ಕ್ಷೇತ್ರ ಪರಿಚಯ: ಕಾಂಗ್ರೆಸ್ ಪಾಲಿನ ಭದ್ರ ಕೋಟೆ ಸೇಡಂ
ಸೇಡಂ ಕಲಬುರಗಿಯ ಜಿಲ್ಲೆಯ ಪುರಸಭೆ ಹಾಗೂ ತಾಲೂಕು ಕೇಂದ್ರ. ಸೇಡಂ ಜಿಲ್ಲಾ ಕೇಂದ್ರ ಕಲಬುರಗಿಯಿಂದ 57 ಕಿಲೋಮೀಟರ್ ದೂರದಲ್ಲಿದೆ.
ರಾಷ್ಟ್ರಕೂಟರ ರಾಜಧಾನಿ ಮಳಖೇಡ, ಕೊತ್ತಲ್ ಬಸವೇಶ್ವರ ದೇವಸ್ಥಾನ, ಪಂಚಲಿಂಗೇಶ್ವರ ಮಂದಿರ ಹಾಗೂ ಬಾಣಂತಿ ಕಂಬ, ಮೋತಕಪಲ್ಲಿ ಬಲಭೀಮಸೇನ ದೇವಾಲಯ, ಮಳಖೇಡ್ನ ಟೀಕಾಚಾರ್ಯರ ಮಠ ಮತ್ತು ಕೋಟೆ ಸೇರಿದಂತೆ ಹಲವು ಪ್ರೇಕ್ಷಣೀಯ ಸ್ಥಳಗಳು ಇಲ್ಲಿವೆ.
ಶಹಬಾದ್ ಕಲ್ಲಿಗೆ ಸೇಡಂ ಜನಪ್ರಿಯವಾಗಿದೆ. ಮನೆ ನಿರ್ಮಾಣಕ್ಕೆ ಬಳಸಲಾಗುವ ಕಲ್ಲಿನ ಗಣಿಗಳು, ಕಲ್ಲು ಕತ್ತರಿಸುವ ಮತ್ತು ಹೊಳಪು ನೀಡುವ ಸಣ್ಣ ಪ್ರಮಾಣದ ಉದ್ದಿಮೆಗಳು ಸೇಡಂನಲ್ಲಿದ್ದು ಒಂದಷ್ಟು ಕೂಲಿ ಕಾರ್ಮಿಕರಿಗೆ ಉದ್ಯೋಗವೂ ಸಿಗುತ್ತಿದೆ. ಇಲ್ಲಿ ಬಿರ್ಲಾ ಶಕ್ತಿ, ಅಲ್ಟ್ರಾಟೆಕ್, ಸೌತ್ ಇಂಡಿಯಾ ಸಿಮೆಂಟ್ ನಂಥ ಕೆಲವು ಸಿಮೆಂಟ್ ಕೈಗಾರಿಕೆಗಳೂ ಇವೆ.

ಜೋಳ, ತೊಗರಿ, ನೆಲಗಡಲೆ, ಭತ್ತ, ಉದ್ದು, ಹೆಸರು ಕಾಳು ಇಲ್ಲಿನ ಪ್ರಮುಖ ಬೆಳೆಗಳಾಗಿವೆ. ಇಲ್ಲಿನ ಕೃಷಿ ಚಟುವಟಿಕೆಗಳಿಗೆ ಜೀವಜಲವಾಗಿ ಭೀಮಾ ನದಿ ಸೇಡಂನ ಮೂಲಕ ಹಾದು ಹೋಗುತ್ತದೆ.
1983ರಲ್ಲಿ ಇಲ್ಲಿ ಬಿಜೆಪಿಯ ನಾಗಾರೆಡ್ಡಿ ಪಾಟೀಲ್ ಸೇಡಂ ಜಯಗಳಿಸಿದ್ದು ಬಿಟ್ಟರೆ ಮತ್ಯಾವತ್ತೂ ಈ ಕ್ಷೇತ್ರ ಕೇಸರಿ ಪಕ್ಷಕ್ಕೆ ಒಲಿದಿಲ್ಲ. ಇನ್ನು ಜನತಾದಳ ಕೂಡಾ ಇಲ್ಲಿ 1994ರಲ್ಲಿ ಜಯಗಳಿಸಿದ್ದೇ ಕೊನೆ. ಅಲ್ಲಿಂದ ಈ ಕ್ಷೇತ್ರವನ್ನು ಕಾಂಗ್ರೆಸ್ ಬಿಟ್ಟುಕೊಟ್ಟಿಲ್ಲ.
ಸದ್ಯಕ್ಕೆ ಕಾಂಗ್ರೆಸ್ ಪಾಲಿನ ಭದ್ರಕೋಟೆ ಸೇಡಂ. ಇಲ್ಲಿ 1999ರಲ್ಲಿ ಕಾಂಗ್ರೆಸ್ ನ ಬಸವಂತ್ ರೆಡ್ಡಿ ಮೊತಕ್ಪಲ್ಲಿ ಗೆಲುವು ಸಾಧಿಸಿದ್ದರು. ನಂತರ ಡಾ. ಶರಣ ಪ್ರಕಾಶ್ ಪಾಟೀಲ್ ಇಲ್ಲಿ ಅಖಾಡಕ್ಕಿಳಿದವರು 2004, 2008, 2013ರಲ್ಲಿ ಗೆದ್ದು ಹ್ಯಾಟ್ರಿಕ್ ಸಾಧನೆ ಮೆರೆದಿದ್ದಾರೆ.
ಸದ್ಯ ಕಾಂಗ್ರೆಸ್ ಸರಕಾರದಲ್ಲಿ ಶರಣ ಪ್ರಕಾಶ್ ಪಾಟೀಲ್ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದಾರೆ.
2004ರಲ್ಲಿ ರಾಜಕುಮಾರ್ ಪಾಟೀಲ್ ತೆಲ್ಕೂರ್ ರನ್ನು 4 ಸಾವಿರ ಮತಗಳ ಅಂತರದಿಂದ ಶರಣ ಪ್ರಕಾಶ್ ಪಾಟೀಲ್ ಸೋಲಿಸಿದ್ದರು. 2008ರ ಗೆಲುವಿನ ಅಂತರ 6 ಸಾವಿರ ಮತಗಳಿಗೆ ಏರಿಕೆಯಾಗಿತ್ತು. 2013ರಲ್ಲಿ ಇಲ್ಲಿ ಪುನಃ ಗೆದ್ದ ಶರಣ ಪ್ರಕಾಶ್ ಪಾಟೀಲ್ ಗೆಲುವಿನ ಅಂತರವನ್ನು 11 ಸಾವಿರಕ್ಕೂ ಹೆಚ್ಚು ಮತಗಳಿಗೆ ಹೆಚ್ಚಿಸಿಕೊಂಡಿದ್ದರು.
ಇಲ್ಲಿ ಈ ಬಾರಿಯೂ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ನಿಚ್ಚಳವಾಗಿದೆ. ಆದರೆ ಬಿಜೆಪಿ ಮನಸ್ಸು ಮಾಡಿದರೆ ಈ ಬಾರಿ ಗೆಲ್ಲಲೂಬಹುದು. ಕ್ಷೇತ್ರದಲ್ಲಿ ಜೆಡಿಎಸ್ ಗೂ ನೆಲೆ ಇದ್ದು ಪ್ರಬಲ ಪೈಪೋಟಿ ನೀಡಲೂಬಹುದು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications