ಕ್ಷೇತ್ರ ಪರಿಚಯ : ‘ಭತ್ತದ ಕಣಜ'ದಲ್ಲಿ ಗೆಲುವು ಯಾರಿಗೆ?
ರಾಯಚೂರು ಜಿಲ್ಲೆಯ ಮುಖ್ಯ ತಾಲೂಕು ಕೇಂದ್ರ ಸಿಂಧನೂರು. ಜಿಲ್ಲೆಯ ಪ್ರಮುಖ ವಾಣಿಜ್ಯ ಕೇಂದ್ರವಿದಾಗಿದೆ. ತಾಲೂಕು ತುಂಗಭದ್ರಾ ಎಡದಂಡೆ ಕಾಲುವೆಯ ನೀರಾವರಿ ಪ್ರದೇಶದ ವ್ಯಾಪ್ತಿಗೆ ಒಳಪಡುತ್ತದೆ.
ಕ್ಷೇತ್ರದ ವ್ಯಾಪ್ತಿಯ ಬಹುತೇಕ ಭೂಮಿಯು ಕೃಷಿ ಯೋಗ್ಯವಾದ ಕಪ್ಪು ಮಣ್ಣಿನಿಂದ ಕೂಡಿದೆ. ತುಂಗಭದ್ರಾ ನದಿ ನೀರನ್ನು ಉಪಯೋಗಿಸಿಕೊಂಡು ಭತ್ತ ಬೆಳೆಯಲಾಗುತ್ತದೆ.
ಸಿಂಧನೂರನ್ನು 'ರಾಯಚೂರಿನ ಭತ್ತದ ಕಣಜ' ಎಂದು ಕರೆಯಲಾಗುತ್ತದೆ. ತುಂಗಭದ್ರಾ ನದಿ ನೀರಿನ ಲಭ್ಯತೆ ಇರುವುದದಿಂದ ವರ್ಷದಲ್ಲಿ ಎರಡು ಬಾರಿ ಭತ್ತವನ್ನು ಬೆಳೆಯುತ್ತಾರೆ.

ಕೃಷಿ ಚಟುವಟಿಕೆಗಳು ವರ್ಷಪೂರ್ತಿ ನಡೆಯುವುದರಿಂದ ಅತೀ ಹೆಚ್ಚು ಟ್ರಾಕ್ಟರ್ ಮಾರಾಟ ಇಲ್ಲಿ ನಡೆಯುತ್ತದೆ. ವಿದೇಶಗಳಿಗೆ ರಫ್ತಾಗುವ ಸೋನಾ ಮಸೂರಿ ಮತ್ತು ಬಾಸುವತಿ ಅಕ್ಕಿಯನ್ನು ಸಿಂಧನೂರಿನಲ್ಲಿ ಬೆಳೆಯಲಾಗುತ್ತಿದೆ.
ಕನ್ನಡ, ತಮಿಳು, ಬೆಂಗಾಲಿ, ರಾಜಸ್ಥಾನಿ, ಉರ್ದು ಹೀಗೆ ವಿವಿಧ ಭಾಷಗಳನ್ನು ಮಾತನಾಡುವ ಜನರು ಇಲ್ಲಿ ಸಿಗುತ್ತಾರೆ. ಸಿಂಧನೂರಿನಲ್ಲಿರುವ ಅಂಬಾದೇವಿಯ ಜಾತ್ರೆ ಪ್ರಸಿದ್ಧಿ ಪಡೆದಿದೆ. ಸಂಜೆ ತೇರು ಎಳೆಯುವುದು ಇಲ್ಲಿನ ಜಾತ್ರೆಯ ವಿಶೇಷವಾಗಿದೆ.
ರಾಜಕೀಯವಾಗಿ ಬಿಜೆಪಿ ನಾಯಕ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಅವರ ಕ್ಷೇತ್ರ ಸಿಂಧನೂರು. ಆದರೆ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಜೊತೆ ಅವರು ಗುರುತಿಸಿಕೊಂಡಿದ್ದಾರೆ. ಇದು ಚುನಾವಣೆ ಮೇಲೆಯೂ ಪ್ರಭಾವ ಬೀರಲಿದೆಯೇ? ಕಾದು ನೋಡಬೇಕು.
ಕ್ಷೇತ್ರದ ಹಾಲಿ ಶಾಸಕರು ಕಾಂಗ್ರೆಸ್ನ ಬಾದರ್ಲಿ ಹಂಪನಗೌಡರು. ಜೆಡಿಎಸ್ ಪಕ್ಷದ ವೆಂಕಟರಾವ್ ನಾಡಗೌಡರು ಹಂಪನಗೌಡರಿಗೆ ಪ್ರಬಲ ಪೈಪೋಟಿ ನೀಡುತ್ತಾರೆ. ವೆಂಕಟರಾವ್ ಜೆಡಿಎಸ್ ವರಿಷ್ಠ ನಾಯಕರಿಗೆ ಆಪ್ತರು. ಆದ್ದರಿಂದ, ಈ ಬಾರಿಯು ಟಿಕೆಟ್ ಖಚಿತ.
ಬಿಜೆಪಿಗೆ ಸಿಂಧನೂರು ಕ್ಷೇತ್ರದಲ್ಲಿ ಅಭ್ಯರ್ಥಿ ಯಾರು? ಎಂಬುದು ಖಚಿತವಾಗಿಲ್ಲ. 2013ರ ಚುನಾವಣೆಯಲ್ಲಿ ಕೆಜೆಪಿಯಿಂದ ಸ್ಪರ್ಧಿಸಿದ್ದ ರಾಜಶೇಖರ ಗೌಡರೂ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ. ಆದರೆ, ವಿರೂಪಾಕ್ಷಪ್ಪ ಅವರಿಗೆ ಬೆಂಬಲ ನೀಡುತ್ತಾರೆಯೇ?.
2013ರ ಚುನಾವಣೆಯಲ್ಲಿ ಬಾದರ್ಲಿ ಹಂಪನಗೌಡರು 49,213 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ನ ವೆಂಕಟರಾವ್ ನಾಡಗೌಡ 30,895 ಮತ, ಬಿಜೆಪಿಯ ಕೊಲ್ಲಾ ಶೇಷಗಿರಿ ರಾವ್ 10,557 ಮತಗಳನ್ನು ಪಡೆದಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications