ಕ್ಷೇತ್ರ ಪರಿಚಯ : ಸಾಗರದಲ್ಲಿ ಬಿಜೆಪಿ, ಕಾಂಗ್ರೆಸ್ ಮುಖಾಮುಖಿ ಕದನ
ಲಿಂಗನಮಕ್ಕಿ ಜಲಾಶಯವನ್ನು ತನ್ನ ಒಡಲಿಲ್ಲಿ ಇಟ್ಟುಕೊಂಡು ನಾಡಿಗೆ ಬೆಳಕು ನೀಡುತ್ತಿರುವ ಕ್ಷೇತ್ರ ಸಾಗರ. ಶರಾವತಿ ನದಿ ನೀರಿನಲ್ಲಿ ಮನೆ-ತೋಟ ಮುಳುಗಿದ ಮೇಲೆ ಹಲವರು ಊರನ್ನು ತೊರೆದಿದ್ದಾರೆ. ಆದರೆ, ನಮ್ಮದು ಸಾಗರ ಎಂದು ನೆನೆಪು ಮಾಡಿಕೊಳ್ಳುತ್ತಾರೆ.
ಬೆಂಗಳೂರು, ಮೈಸೂರಿನಿಂದ ಸಾಗರದ ತಾಳಗುಪ್ಪ ತನಕ ರೈಲು ಬರುತ್ತದೆ. ಇದನ್ನು ಪಕ್ಕದ ಉತ್ತರ ಕನ್ನಡದ ತನಕ ವಿಸ್ತರಣೆ ಮಾಡಿ ಎಂಬುದು ಪಕ್ಕದ ಜಿಲ್ಲೆಯವರ ಬೇಡಿಕೆ. ಸಿಂಗದೂರು ದೇವಾಲಯಕ್ಕೆ ಹೋಗಲು ಸೇತುವೆ ಬೇಕು ಎಂಬ ಕೂಗಿಗೆ ಈಗ ಬೆಲೆ ಸಿಕ್ಕಿದೆ.
ವಿಶ್ವವಿಖ್ಯಾತ ಜೋಗ ಜಲಪಾತ, ನಾಡಿಗೆ ಬೆಳಕು ನೀಡುವ ಲಿಂಗನಮಕ್ಕಿ ಜಲಾಶಯವನ್ನು ತನ್ನ ಒಡಲಲ್ಲಿ ಹೊಂದಿರುವ ಕ್ಷೇತ್ರ ಸಾಗರ. ಸಿಗಂಧೂರು ದೇವಸ್ಥಾನ, ವರದಹಳ್ಳಿಯ ಶ್ರೀಧರಾಶ್ರಮ ಸೇರಿದಂತೆ ವಿವಿಧ ಪ್ರವಾಸಿ ಸ್ಥಳಗಳನ್ನು ನೋಡಲು ಸಾವಿರಾರು ಪ್ರವಾಸಿಗರು ಕ್ಷೇತ್ರಕ್ಕೆ ಆಗಮಿಸುತ್ತಾರೆ.
ಕಾಗೋಡು ಚಳವಳಿ ಮೂಲಕ ರಾಷ್ಟ್ರದ ಗಮನ ಸೆಳೆದ ಕ್ಷೇತ್ರ ಸಾಗರ. ಹಿರಿಯ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಕ್ಷೇತ್ರದ ಶಾಸಕರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಅವರು ಕಂದಾಯ ಸಚಿವರು.
1972 ರಿಂದಲೂ ಕ್ಷೇತ್ರದಲ್ಲಿ ಕಾಗೋಡು ತಿಮ್ಮಪ್ಪ ಅವರು ಸೋಲು-ಗೆಲುವನ್ನು ಕಂಡಿದ್ದಾರೆ. ಕಳೆದ ಚುನಾವಣೆಯಲ್ಲಿ ಕೆಜೆಪಿಯ ಬಿ.ಎಸ್.ಜಯಂತ್ ವಿರುದ್ಧ ಜಯಗಳಿಸಿದ್ದಾರೆ. ಈ ಬಾರಿ ವಯಸ್ಸಿನ ಕಾರಣದಿಂದ ಅವರಿಗೆ ಟಿಕೆಟ್ ಕೈ ತಪ್ಪಿದೆಯೇ?.
ಕಳೆದ ಚುನಾವಣೆಯಲ್ಲಿ ಬಿಜೆಪಿಗೆ ಕ್ಷೇತ್ರದಲ್ಲಿ ಭಾರೀ ಹಿನ್ನಡೆ ಉಂಟಾಗಿತ್ತು. ಪಕ್ಷದ ಅಭ್ಯರ್ಥಿ 4ನೇ ಸ್ಥಾನ ಪಡೆದಿದ್ದರು. ಹಿಂದೆ ಬಿಜೆಪಿಯಲ್ಲಿದ್ದ ಬೇಳೂರು ಗೋಪಾಲಕೃಷ್ಣ ಕಳೆದ ಬಾರಿ ಜೆಡಿಎಸ್ನಿಂದ ಸ್ಪರ್ಧಿಸಿದ ಸೋಲು ಕಂಡಿದ್ದರು.
ಬಿಜೆಪಿ ಈ ಬಾರಿ ಹರತಾಳು ಹಾಲಪ್ಪ ಯಾರಿಗೆ ಟಿಕೆಟ್ ನೀಡಲಿದೆ ಎನ್ನುವುದು ಇನ್ನೂ ಅಂತಿಮವಾಗಿಲ್ಲ. ಕಾಗೋಡು ತಿಮ್ಮಪ್ಪ ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಪುತ್ರಿಯನ್ನು ಕಣಕ್ಕಿಳಿಸಬಹುದು ಎಂಬ ಸುದ್ದಿ ಹಬ್ಬಿದೆ. ಈ ಬಾರಿ ಜೆಡಿಎಸ್ ಅಭ್ಯರ್ಥಿ ಯಾರು? ಎಂಬುದು ಇನ್ನೂ ಖಚಿತವಾಗಿಲ್ಲ.
2013ರ ಚುನಾವಣೆಯಲ್ಲಿ ಕಾಗೋಡು ತಿಮ್ಮಪ್ಪ 71, 960 ಮತ ಪಡೆದಿದ್ದರು. ಕೆಜೆಪಿಯ ಬಿ.ಆರ್.ಜಯಂತ್ 30,712 ಮತ, ಜೆಡಿಎಸ್ನ ಬೇಳೂರು ಗೋಪಾಲಕೃಷ್ಣ 23,217 ಮತ, ಬಿಜೆಪಿಯ ಶರಾವತಿ ಸಿ.ರಾವ್ 5,355 ಮತಗಳನ್ನು ಪಡೆದಿದ್ದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications