ಟಿ. ನರಸೀಪುರ ಕ್ಷೇತ್ರ : ಕಾಂಗ್ರೆಸ್ಸಿಗೆ ಗೆಲುವು ಕಷ್ಟ ಕಷ್ಟ?
Recommended Video

ಕಾವೇರಿ ಕಪಿಲೆ ಸಂಗಮ ಸ್ಥಳ, ಪುಣ್ಯಕ್ಷೇತ್ರ ತಿರುಮ ಕೂಡಲು ನರಸೀಪುರದಲ್ಲಿ ಸಚಿವ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಎಂ.ಸಿ. ಮಹದೇವಪ್ಪ ಅವರ ಮತ್ತೆ ಕಣಕ್ಕಿಯುವುದು ಅನುಮಾನ. ಈ ಚುನಾವಣೆಗೆ ಅವರ ಪುತ್ರ ಸುನೀಲ್ ಬೋಸ್ ಅವರನ್ನು ಕಣಕ್ಕಿಳಿಸುವುದು ಖಚಿತವಾಗಿದೆ.
ಮೀಸಲು ಕ್ಷೇತ್ರವಾಗಿರುವ ಇಲ್ಲಿ ಸಚಿವ ಮಹದೇವಪ್ಪ ಅವರಿಗಿಂತ ಅವರ ಪುತ್ರನ ಪ್ರಭಾವವೇ ಹೆಚ್ಚು. ಈಗಾಗಲೇ ಅವರ ವಿರುದ್ಧ ಕೆಲವು ಆರೋಪಗಳು ಕೇಳಿ ಬಂದಿದ್ದನ್ನು ಇಲ್ಲಿ ಸ್ಮರಿಸಬಹುದು.

ಈ ಕೆಲವಾರು ಆರೋಪಗಳಲ್ಲಿ ಅಕ್ರಮ ಮರಳು ದಂಧೆಯ ಆರೋಪ ಪ್ರಮುಖವಾದದ್ದು. ನ್ಯಾಯಾಲಯದ ಮೆಟ್ಟಿಲೇರಿರುವ ಈ ಪ್ರಕರಣದಲ್ಲಿ ಅವರು ತಪ್ಪಿತಸ್ಥರೆಂದು ಸಾಬೀತಾದರೆ ಅವರಿಗೆ ಶಿಕ್ಷೆಯೂ ಆಗಬಹುದು ಎಂಬ ಭೀತಿಯಿಂದಲೆ ಕಣಕ್ಕಿಳಿಯಬೇಕಿದೆ.
ಈ ವಿಚಾರವೇ, ಈ ಕ್ಷೇತ್ರದ ಜನತೆಯು ಎಂ.ಸಿ. ಮಹದೇವಪ್ಪ ಹಾಗೂ ಅವರ ಪುತ್ರನ ವಿರುದ್ಧ ಅಸಮಾಧಾನಗೊಳ್ಳಲು ಕಾರಣ. ಅಲ್ಲದೆ, ಶ್ರೀನಿವಾಸ್ ಪ್ರಸಾದ್ ಅವರ ವಿರುದ್ಧ ತಮ್ಮ ಮಗನನ್ನು ಚುನಾವಣೆಗೆ ನಿಲ್ಲಿಸಲು ಯತ್ನಿಸಿದ್ದು ಈ ಕ್ಷೇತ್ರದ ದಲಿತರು ಅಪ್ಪ-ಮಗನ ವಿರುದ್ಧ ಕಿಡಿ ಕಾರುವಂತಾಗಿದೆ.
ಇದರ ಲಾಭವಾಗಿರುವುದು ಜೆಡಿಎಸ್ ಗೆ. ಆ ಪಕ್ಷದ ಸುಂದರೇಶನ್ ಅಥವಾ ಅವರ ಪುತ್ರ ಸಾಮ್ರಾಟ್ ಗೆ ಅವಕಾಶ ಹೆಚ್ಚಿದೆ. ಇನ್ನು ಬಿಜೆಪಿಯ ಭಾರತೀ ಶಂಕರ್ ಅವರು ಅದೇ ಪಕ್ಷದಿಂದ ಟಿಕೆಟ್ ಪಡೆಯುವುದು ಅನುಮಾನವಾಗಿರುವುದರಿಂದ ಅವರು ಅದೇ ಪಕ್ಷದಲ್ಲಿರುತ್ತಾರೋ ಅಥವಾ ಬೇರೆ ಪಕ್ಷ ಸೇರುತ್ತಾರೋ ಎಂಬುದು ಸ್ಪಷ್ಟವಾಗಿಲ್ಲ. ಈ ಎಲ್ಲವನ್ನೂ ಗಮನಿಸಿ ನೋಡುವುದಾದರೆ, ಕಾಂಗ್ರೆಸ್ ಪಕ್ಷಕ್ಕೆ ಇಲ್ಲಿ ಈ ಬಾರಿ ಗೆಲುವು ಕಷ್ಟ.
2013ರ ಫಲಿತಾಂಶ: 2013ರಲ್ಲಿ ಶೇ 75.23ರಷ್ಟು ಮತದಾನವಾಗಿತ್ತು. ಕಾಂಗ್ರೆಸ್ಸಿನ ಡಾ. ಎಚ್. ಸಿ ಮಹದೇವಪ್ಪ್ ಅವರು 53,219 ಮತಗಳನ್ನು ಗಳಿಸಿದ್ದರು. ಜೆಡಿಎಸ್ ಅಭ್ಯರ್ಥಿ ಎಂ.ಸಿ ಸುಂದರೇಶನ್ 52896 ಮತಗಳನ್ನು ಗಳಿಸಿ 323(ಶೇ0.24) ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications