ಕ್ಷೇತ್ರ ಪರಿಚಯ: ಸಂಡೂರಲ್ಲಿ ಕಾಂಗ್ರೆಸ್ ಅಧಿಪತ್ಯ ಅಂತ್ಯ?
ಕಾಂಗ್ರೆಸ್ ಪಕ್ಷದ ಭದ್ರ ಕೋಟೆ ಎಂದೆನಿಸಿರುವ ರಾಜ್ಯದ ಕೆಲವೇ ಕೆಲವು ಕ್ಷೇತ್ರಗಳಲ್ಲಿ ಸಂಡೂರು ಕೂಡಾ ಒಂದು. ಇಲ್ಲಿ ಮೊದಲಿನಿಂದಲೂ ಪಾರಮ್ಯ ಮೆರೆದಿದ್ದು ಘೋರ್ಪಡೆ ಅವರು. ಅವರ ನಂತರ, ಇಲ್ಲಿ ಕಾಂಗ್ರೆಸ್ ಪರವಾಗಿ ಸಂತೋಷ್ ಲಾಡ್ ಶಾಸಕರಾಗಿದ್ದರು. ಈಗ, ಇಲ್ಲಿ ಕಾಂಗ್ರೆಸ್ ನವರೇ ಆದ, ಸಂತೋಷ್ ಲಾಡ್ ಅವರಿಗೆ ಆಪ್ತರಾಗಿರುವ ಇ. ತುಕಾರಾಮ್.
ಕಳೆದ ಎರಡು ವಿಧಾನಸಭಾ ಚುನಾವಣೆಗಳಲ್ಲಿ ಇದು ಎಸ್ ಟಿ ಮೀಸಲು ಕ್ಷೇತ್ರವಾಗಿದ್ದರಿಂದ ಸಂತೋಷ್ ಲಾಡ್ ಅವರು ತುಕಾರಾಮ್ ಅವರನ್ನು ಕಣಕ್ಕಿಳಿಸಿದ್ದರು. ಆ ಎರಡೂ ಬಾರಿಯೂ ತುಕಾರಾಮ್ ಅವರೇ ಗೆಲುವು ಸಾಧಿಸಿರುವುದು ಇಲ್ಲಿನ ವಿಶೇಷ. ಈ ಬಾರಿಯೂ ಇದು ಎಸ್ ಟಿ ಮೀಸಲು ಕ್ಷೇತ್ರವಾಗಿರುವುದರಿಂದ ಈ ಬಾರಿ ತುಕಾರಾಂ ಅವರಿಗೇ ಕಾಂಗ್ರೆಸ್ ಟಿಕೆಟ್ ಲಭ್ಯವಾಗಲಿದೆ ಎಂದು ಹೇಳಲಾಗಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ

ತುಕಾರಾಮ್ ಅವರಿಗೆ ಕ್ಷೇತ್ರದಲ್ಲಿ ಒಳ್ಳೆ ಹೆಸರಿದೆ. ಮೌಲ್ಯಾಧಾರಿತ, ಸಜ್ಜನ, ಜನಪರ ಕಾಳಜಿ ಉಳ್ಳ ವ್ಯಕ್ತಿ ಎಂಬ ಹೆಗ್ಗಳಿಕೆಯಿದೆ. ಅಲ್ಲದೆ, ಕ್ಷೇತ್ರದಲ್ಲಿ ಅವರಿಂದಾಗಿರುವ ಕೆಲವಾರು ಅಭಿವೃದ್ಧಿ ಕೆಲಸಗಳಿಂದಲೂ ಜನರು ಅವರ ಬಗ್ಗೆ ಒಳ್ಳೆ ಅಭಿಪ್ರಾಯವನ್ನೇ ಇಟ್ಟುಕೊಂಡಿದ್ದಾರೆ.
ಇವರಿಗೆ ಸಡ್ಡು ಹೊಡೆಯಬೇಕೆಂದರೆ, ಬಿಜೆಪಿಯು ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲೇಬೇಕಿದೆ. ಬಿಜೆಪಿ ಡಿ. ರಾಘವೇಂದ್ರ ಮತ್ತು ಜೆಡಿಎಸ್ ವಸಂತಕುಮಾರ್ ಸ್ಪರ್ಧಿಸುತ್ತಿದ್ದಾರೆ. ಘೋರ್ಪಡೆ ಕುಟುಂಬದ ಕಾರ್ತಿಕೇಯ ಅವರು ಬಿಜೆಪಿ ಸೇರಿದ್ದರೂ, ಸಮರ್ಥ ಎದುರಾಳಿ ಇಲ್ಲದ ಕಾರಣ ಧರ್ಮಾಪುರ ರಾಘವೇಂದ್ರ ಅವರಿಗೆ ಟಿಕೇಟ್ ಘೋಷಣೆ ಆಗಿದೆ.
-
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications