ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಯಾರಿಗೆ ಗೆಲುವು?
ಶಿವಮೊಗ್ಗ ನಗರ ಬೆಳೆದಂತೆ ರಚನೆಯಾದ ವಿಧಾನಸಭಾ ಕ್ಷೇತ್ರ ಶಿವಮೊಗ್ಗ ಗ್ರಾಮಾಂತರ. ಕ್ಷೇತ್ರದಲ್ಲಿನ ಪ್ರಮುಖ ಸಮಸ್ಯೆ ಕುಡಿಯುವ ನೀರು. ಕ್ಷೇತ್ರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ನಗರಕ್ಕೆ ಪಾದಯಾತ್ರೆ ನಡೆಸಲಾಗಿತ್ತು.
ಕ್ಷೇತ್ರದ ಹೆಚ್ಚಿನ ಜನರು ಕೃಷಿಯನ್ನು ನಂಬಿದ್ದಾರೆ. ಒಂದು ಕಡೆ ರೈತರು ಟ್ರಾಕ್ಟರ್ ಹತ್ತಿ ಹೊಲಕ್ಕೆ ಹೋದರೆ, ಮತ್ತೊಂದು ಕಡೆ ಯುವ ಜನರು ಬ್ಯಾಗು ಹಿಡಿದು ಶಿವಮೊಗ್ಗ ನಗರಕ್ಕೆ ಕೆಲಸಕ್ಕೆ ಬರುತ್ತಾರೆ.
ರಾಜಕೀಯವಾಗಿ ಇದು ಮೊದಲು ಹೊಳೆಹೊನ್ನೂರು ಮೀಸಲು ಕ್ಷೇತ್ರವಾಗಿತ್ತು. 2008ರಲ್ಲಿ ಕ್ಷೇತ್ರ ಪುನರ್ವಿಂಗಡನೆಯಾದ ಬಳಿಕ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರವಾಯಿತು. ಆದ್ದರಿಂದ, ಕ್ಷೇತ್ರ ಎರಡು ಚುನಾವಣೆಗಳನ್ನು ಮಾತ್ರ ಕಂಡಿದೆ.

ಜೆಡಿಎಸ್ನ ಶಾರಾದಾ ಪೂರಾ ನಾಯ್ಕ್ ಕ್ಷೇತ್ರದ ಶಾಸಕಿ. ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಜಿ.ಕುಮಾರಸ್ವಾಮಿ ನಾಲ್ಕನೇ ಸ್ಥಾನಕ್ಕೆ ಕುಸಿದು ಹೀನಾಯ ಸೋಲು ಕಂಡಿದ್ದಾರೆ.
2008ರ ಚುನಾವಣೆಯಲ್ಲಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದರು. ಆದರೆ, 2013ರ ಚುನಾವಣೆಯಲ್ಲಿ ಕೆಜೆಪಿ-ಬಿಜೆಪಿ ಮತ ವಿಭಜನೆ ಕಾರಣ ಬಿಜೆಪಿಗೆ ಸೋಲು ಉಂಟಾಯಿತು. ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಿ.ಬಸವಣ್ಣಪ್ಪ 38,530 ಮತಗಳನ್ನು ಪಡೆದಿದ್ದರು.
ಈ ಬಾರಿ ಬಿಜೆಪಿಗೆ ಕ್ಷೇತ್ರ ಉಳಿಸಿಕೊಳ್ಳಲು ಹೊಸ ಅಭ್ಯರ್ಥಿಗಾಗಿ ಹುಡುಕಾಟ ನಡೆಸುವುದು ಅನಿವಾರ್ಯವಾಗಿದೆ. ಇದಕ್ಕೆ ಪೂರಕ ಎಂಬಂತೆ ಕ್ಷೇತ್ರದಲ್ಲಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಪಡೆಯಲು ಐವರು ಆಕಾಂಕ್ಷಿಗಳಿದ್ದಾರೆ.
2013ರ ಚುನಾವಣೆಯಲ್ಲಿ ಶಾರಾದಾ ಪೂರಾ ನಾಯ್ಕ್ 48,639 ಮತಗಳನ್ನು ಪಡೆದು ಜಯಗಳಿಸಿದ್ದರು. ಕೆಜೆಪಿಯ ಜಿ.ಬಸವಣ್ಣಪ್ಪ 38,530 ಮತ ಪಡೆದು 2ನೇ ಸ್ಥಾನಗಳಿಸಿದ್ದರು. ಕಾಂಗ್ರೆಸ್ನ ಕರಿಯಣ್ಣ 35,640 ಮತ ಪಡೆದು 3ನೇ ಸ್ಥಾನ ಪಡೆದಿದ್ದರು. ಬಿಜೆಪಿಯ ಕೆ.ಜಿ.ಕುಮಾರಸ್ವಾಮಿ ಕೇವಲ 12,435 ಮತ ಪಡೆದು 4ನೇ ಸ್ಥಾನಗಳಿಸಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications