ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕ್ಷೇತ್ರ ಪರಿಚಯ : ಸಾಗರದಲ್ಲಿ ಬಿಜೆಪಿ, ಕಾಂಗ್ರೆಸ್ ಮುಖಾಮುಖಿ ಕದನ

|
Google Oneindia Kannada News

ಲಿಂಗನಮಕ್ಕಿ ಜಲಾಶಯವನ್ನು ತನ್ನ ಒಡಲಿಲ್ಲಿ ಇಟ್ಟುಕೊಂಡು ನಾಡಿಗೆ ಬೆಳಕು ನೀಡುತ್ತಿರುವ ಕ್ಷೇತ್ರ ಸಾಗರ. ಶರಾವತಿ ನದಿ ನೀರಿನಲ್ಲಿ ಮನೆ-ತೋಟ ಮುಳುಗಿದ ಮೇಲೆ ಹಲವರು ಊರನ್ನು ತೊರೆದಿದ್ದಾರೆ. ಆದರೆ, ನಮ್ಮದು ಸಾಗರ ಎಂದು ನೆನೆಪು ಮಾಡಿಕೊಳ್ಳುತ್ತಾರೆ.

ಬೆಂಗಳೂರು, ಮೈಸೂರಿನಿಂದ ಸಾಗರದ ತಾಳಗುಪ್ಪ ತನಕ ರೈಲು ಬರುತ್ತದೆ. ಇದನ್ನು ಪಕ್ಕದ ಉತ್ತರ ಕನ್ನಡದ ತನಕ ವಿಸ್ತರಣೆ ಮಾಡಿ ಎಂಬುದು ಪಕ್ಕದ ಜಿಲ್ಲೆಯವರ ಬೇಡಿಕೆ. ಸಿಂಗದೂರು ದೇವಾಲಯಕ್ಕೆ ಹೋಗಲು ಸೇತುವೆ ಬೇಕು ಎಂಬ ಕೂಗಿಗೆ ಈಗ ಬೆಲೆ ಸಿಕ್ಕಿದೆ.

ಕ್ಷೇತ್ರ ಪರಿಚಯ : ತುಂಗಾ ತೀರದ ತೀರ್ಥಹಳ್ಳಿಯಲ್ಲಿ ಗೆಲುವು ಯಾರಿಗೆ?ಕ್ಷೇತ್ರ ಪರಿಚಯ : ತುಂಗಾ ತೀರದ ತೀರ್ಥಹಳ್ಳಿಯಲ್ಲಿ ಗೆಲುವು ಯಾರಿಗೆ?

ವಿಶ್ವವಿಖ್ಯಾತ ಜೋಗ ಜಲಪಾತ, ನಾಡಿಗೆ ಬೆಳಕು ನೀಡುವ ಲಿಂಗನಮಕ್ಕಿ ಜಲಾಶಯವನ್ನು ತನ್ನ ಒಡಲಲ್ಲಿ ಹೊಂದಿರುವ ಕ್ಷೇತ್ರ ಸಾಗರ. ಸಿಗಂಧೂರು ದೇವಸ್ಥಾನ, ವರದಹಳ್ಳಿಯ ಶ್ರೀಧರಾಶ್ರಮ ಸೇರಿದಂತೆ ವಿವಿಧ ಪ್ರವಾಸಿ ಸ್ಥಳಗಳನ್ನು ನೋಡಲು ಸಾವಿರಾರು ಪ್ರವಾಸಿಗರು ಕ್ಷೇತ್ರಕ್ಕೆ ಆಗಮಿಸುತ್ತಾರೆ.

ಕಾಗೋಡು ಚಳವಳಿ ಮೂಲಕ ರಾಷ್ಟ್ರದ ಗಮನ ಸೆಳೆದ ಕ್ಷೇತ್ರ ಸಾಗರ. ಹಿರಿಯ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಕ್ಷೇತ್ರದ ಶಾಸಕರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಅವರು ಕಂದಾಯ ಸಚಿವರು.

ಕ್ಷೇತ್ರ ಪರಿಚಯ : ಜೆಡಿಎಸ್, ಕಾಂಗ್ರೆಸ್ ಭದ್ರ ಕೋಟೆ ಭದ್ರಾವತಿ!ಕ್ಷೇತ್ರ ಪರಿಚಯ : ಜೆಡಿಎಸ್, ಕಾಂಗ್ರೆಸ್ ಭದ್ರ ಕೋಟೆ ಭದ್ರಾವತಿ!

1972 ರಿಂದಲೂ ಕ್ಷೇತ್ರದಲ್ಲಿ ಕಾಗೋಡು ತಿಮ್ಮಪ್ಪ ಅವರು ಸೋಲು-ಗೆಲುವನ್ನು ಕಂಡಿದ್ದಾರೆ. ಕಳೆದ ಚುನಾವಣೆಯಲ್ಲಿ ಕೆಜೆಪಿಯ ಬಿ.ಎಸ್.ಜಯಂತ್ ವಿರುದ್ಧ ಜಯಗಳಿಸಿದ್ದಾರೆ. ಈ ಬಾರಿ ವಯಸ್ಸಿನ ಕಾರಣದಿಂದ ಅವರಿಗೆ ಟಿಕೆಟ್ ಕೈ ತಪ್ಪಿದೆಯೇ?.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಯಾರಿಗೆ ಗೆಲುವು?ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಯಾರಿಗೆ ಗೆಲುವು?

ಕಳೆದ ಚುನಾವಣೆಯಲ್ಲಿ ಬಿಜೆಪಿಗೆ ಕ್ಷೇತ್ರದಲ್ಲಿ ಭಾರೀ ಹಿನ್ನಡೆ ಉಂಟಾಗಿತ್ತು. ಪಕ್ಷದ ಅಭ್ಯರ್ಥಿ 4ನೇ ಸ್ಥಾನ ಪಡೆದಿದ್ದರು. ಹಿಂದೆ ಬಿಜೆಪಿಯಲ್ಲಿದ್ದ ಬೇಳೂರು ಗೋಪಾಲಕೃಷ್ಣ ಕಳೆದ ಬಾರಿ ಜೆಡಿಎಸ್‌ನಿಂದ ಸ್ಪರ್ಧಿಸಿದ ಸೋಲು ಕಂಡಿದ್ದರು.

ಕ್ಷೇತ್ರ ಪರಿಚಯ : ಶಿವಮೊಗ್ಗ ನಗರದಲ್ಲಿ ಈ ಬಾರಿ ಕಮಲ ಅರಳುವುದೇ?ಕ್ಷೇತ್ರ ಪರಿಚಯ : ಶಿವಮೊಗ್ಗ ನಗರದಲ್ಲಿ ಈ ಬಾರಿ ಕಮಲ ಅರಳುವುದೇ?

ಬಿಜೆಪಿ ಈ ಬಾರಿ ಹರತಾಳು ಹಾಲಪ್ಪ ಯಾರಿಗೆ ಟಿಕೆಟ್ ನೀಡಲಿದೆ ಎನ್ನುವುದು ಇನ್ನೂ ಅಂತಿಮವಾಗಿಲ್ಲ. ಕಾಗೋಡು ತಿಮ್ಮಪ್ಪ ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಪುತ್ರಿಯನ್ನು ಕಣಕ್ಕಿಳಿಸಬಹುದು ಎಂಬ ಸುದ್ದಿ ಹಬ್ಬಿದೆ. ಈ ಬಾರಿ ಜೆಡಿಎಸ್ ಅಭ್ಯರ್ಥಿ ಯಾರು? ಎಂಬುದು ಇನ್ನೂ ಖಚಿತವಾಗಿಲ್ಲ.

2013ರ ಚುನಾವಣೆಯಲ್ಲಿ ಕಾಗೋಡು ತಿಮ್ಮಪ್ಪ 71, 960 ಮತ ಪಡೆದಿದ್ದರು. ಕೆಜೆಪಿಯ ಬಿ.ಆರ್.ಜಯಂತ್ 30,712 ಮತ, ಜೆಡಿಎಸ್‌ನ ಬೇಳೂರು ಗೋಪಾಲಕೃಷ್ಣ 23,217 ಮತ, ಬಿಜೆಪಿಯ ಶರಾವತಿ ಸಿ.ರಾವ್ 5,355 ಮತಗಳನ್ನು ಪಡೆದಿದ್ದರು.

English summary
Karnataka Assembly Election 2018 : Read all about Sagar assembly constituency of Shimoga district. Get election news from Sagar. Know about candidates list, election results during Karnataka elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X