Get Updates
Get notified of breaking news, exclusive insights, and must-see stories!

ರಾಯಭಾಗ ಕ್ಷೇತ್ರ: ಬಿಜೆಪಿಯ ದುರ್ಯೋಧನ ಐಹೊಳೆಗೆ ಹ್ಯಾಟ್ರಿಕ್ ಜಯದ ಕನಸು

ರಾಯಭಾಗ ಬೆಳಗಾವಿ ಜಿಲ್ಲೆಯ ಒಂದು ಪಟ್ಟಣ ಮತ್ತು ತಾಲೂಕು. ಇಲ್ಲಿ ಬಾಳೆ ಮತ್ತು ಕಬ್ಬನ್ನು ಹೆಚ್ಚಾಗಿ ಬೆಳೆಯುತ್ತಾರೆ. ರಾಯಭಾಗದಲ್ಲೊಂದು ಬ್ರಿಟೀಷರು ಕಟ್ಟಿದ ಅತ್ಯಂತ ಹಳೆಯ ರೈಲ್ವೇ ನಿಲ್ದಾಣವೂ ಇದೆ.

ಪರಿಶಿಷ್ಟ ಜಾತಿಗೆ ಮೀಸಲಾಗಿರುವ ರಾಯಭಾಗ ಕ್ಷೇತ್ರವನ್ನು ಬಿಜೆಪಿಯ ದುರ್ಯೋಧನ ಐಹೊಳೆ ಪ್ರತಿನಿಧಿಸುತ್ತಿದ್ದಾರೆ. 2008ರಲ್ಲೂ ಅವರು ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು.

ಹಾಗೆ ನೋಡಿದರೆ ರಾಯಭಾಗ ಕ್ಷೇತ್ರ ಕಾಂಗ್ರೆಸ್ ಪಾಲಿನ ಭದ್ರಕೋಟೆಯಾಗಿತ್ತು. ಆದರೆ 2004ರಲ್ಲಿ ಕಾಂಗ್ರೆಸ್ ಕೋಟೆಗೆ ಜೆಡಿಯುನ ಸರಿಕರ್ ಭೀಮಪ್ಪ ಕನ್ನ ಕೊರೆದರು. ಮುಂದೆ 2008ರಲ್ಲಿ ಮತ್ತು 13ರಲ್ಲಿ ಬಿಜೆಪಿಯ ದುರ್ಯೋಧನ ಐಹೊಳೆ ಇಲ್ಲಿ ಸತತ ಗೆಲುವು ಸಾಧಿಸಿದರು.

Karnataka Assembly Election 2018: Raybag Constituency Profile

2008ರಲ್ಲಿ ಐಹೊಳೆ ಗೆಲುವು ಸಾಧಿಸಿದಾಗ ಕಾಂಗ್ರೆಸಿನ ಓಂ ಪ್ರಕಾಶ್ ಕನಗಳಿ ಎರಡನೇ ಸ್ಥಾನವನ್ನು ಪಡೆದಿದ್ದರು. 2013ರಲ್ಲಿ ಬಿಜೆಪಿ ಅಭ್ಯರ್ಥಿ ಐಹೊಳೆ 37,535 ಮತಗಳನ್ನು ಪಡೆದು ಜಯ ಸಾಧಿಸಿದರು. ಎರಡನೇ ಸ್ಥಾನವನ್ನು ಸ್ವತಂತ್ರ ಅಭ್ಯರ್ಥಿ ಪ್ರದೀಪ್ ಮಳಗಿ ಪಡೆದಿದ್ದರು. ಅವರು ಈ ಚುನಾವಣೆಯಲ್ಲಿ 36,706 ಮತಗಳನ್ನು ಪಡೆದಿದ್ದರು. ಇನ್ನು ಈ ಚುನಾವಣೆಯಲ್ಲಿ ಕಾಂಗ್ರೆಸಿನ ಸುಕುಮಾರ್ ಪುಂಡಲೀಕ್ 30,043 ಮತಗಳನ್ನಷ್ಟೇ ಪಡೆದಿದ್ದರು.

ಈ ಬಾರಿ ಇಲ್ಲಿ ಬಿಜೆಪಿ ಮತ್ತೆ ದುರ್ಯೋಧನ ಐಹೊಳೆಯರಿಗೆ ಟಿಕೆಟ್ ನೀಡಿದೆ. ಅವರು ಇಲ್ಲಿ ಹ್ಯಾಟ್ರಿಕ್ ಗೆಲುವಿನ ಕನಸು ಕಾಣುತ್ತಿದ್ದಾರೆ. ಇದೇ ಕ್ಷೇತ್ರದಲ್ಲಿ 2013ರಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಎರಡನೇ ಸ್ಥಾನ ಪಡೆದಿದ್ದ ಪ್ರದೀಪ್ ಕುಮಾರ್ ಮಳಗಿಯವರಿಗೆ ಕಾಂಗ್ರೆಸ್ ಈ ಬಾರಿ ಟಿಕೆಟ್ ನೀಡಿದೆ. ಮಳಗಿ ಸ್ವಂತ ಮತಗಳು ಮತ್ತು ಪಕ್ಷದ ಮತಗಳು ಸೇರಿದರೆ ಐಹೊಳೆಯವರನ್ನು ಸೋಲಿಸಬಹುದು ಎಂಬುದು ಕಾಂಗ್ರೆಸ್ ಲೆಕ್ಕಾಚಾರವಾಗಿದೆ.

ಕಾಂಗ್ರೆಸ್ ಲೆಕ್ಕಚಾರ ಫಲಿಸುತ್ತಾ ಅಥವಾ ಬಿಜೆಪಿಯ ದುರ್ಯೋಧನ ಐಹೊಳೆ ಹ್ಯಾಟ್ರಿಕ್ ಜಯ ಸಾಧಿಸುತ್ತಾರಾ ಎಂಬುದಕ್ಕೆ ಮೇ 15ರಂದು ಉತ್ತರ ದೊರೆಯಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+