ಕ್ಷೇತ್ರ ಪರಿಚಯ : ‘ಭತ್ತದ ಕಣಜ'ದಲ್ಲಿ ಗೆಲುವು ಯಾರಿಗೆ?
ರಾಯಚೂರು ಜಿಲ್ಲೆಯ ಮುಖ್ಯ ತಾಲೂಕು ಕೇಂದ್ರ ಸಿಂಧನೂರು. ಜಿಲ್ಲೆಯ ಪ್ರಮುಖ ವಾಣಿಜ್ಯ ಕೇಂದ್ರವಿದಾಗಿದೆ. ತಾಲೂಕು ತುಂಗಭದ್ರಾ ಎಡದಂಡೆ ಕಾಲುವೆಯ ನೀರಾವರಿ ಪ್ರದೇಶದ ವ್ಯಾಪ್ತಿಗೆ ಒಳಪಡುತ್ತದೆ.
ಕ್ಷೇತ್ರದ ವ್ಯಾಪ್ತಿಯ ಬಹುತೇಕ ಭೂಮಿಯು ಕೃಷಿ ಯೋಗ್ಯವಾದ ಕಪ್ಪು ಮಣ್ಣಿನಿಂದ ಕೂಡಿದೆ. ತುಂಗಭದ್ರಾ ನದಿ ನೀರನ್ನು ಉಪಯೋಗಿಸಿಕೊಂಡು ಭತ್ತ ಬೆಳೆಯಲಾಗುತ್ತದೆ.
ಸಿಂಧನೂರನ್ನು 'ರಾಯಚೂರಿನ ಭತ್ತದ ಕಣಜ' ಎಂದು ಕರೆಯಲಾಗುತ್ತದೆ. ತುಂಗಭದ್ರಾ ನದಿ ನೀರಿನ ಲಭ್ಯತೆ ಇರುವುದದಿಂದ ವರ್ಷದಲ್ಲಿ ಎರಡು ಬಾರಿ ಭತ್ತವನ್ನು ಬೆಳೆಯುತ್ತಾರೆ.

ಕೃಷಿ ಚಟುವಟಿಕೆಗಳು ವರ್ಷಪೂರ್ತಿ ನಡೆಯುವುದರಿಂದ ಅತೀ ಹೆಚ್ಚು ಟ್ರಾಕ್ಟರ್ ಮಾರಾಟ ಇಲ್ಲಿ ನಡೆಯುತ್ತದೆ. ವಿದೇಶಗಳಿಗೆ ರಫ್ತಾಗುವ ಸೋನಾ ಮಸೂರಿ ಮತ್ತು ಬಾಸುವತಿ ಅಕ್ಕಿಯನ್ನು ಸಿಂಧನೂರಿನಲ್ಲಿ ಬೆಳೆಯಲಾಗುತ್ತಿದೆ.
ಕನ್ನಡ, ತಮಿಳು, ಬೆಂಗಾಲಿ, ರಾಜಸ್ಥಾನಿ, ಉರ್ದು ಹೀಗೆ ವಿವಿಧ ಭಾಷಗಳನ್ನು ಮಾತನಾಡುವ ಜನರು ಇಲ್ಲಿ ಸಿಗುತ್ತಾರೆ. ಸಿಂಧನೂರಿನಲ್ಲಿರುವ ಅಂಬಾದೇವಿಯ ಜಾತ್ರೆ ಪ್ರಸಿದ್ಧಿ ಪಡೆದಿದೆ. ಸಂಜೆ ತೇರು ಎಳೆಯುವುದು ಇಲ್ಲಿನ ಜಾತ್ರೆಯ ವಿಶೇಷವಾಗಿದೆ.
ರಾಜಕೀಯವಾಗಿ ಬಿಜೆಪಿ ನಾಯಕ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಅವರ ಕ್ಷೇತ್ರ ಸಿಂಧನೂರು. ಆದರೆ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಜೊತೆ ಅವರು ಗುರುತಿಸಿಕೊಂಡಿದ್ದಾರೆ. ಇದು ಚುನಾವಣೆ ಮೇಲೆಯೂ ಪ್ರಭಾವ ಬೀರಲಿದೆಯೇ? ಕಾದು ನೋಡಬೇಕು.
ಕ್ಷೇತ್ರದ ಹಾಲಿ ಶಾಸಕರು ಕಾಂಗ್ರೆಸ್ನ ಬಾದರ್ಲಿ ಹಂಪನಗೌಡರು. ಜೆಡಿಎಸ್ ಪಕ್ಷದ ವೆಂಕಟರಾವ್ ನಾಡಗೌಡರು ಹಂಪನಗೌಡರಿಗೆ ಪ್ರಬಲ ಪೈಪೋಟಿ ನೀಡುತ್ತಾರೆ. ವೆಂಕಟರಾವ್ ಜೆಡಿಎಸ್ ವರಿಷ್ಠ ನಾಯಕರಿಗೆ ಆಪ್ತರು. ಆದ್ದರಿಂದ, ಈ ಬಾರಿಯು ಟಿಕೆಟ್ ಖಚಿತ.
ಬಿಜೆಪಿಗೆ ಸಿಂಧನೂರು ಕ್ಷೇತ್ರದಲ್ಲಿ ಅಭ್ಯರ್ಥಿ ಯಾರು? ಎಂಬುದು ಖಚಿತವಾಗಿಲ್ಲ. 2013ರ ಚುನಾವಣೆಯಲ್ಲಿ ಕೆಜೆಪಿಯಿಂದ ಸ್ಪರ್ಧಿಸಿದ್ದ ರಾಜಶೇಖರ ಗೌಡರೂ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ. ಆದರೆ, ವಿರೂಪಾಕ್ಷಪ್ಪ ಅವರಿಗೆ ಬೆಂಬಲ ನೀಡುತ್ತಾರೆಯೇ?.
2013ರ ಚುನಾವಣೆಯಲ್ಲಿ ಬಾದರ್ಲಿ ಹಂಪನಗೌಡರು 49,213 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ನ ವೆಂಕಟರಾವ್ ನಾಡಗೌಡ 30,895 ಮತ, ಬಿಜೆಪಿಯ ಕೊಲ್ಲಾ ಶೇಷಗಿರಿ ರಾವ್ 10,557 ಮತಗಳನ್ನು ಪಡೆದಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications