ಬಿಜೆಪಿ-ಕಾಂಗ್ರೆಸ್: ರೋಣದಲ್ಲಿ ಗೆಲ್ಲುವುದು ಯಾರು?
ದ್ರೋಣಾಪುರ ಎಂದೇ ಪುರಾಣೇತಿಹಾಸಗಳಲ್ಲಿ ಕರೆಸಿಕೊಂಡ ರೋಣವು ಗದಗ ಜಿಲ್ಲೆಯ ಒಂದು ನಗರ.
ಕಪ್ಪು ಮಣ್ಣು ಹೇರಳವಾಗಿರುವ ಈ ಪ್ರದೇಶದಲ್ಲಿ ಸಂಕರಣ ಹತ್ತಿ ಬೀಜಗಳನ್ನು ತುಂಬಾ ಬೆಳೆಯುತ್ತಾರೆ. ಇಲ್ಲಿನ ಹತ್ತಿ ಹೆಚ್ಚು ಪ್ರಸಿದ್ಧಿ ಪಡೆದಿದೆ.
ಇಲ್ಲಿನ ದೇವಾಲಯಗಳನ್ನು ದ್ರೋಣಾಚಾರ್ಯರು ನಿರ್ಮಿಸಿದರು ಎಂಬ ಪ್ರತೀತಿಯಿದೆ. ಆದಕ್ಕೆಂದೇ ರೋಣವನ್ನು ದ್ರೋಣಪುರ ಎಂದು ಕರೆಯಲಾಗುತ್ತಿತ್ತು. ಆದರೆ ಕ್ರಮೇಣ ಜನರ ಬಾಯಿಮಾತಲ್ಲಿ ಅದು 'ರೋಣ' ವಾಗಿ ಬದಲಾಗಿದೆ.

ಇಲ್ಲಿನ ಅನಂತಶಯನ ಗುಡಿ, ಈಶ್ವರ ದೇವಾಲಯ, ಕಾಳಿ ಗುಡಿ, ಲೋಕನಾಥ ದೇವಾಲಯ, ಮಲ್ಲಿಕಾರ್ಜುನ ಗುಡಿ, ಪಾರ್ಶ್ವನಾಥ ಜೈನ ದೇವಾಲಯ ಮತ್ತು ಸೋಮಲಿಂಗೇಶ್ವರ ದೇವಾಲಯ ಐತಿಹಾಸಿಕ ಮಹತ್ವ ಪಡೆದಿವೆ.
ಇಲ್ಲಿನ ಇಟಗಿ ಎಂಬ ಸಣ್ಣ ಗ್ರಾಮದಲ್ಲಿರುವ ಇಟಗಿ ಭೀಮವ್ವ ದೇವಿ ದೇವಾಲಯ ಪ್ರಸಿದ್ಧಿ ಪಡೆದಿದೆ. ಇಲ್ಲಿರುವ ಶಂಭುಲಿಂಗ ದೇವಾಲಯ 1000 ವರ್ಷಗಳ ಇತಿಹಾಸ ಹೊಂದಿದೆ ಎನ್ನಲಾಗುತ್ತದೆ. ಚಾಲಿಕ್ಯರ ಕಾಲದ್ದು ಎಂದು ನಂಬಲಾದ ಈ ದೇವಾಲಯದಲ್ಲಿ ಉದ್ಭವ ಶಿವಲಿಂಗವಿದೆ.
ಈ ಐತಿಹಾಸಿಕ ಕ್ಷೇತ್ರದ ರಾಜಕೀಯ ಚಿತ್ರಣದ ಬಗ್ಗೆ ಯೋಚಿಸುವುದಾದರೆ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ ಸಾಧ್ಯತೆಗಳು ಜಾಸ್ತಿ. ಕುರುಬ ಸಮುದಾಯದ ಮತದಾರರೇ ಇಲ್ಲಿ ನಿರ್ಣಾಯಕ ಸ್ಥಾನ ವಹಿಸಿದ್ದಾರೆ. ಹಿಂದುಳಿದ ಗಾಣಿಗ ಸಮುದಾಯದ ಮತದಾರರು ಈ ಬಾರಿ ರೋಣದ ಜಿ ಎಸ್ ಪಾಟೀಲರನ್ನು ಬೆಂಬಲಿಸುವ ಸಾಧ್ಯತೆ ಕಡಿಮೆ ಇದೆ.
2013 ರ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಜಿ.ಎಸ್.ಪಾಟೀಲ್ 74593 ಮತ ಪಡೆದಿದ್ದರೆ, ಬಿಜೆಪಿಯ ಕೆ.ಜಿ.ಬಂಡಿ 56026 ಮತ ಪಡೆದಿದ್ದರು. ಆದರೆ ಈ ಬಾರಿ ಇಲ್ಲಿನ ಜನರು ಬಿಜೆಪಿಯನ್ನೇ ಬೆಂಬಲಿಸಿದರೆ ಅಚ್ಚರಿಯೇನಿಲ್ಲ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications