ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಯಾರಿಗೆ ಗೆಲುವು?
ಶಿವಮೊಗ್ಗ ನಗರ ಬೆಳೆದಂತೆ ರಚನೆಯಾದ ವಿಧಾನಸಭಾ ಕ್ಷೇತ್ರ ಶಿವಮೊಗ್ಗ ಗ್ರಾಮಾಂತರ. ಕ್ಷೇತ್ರದಲ್ಲಿನ ಪ್ರಮುಖ ಸಮಸ್ಯೆ ಕುಡಿಯುವ ನೀರು. ಕ್ಷೇತ್ರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ನಗರಕ್ಕೆ ಪಾದಯಾತ್ರೆ ನಡೆಸಲಾಗಿತ್ತು.
ಕ್ಷೇತ್ರದ ಹೆಚ್ಚಿನ ಜನರು ಕೃಷಿಯನ್ನು ನಂಬಿದ್ದಾರೆ. ಒಂದು ಕಡೆ ರೈತರು ಟ್ರಾಕ್ಟರ್ ಹತ್ತಿ ಹೊಲಕ್ಕೆ ಹೋದರೆ, ಮತ್ತೊಂದು ಕಡೆ ಯುವ ಜನರು ಬ್ಯಾಗು ಹಿಡಿದು ಶಿವಮೊಗ್ಗ ನಗರಕ್ಕೆ ಕೆಲಸಕ್ಕೆ ಬರುತ್ತಾರೆ.
ರಾಜಕೀಯವಾಗಿ ಇದು ಮೊದಲು ಹೊಳೆಹೊನ್ನೂರು ಮೀಸಲು ಕ್ಷೇತ್ರವಾಗಿತ್ತು. 2008ರಲ್ಲಿ ಕ್ಷೇತ್ರ ಪುನರ್ವಿಂಗಡನೆಯಾದ ಬಳಿಕ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರವಾಯಿತು. ಆದ್ದರಿಂದ, ಕ್ಷೇತ್ರ ಎರಡು ಚುನಾವಣೆಗಳನ್ನು ಮಾತ್ರ ಕಂಡಿದೆ.

ಜೆಡಿಎಸ್ನ ಶಾರಾದಾ ಪೂರಾ ನಾಯ್ಕ್ ಕ್ಷೇತ್ರದ ಶಾಸಕಿ. ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಜಿ.ಕುಮಾರಸ್ವಾಮಿ ನಾಲ್ಕನೇ ಸ್ಥಾನಕ್ಕೆ ಕುಸಿದು ಹೀನಾಯ ಸೋಲು ಕಂಡಿದ್ದಾರೆ.
2008ರ ಚುನಾವಣೆಯಲ್ಲಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದರು. ಆದರೆ, 2013ರ ಚುನಾವಣೆಯಲ್ಲಿ ಕೆಜೆಪಿ-ಬಿಜೆಪಿ ಮತ ವಿಭಜನೆ ಕಾರಣ ಬಿಜೆಪಿಗೆ ಸೋಲು ಉಂಟಾಯಿತು. ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಿ.ಬಸವಣ್ಣಪ್ಪ 38,530 ಮತಗಳನ್ನು ಪಡೆದಿದ್ದರು.
ಈ ಬಾರಿ ಬಿಜೆಪಿಗೆ ಕ್ಷೇತ್ರ ಉಳಿಸಿಕೊಳ್ಳಲು ಹೊಸ ಅಭ್ಯರ್ಥಿಗಾಗಿ ಹುಡುಕಾಟ ನಡೆಸುವುದು ಅನಿವಾರ್ಯವಾಗಿದೆ. ಇದಕ್ಕೆ ಪೂರಕ ಎಂಬಂತೆ ಕ್ಷೇತ್ರದಲ್ಲಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಪಡೆಯಲು ಐವರು ಆಕಾಂಕ್ಷಿಗಳಿದ್ದಾರೆ.
2013ರ ಚುನಾವಣೆಯಲ್ಲಿ ಶಾರಾದಾ ಪೂರಾ ನಾಯ್ಕ್ 48,639 ಮತಗಳನ್ನು ಪಡೆದು ಜಯಗಳಿಸಿದ್ದರು. ಕೆಜೆಪಿಯ ಜಿ.ಬಸವಣ್ಣಪ್ಪ 38,530 ಮತ ಪಡೆದು 2ನೇ ಸ್ಥಾನಗಳಿಸಿದ್ದರು. ಕಾಂಗ್ರೆಸ್ನ ಕರಿಯಣ್ಣ 35,640 ಮತ ಪಡೆದು 3ನೇ ಸ್ಥಾನ ಪಡೆದಿದ್ದರು. ಬಿಜೆಪಿಯ ಕೆ.ಜಿ.ಕುಮಾರಸ್ವಾಮಿ ಕೇವಲ 12,435 ಮತ ಪಡೆದು 4ನೇ ಸ್ಥಾನಗಳಿಸಿದ್ದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications