ರಾಯಭಾಗ ಕ್ಷೇತ್ರ: ಬಿಜೆಪಿಯ ದುರ್ಯೋಧನ ಐಹೊಳೆಗೆ ಹ್ಯಾಟ್ರಿಕ್ ಜಯದ ಕನಸು
ರಾಯಭಾಗ ಬೆಳಗಾವಿ ಜಿಲ್ಲೆಯ ಒಂದು ಪಟ್ಟಣ ಮತ್ತು ತಾಲೂಕು. ಇಲ್ಲಿ ಬಾಳೆ ಮತ್ತು ಕಬ್ಬನ್ನು ಹೆಚ್ಚಾಗಿ ಬೆಳೆಯುತ್ತಾರೆ. ರಾಯಭಾಗದಲ್ಲೊಂದು ಬ್ರಿಟೀಷರು ಕಟ್ಟಿದ ಅತ್ಯಂತ ಹಳೆಯ ರೈಲ್ವೇ ನಿಲ್ದಾಣವೂ ಇದೆ.
ಪರಿಶಿಷ್ಟ ಜಾತಿಗೆ ಮೀಸಲಾಗಿರುವ ರಾಯಭಾಗ ಕ್ಷೇತ್ರವನ್ನು ಬಿಜೆಪಿಯ ದುರ್ಯೋಧನ ಐಹೊಳೆ ಪ್ರತಿನಿಧಿಸುತ್ತಿದ್ದಾರೆ. 2008ರಲ್ಲೂ ಅವರು ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು.
ಹಾಗೆ ನೋಡಿದರೆ ರಾಯಭಾಗ ಕ್ಷೇತ್ರ ಕಾಂಗ್ರೆಸ್ ಪಾಲಿನ ಭದ್ರಕೋಟೆಯಾಗಿತ್ತು. ಆದರೆ 2004ರಲ್ಲಿ ಕಾಂಗ್ರೆಸ್ ಕೋಟೆಗೆ ಜೆಡಿಯುನ ಸರಿಕರ್ ಭೀಮಪ್ಪ ಕನ್ನ ಕೊರೆದರು. ಮುಂದೆ 2008ರಲ್ಲಿ ಮತ್ತು 13ರಲ್ಲಿ ಬಿಜೆಪಿಯ ದುರ್ಯೋಧನ ಐಹೊಳೆ ಇಲ್ಲಿ ಸತತ ಗೆಲುವು ಸಾಧಿಸಿದರು.

2008ರಲ್ಲಿ ಐಹೊಳೆ ಗೆಲುವು ಸಾಧಿಸಿದಾಗ ಕಾಂಗ್ರೆಸಿನ ಓಂ ಪ್ರಕಾಶ್ ಕನಗಳಿ ಎರಡನೇ ಸ್ಥಾನವನ್ನು ಪಡೆದಿದ್ದರು. 2013ರಲ್ಲಿ ಬಿಜೆಪಿ ಅಭ್ಯರ್ಥಿ ಐಹೊಳೆ 37,535 ಮತಗಳನ್ನು ಪಡೆದು ಜಯ ಸಾಧಿಸಿದರು. ಎರಡನೇ ಸ್ಥಾನವನ್ನು ಸ್ವತಂತ್ರ ಅಭ್ಯರ್ಥಿ ಪ್ರದೀಪ್ ಮಳಗಿ ಪಡೆದಿದ್ದರು. ಅವರು ಈ ಚುನಾವಣೆಯಲ್ಲಿ 36,706 ಮತಗಳನ್ನು ಪಡೆದಿದ್ದರು. ಇನ್ನು ಈ ಚುನಾವಣೆಯಲ್ಲಿ ಕಾಂಗ್ರೆಸಿನ ಸುಕುಮಾರ್ ಪುಂಡಲೀಕ್ 30,043 ಮತಗಳನ್ನಷ್ಟೇ ಪಡೆದಿದ್ದರು.
ಈ ಬಾರಿ ಇಲ್ಲಿ ಬಿಜೆಪಿ ಮತ್ತೆ ದುರ್ಯೋಧನ ಐಹೊಳೆಯರಿಗೆ ಟಿಕೆಟ್ ನೀಡಿದೆ. ಅವರು ಇಲ್ಲಿ ಹ್ಯಾಟ್ರಿಕ್ ಗೆಲುವಿನ ಕನಸು ಕಾಣುತ್ತಿದ್ದಾರೆ. ಇದೇ ಕ್ಷೇತ್ರದಲ್ಲಿ 2013ರಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಎರಡನೇ ಸ್ಥಾನ ಪಡೆದಿದ್ದ ಪ್ರದೀಪ್ ಕುಮಾರ್ ಮಳಗಿಯವರಿಗೆ ಕಾಂಗ್ರೆಸ್ ಈ ಬಾರಿ ಟಿಕೆಟ್ ನೀಡಿದೆ. ಮಳಗಿ ಸ್ವಂತ ಮತಗಳು ಮತ್ತು ಪಕ್ಷದ ಮತಗಳು ಸೇರಿದರೆ ಐಹೊಳೆಯವರನ್ನು ಸೋಲಿಸಬಹುದು ಎಂಬುದು ಕಾಂಗ್ರೆಸ್ ಲೆಕ್ಕಾಚಾರವಾಗಿದೆ.
ಕಾಂಗ್ರೆಸ್ ಲೆಕ್ಕಚಾರ ಫಲಿಸುತ್ತಾ ಅಥವಾ ಬಿಜೆಪಿಯ ದುರ್ಯೋಧನ ಐಹೊಳೆ ಹ್ಯಾಟ್ರಿಕ್ ಜಯ ಸಾಧಿಸುತ್ತಾರಾ ಎಂಬುದಕ್ಕೆ ಮೇ 15ರಂದು ಉತ್ತರ ದೊರೆಯಲಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications