ಕ್ಷೇತ್ರ ಪರಿಚಯ: ಗೊಮ್ಮಟ ನಗರಿಯಲ್ಲಿ ಜಿದ್ದಾಜಿದ್ದಿನ ಹೋರಾಟ
ಐತಿಹಾಸಿಕ ನಗರಿ ಶ್ರವಣ ಬೆಳಗೊಳ ಪ್ರಮುಖ ಜೈನ ಧಾರ್ಮಿಕ ಕೇಂದ್ರ. ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಒಂದು ಹೋಬಳಿಯಾಗಿದ್ದರೂ ವಿಧಾನಸಭಾ ಕ್ಷೇತ್ರವಾಗಿ ಬೆಳೆದಿದೆ.ಇಲ್ಲಿನ ವಿಂಧ್ಯಗಿರಿಯಲ್ಲಿ ಚಾವುಂಡರಾಯನಿಂದ ಸ್ಥಾಪಿಸಲಾಗಿರುವ ಗೊಮ್ಮಟ ಮೂರ್ತಿಯ ಏಕಶಿಲಾ ವಿಗ್ರಹ ವಿಶ್ವಪ್ರಸಿದ್ಧಿ.
ಈ ಬಾರಿ ಮಹಾಮಸ್ತಕಾಭಿಷೇಕಕ್ಕೆ ಸಜ್ಜಾಗುತ್ತಿರುವ ಈ ನಗರ ಪ್ರಮುಖ ವಿದ್ಯಾಕೇಂದ್ರವೂ ಹೌದು. ಈ ಬಾರಿ ಕೂಡಾ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಜಿದ್ದಾಜಿದ್ದಿನ ಹೋರಾಟ ಸಾಧ್ಯತೆಯಿದೆ.
ಮಹಾಮಸ್ತಕಾಭಿಷೇಕ ಆಚರಣೆ ಸಿದ್ಧತೆಯಲ್ಲಿ ಉಭಯ ಪಕ್ಷಗಳು ಪಾಲ್ಗೊಳ್ಳುತ್ತಿವೆ. ಆದರೆ, ಈ ಬಾರಿಯೂ ತೆನೆ ಹೊತ್ತ ಮಹಿಳೆಯ ಪಕ್ಷಕ್ಕೆ ಗೊಮ್ಮಟನ ಕೃಪೆ ಸಿಗುವ ಲಕ್ಷಣಗಳಿವೆ.

ಜೈನರ ಮಠದಿಂದ ಹಲವು ಶೈಕ್ಷಣಕ ಸಂಸ್ಥೆಗಳನ್ನು ನಡೆಸಲಾಗುತ್ತಿದ್ದು, ಇಂಜಿನಿಯರಿಂಗ್, ಪಾಲಿಟೆಕ್ನಿಕ್, ಪದವಿ ಕಾಲೇಜುಗಳಿವೆ. ಜೈನ, ಶ್ರೀವೈಷ್ಣವ ಸಂಶೋಧನಾ ಕೇಂದ್ರಗಳಿವೆ.
ಹೆದ್ದಾರಿಗೆ ಹತ್ತಿರವಿದ್ದರೂ ರಾಜಧಾನಿಯಿಂದ ನೇರ ಬಸ್ ಸಂಪರ್ಕವಿಲ್ಲ. ಎಲ್ಲಿಂದ ಬಂದರೂ ಚನ್ನರಾಯಪಟ್ಟಣಕ್ಕೆ ಬಂದು ಅಲ್ಲಿಂದ ಶ್ರವಣಬೆಳಗೊಳ ತಲುಪಬೇಕು. ಹಾಸನದಿಂದ ಬೆಳಗೊಳವನ್ನು ಸಂಪರ್ಕಿಸುವ ರೈಲುಮಾರ್ಗ ಪೂರ್ಣಗೊಂಡಿದೆ. ಮಸ್ತಕಾಭಿಶೇಕದ ಹಿನ್ನಲೆಯಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿ ಭರದಿಂದ ಸಾಗಿದೆ. ಇಲ್ಲಿ ಊಟ ವಸತಿ ಕೇಂದ್ರಗಳಿದ್ದರೂ ಉತ್ತಮ ಗುಣಮಟ್ಟದಲ್ಲಿಲ್ಲ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಒಕ್ಕಲಿಗ, ಜೈನ ಮತದಾರರನ್ನು ಒಲಿಸಿಕೊಂಡು ಜೆಡಿಎಸ್ ನ ಸಿ.ಎನ್ ಬಾಲಕೃಷ್ಣ ಅವರು (87,185) ಕಾಂಗ್ರೆಸ್ಸಿನ ಸಿ. ಎನ್ ಪುಟ್ಟೇಗೌಡ(63041) ವಿರುದ್ಧ 20 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು. ಈ ಬಾರಿ ಕೂಡಾ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಜಿದ್ದಾಜಿದ್ದಿನ ಹೋರಾಟ ಸಾಧ್ಯತೆಯಿದೆ.
ಮಹಾಮಸ್ತಕಾಭಿಷೇಕ ಆಚರಣೆ ಸಿದ್ಧತೆಯಲ್ಲಿ ಉಭಯ ಪಕ್ಷಗಳು ಪಾಲ್ಗೊಳ್ಳುತ್ತಿವೆ. ಆದರೆ, ಈ ಬಾರಿಯೂ ತೆನೆ ಹೊತ್ತ ಮಹಿಳೆಯ ಪಕ್ಷಕ್ಕೆ ಗೊಮ್ಮಟನ ಕೃಪೆ ಸಿಗುವ ಲಕ್ಷಣಗಳಿವೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications