ಬಿಜೆಪಿ-ಕಾಂಗ್ರೆಸ್: ರೋಣದಲ್ಲಿ ಗೆಲ್ಲುವುದು ಯಾರು?
ದ್ರೋಣಾಪುರ ಎಂದೇ ಪುರಾಣೇತಿಹಾಸಗಳಲ್ಲಿ ಕರೆಸಿಕೊಂಡ ರೋಣವು ಗದಗ ಜಿಲ್ಲೆಯ ಒಂದು ನಗರ.
ಕಪ್ಪು ಮಣ್ಣು ಹೇರಳವಾಗಿರುವ ಈ ಪ್ರದೇಶದಲ್ಲಿ ಸಂಕರಣ ಹತ್ತಿ ಬೀಜಗಳನ್ನು ತುಂಬಾ ಬೆಳೆಯುತ್ತಾರೆ. ಇಲ್ಲಿನ ಹತ್ತಿ ಹೆಚ್ಚು ಪ್ರಸಿದ್ಧಿ ಪಡೆದಿದೆ.
ಇಲ್ಲಿನ ದೇವಾಲಯಗಳನ್ನು ದ್ರೋಣಾಚಾರ್ಯರು ನಿರ್ಮಿಸಿದರು ಎಂಬ ಪ್ರತೀತಿಯಿದೆ. ಆದಕ್ಕೆಂದೇ ರೋಣವನ್ನು ದ್ರೋಣಪುರ ಎಂದು ಕರೆಯಲಾಗುತ್ತಿತ್ತು. ಆದರೆ ಕ್ರಮೇಣ ಜನರ ಬಾಯಿಮಾತಲ್ಲಿ ಅದು 'ರೋಣ' ವಾಗಿ ಬದಲಾಗಿದೆ.

ಇಲ್ಲಿನ ಅನಂತಶಯನ ಗುಡಿ, ಈಶ್ವರ ದೇವಾಲಯ, ಕಾಳಿ ಗುಡಿ, ಲೋಕನಾಥ ದೇವಾಲಯ, ಮಲ್ಲಿಕಾರ್ಜುನ ಗುಡಿ, ಪಾರ್ಶ್ವನಾಥ ಜೈನ ದೇವಾಲಯ ಮತ್ತು ಸೋಮಲಿಂಗೇಶ್ವರ ದೇವಾಲಯ ಐತಿಹಾಸಿಕ ಮಹತ್ವ ಪಡೆದಿವೆ.
ಇಲ್ಲಿನ ಇಟಗಿ ಎಂಬ ಸಣ್ಣ ಗ್ರಾಮದಲ್ಲಿರುವ ಇಟಗಿ ಭೀಮವ್ವ ದೇವಿ ದೇವಾಲಯ ಪ್ರಸಿದ್ಧಿ ಪಡೆದಿದೆ. ಇಲ್ಲಿರುವ ಶಂಭುಲಿಂಗ ದೇವಾಲಯ 1000 ವರ್ಷಗಳ ಇತಿಹಾಸ ಹೊಂದಿದೆ ಎನ್ನಲಾಗುತ್ತದೆ. ಚಾಲಿಕ್ಯರ ಕಾಲದ್ದು ಎಂದು ನಂಬಲಾದ ಈ ದೇವಾಲಯದಲ್ಲಿ ಉದ್ಭವ ಶಿವಲಿಂಗವಿದೆ.
ಈ ಐತಿಹಾಸಿಕ ಕ್ಷೇತ್ರದ ರಾಜಕೀಯ ಚಿತ್ರಣದ ಬಗ್ಗೆ ಯೋಚಿಸುವುದಾದರೆ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ ಸಾಧ್ಯತೆಗಳು ಜಾಸ್ತಿ. ಕುರುಬ ಸಮುದಾಯದ ಮತದಾರರೇ ಇಲ್ಲಿ ನಿರ್ಣಾಯಕ ಸ್ಥಾನ ವಹಿಸಿದ್ದಾರೆ. ಹಿಂದುಳಿದ ಗಾಣಿಗ ಸಮುದಾಯದ ಮತದಾರರು ಈ ಬಾರಿ ರೋಣದ ಜಿ ಎಸ್ ಪಾಟೀಲರನ್ನು ಬೆಂಬಲಿಸುವ ಸಾಧ್ಯತೆ ಕಡಿಮೆ ಇದೆ.
2013 ರ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಜಿ.ಎಸ್.ಪಾಟೀಲ್ 74593 ಮತ ಪಡೆದಿದ್ದರೆ, ಬಿಜೆಪಿಯ ಕೆ.ಜಿ.ಬಂಡಿ 56026 ಮತ ಪಡೆದಿದ್ದರು. ಆದರೆ ಈ ಬಾರಿ ಇಲ್ಲಿನ ಜನರು ಬಿಜೆಪಿಯನ್ನೇ ಬೆಂಬಲಿಸಿದರೆ ಅಚ್ಚರಿಯೇನಿಲ್ಲ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications