರಿ ಇಲ್ಲಿ ಬಿಜೆಪಿ ಮತ್ತೆ ದುರ್ಯೋಧನ ಐಹೊಳೆಯರಿಗೆ ಟಿಕೆಟ್ ನೀಡಿದೆ. ಅವರು ಇಲ್ಲಿ ಹ್ಯಾಟ್ರಿಕ್ ಗೆಲುವಿನ ಕನಸು ಕಾಣುತ್ತಿದ್ದಾರೆ. ಇದೇ ಕ್ಷೇತ್ರದಲ್ಲಿ 2013ರಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಎರಡನೇ ಸ್ಥಾನ ಪಡೆದಿದ್ದ ಪ್ರದೀಪ್ ಕುಮಾರ್ ಮಳಗಿಯವರಿಗೆ ಕಾಂಗ್ರೆಸ್ ಈ ಬಾರಿ ಟಿಕೆಟ್ ನೀಡಿದೆ. ಮಳಗಿ ಸ್ವಂತ ಮತಗಳು ಮತ್ತು ಪಕ್ಷದ ಮತಗಳು ಸೇರಿದರೆ ಐಹೊಳೆಯವರನ್ನು ಸೋಲಿಸಬಹುದು ಎಂಬುದು ಕಾಂಗ್ರೆಸ್ ಲೆಕ್ಕಾಚಾರವಾಗಿದೆ.
ಕಾಂಗ್ರೆಸ್ ಲೆಕ್ಕಚಾರ ಫಲಿಸುತ್ತಾ ಅಥವಾ ಬಿಜೆಪಿಯ ದುರ್ಯೋಧನ ಐಹೊಳೆ ಹ್ಯಾಟ್ರಿಕ್ ಜಯ ಸಾಧಿಸುತ್ತಾರಾ ಎಂಬುದಕ್ಕೆ ಮೇ 15ರಂದು ಉತ್ತರ ದೊರೆಯಲಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications