ಸಿಂದಗಿ ಕ್ಷೇತ್ರ: ಬಿಜೆಪಿ-ಜೆಡಿಎಸ್ ನಡುವೆ ಹಣಾಹಣಿ?!
ಸ್ವಾತಂತ್ರ್ಯ ಹೋರಾಟಗಾರ ವಾಸುದೇವ ಬಲವಂತರಾಯ ಪಡಖೇ ಸೆರೆಸಿಕ್ಕ ದೇವರನಾವದಗಿ ದೇವಾಲಯವಿರುವುದು ಸೀಮದಗಿ ತಾಲೂಕಿನಲ್ಲೇ. ವಿಜಯಪುರದ ಪ್ರಸಿದ್ಧ ತಾಣಗಳಲ್ಲಿ ಸಿಂದಗಿಯೂ ಒಂದು.
12 ನೇ ಶತಮಾನದಲ್ಲಿ ಕಲ್ಯಾಣಿ ಚಾಲುಕ್ಯರಿಂದ ನಿರ್ಮಿಸಲ್ಪಟ್ಟ ಇಲ್ಲಿನ ಶ್ರೀ ಸಂಗಮೇಶ್ವರ ದೇವಾಲಯ ಐತಿಹಾಸಿಕ ಪ್ರಸಿದ್ಧಿ ಪಡೆದಿದೆ.
ಇದು ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟದ ರೂವಾರಿ ರಮಾನಂದ ನೀರ್ಥರ ನೆಲೆಯೂ ಹೌದು.

ಉರ್ದು, ಮರಾಠಿ ಮಿಶ್ರಿತ ಕನ್ನಡವನ್ನು ಮಾತನಾಡಿದರೂ ಇಲ್ಲಿನ ಬಹುಸಂಖ್ಯಾತ ಜನರಾಡುವ ಭಾಷೆ ಕನ್ನಡವೇ. ಜೋಳ, ಶೇಂಗಾ, ಈರುಳ್ಳಿ, ಸೂರ್ಯಕಾಂತಿ, ದಾಳಿಂಬೆ ಮುಂತಾದವುಗಳು ಇಲ್ಲಿನ ಮಣ್ಣಿನಲ್ಲಿ ಹೇರಳವಾಗಿ ಬೆಳೆಯುತ್ತವೆ.
ಇಲ್ಲಿಮ ಲಾವಣಿ ಪದ, ಡೊಳ್ಳು ಕುಣಿತ, ಗೀಗೀ ಪದಗಳು ಕರ್ನಾಟಕದ ಜಾನಪದ ಪರಂಪರೆಗೆ ವಿಶೇಷ ಮೆರಗು ನೀಡಿವೆ. ಇಲ್ಲಿನ ಸಾಕ್ಷರತೆಯ ಪ್ರಮಾಣ ಶೇ.67.
ಇನ್ನು ಇಲ್ಲಿನ ರಾಜಕೀಯದ ಬಗ್ಗೆ ಮಾತನಾಡುವುದಾದರೆ, 2013 ರಲ್ಲಿ ಮಾಜಿ ಸಚಿವ ಎಂ.ಸಿ.ಮನಗೂಳಿ ಜೆಡಿಎಸ್ ನಿಂದ ಸ್ಪರ್ಧಿಸಿ ಸೋತಿದ್ದರು. ಬಿಜೆಪಿ ಪ್ರಭಾವ ಹೆಚ್ಚಿಲ್ಲದಿದ್ದರೂ ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಗೆಲುವು ಸಾಧಿಸಿ ಅಚ್ಚರಿ ಮೂಡಿಸಿದ್ದರು.
ಆದರೆ ಈ ಚುನಾವಣೆಯಲ್ಲೂ ಇದಕ್ಕೆ ಅವಕಾಶ ಮಾಡಿಕೊಡಬಾರದೆಂದು ಮನಗೂಳಿ ಈಗಿನಿಂದಲೇ ತಂತ್ರ ರೂಪಿಸುತ್ತಿದ್ದು, ಈ ಬಾರಿ ಬಿಜೆಪಿ, ಜೆಡಿಎಸ್ ಮಧ್ಯೆ ಪ್ರಬಲ ಸ್ಪರ್ಧೆ ಏರ್ಪಡಲಿದೆ.
ರಮೇಶ ಭುಸನೂರ 37834 ಮತಗಳನ್ನು ಪಡೆದಿದ್ದರೆ, 37082 ಮತಗಳನ್ನು ಪಡೆಯುವ ಮೂಲಕ ಜೆಡಿಎಸ್ ನ ಎಂ.ಸಿ.ಮನಗೂಳಿ ತೀವ್ರ ಪ್ರತಿಸ್ಪರ್ಧೆ ಒಡ್ಡಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications