ಕ್ಷೇತ್ರ ಪರಿಚಯ : ತೇರದಾಳದಲ್ಲಿ ಈ ಬಾರಿ ಯಾರಿಗೆ ಗೆಲುವು?
ತೇರದಾಳ ಬಾಗಲಕೋಟೆ ಜಿಲ್ಲೆಯ ಒಂದು ವಿಧಾನಸಭಾ ಕ್ಷೇತ್ರ. ಸುಮಾರು ನಾಲ್ಕೂವರೆ ದಶಕಗಳಿಂದ ತೇರದಾಳವನ್ನು ತಾಲೂಕು ಕೇಂದ್ರವನ್ನಾಗಿ ಮಾಡಬೇಕು ಎಂದು ಹೋರಾಟ ನಡೆಯುತ್ತಿದೆ. ತಾಲೂಕು ಕೇಂದ್ರ ಮಾಡದಿದ್ದರೆ ಚುನಾವಣೆ ಬಹಿಷ್ಕಾರ ಮಾಡುವುದಾಗಿ ಎಚ್ಚರಿಕೆಯನ್ನು ನೀಡಲಾಗಿತ್ತು.
ತೇರದಾಳ ಕ್ಷೇತ್ರ ಹಾಲಿ ಶಾಸಕಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ. ಕ್ಷೇತ್ರದ ಶಾಸಕಿ ಮೇಲೆ ಯಾವುದೇ ಆರೋಪಗಳಿಲ್ಲ. ಆದರೆ, ತೇರದಾಳ ತಾಲೂಕು ಹೋರಾಟ ಸಮಿತಿ ಪಟ್ಟಣವನ್ನು ತಾಲೂಕು ಮಾಡಬೇಕು ಎಂದು ಇಂದಿಗೂ ಹೋರಾಟ ಮಾಡುತ್ತಿದೆ.
ಪಟ್ಟಣವನ್ನು ತಾಲೂಕು ಕೇಂದ್ರವಾಗಿ ಮಾಡಲು ಉಮಾಶ್ರೀ ಅವರು ಸಾಕಷ್ಟು ಪ್ರಯತ್ನ ಪಟ್ಟಿದ್ದಾರೆ ಎಂಬ ಅಭಿಪ್ರಾಯವಿದೆ. ನೇಕಾರರ ಹಲವು ಸಮಸ್ಯೆಗಳಿಗೆ ಉಮಾಶ್ರೀ ಅವರು ಸ್ಪಂದಿಸಿದ್ದಾರೆ ಎಂದು ಜನರು ಹೇಳುತ್ತಾರೆ. ಕ್ಷೇತ್ರದಲ್ಲಿ ನೇಕಾರ ಸಮುದಾಯದ ಮತಗಳು ನಿರ್ಣಾಯಕ. ನೇಕಾರ ಸುದಾಯದ ಬೆಂಬಲ ಉಮಾಶ್ರೀ ಅವರಿಗೆ ಇದೆ.

2013 ರ ಚುನಾವಣೆಯಲ್ಲಿ ಬಿಜೆಪಿಯಿಂದ ಮಾಜಿ ಶಾಸಕ ಸಿದ್ದು ಸವದಿ ಕಣಕ್ಕಿಳಿದಿದ್ದರು. ಉಮಾಶ್ರೀ ಅವರ ವಿರುದ್ಧ ಸೋತಿದ್ದರು. ಬಿಜೆಪಿ-ಕೆಜೆಪಿ ಗೊಂದಲ ಕಾರಣದಿಂದಾಗಿ ಸಿದ್ದು ಸವದಿ ಅವರಿಗೆ ಸೋಲಾಗಿತ್ತು. ಬಿಜೆಪಿ ತೊರೆದು ಕೆಜೆಪಿ ಸೇರಿದ್ದ ಮುಖಂಡರಿಂದಾಗಿ ಬಿಜೆಪಿಗೆ ಅಭ್ಯರ್ಥಿಗೆ ಹಿನ್ನಡೆ ಉಂಟಾಗಿತ್ತು.
ಈ ಬಾರಿಯ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಈ ಹಿಂದೆ ಬಿಜೆಪಿ ಬಿಟ್ಟು ಕೆಜೆಪಿ ಸೇರಿದ್ದ ಬಸವರಾಜ ಬಾಳಿಕಾಯಿ ಮತ್ತೆ ಬಿಜೆಪಿ ಸೇರಿದ್ದಾರೆ, ಅವರು ಆಕಾಂಕ್ಷಿ. ಆದರೆ, ಸಿದ್ದು ಸವದಿ ಅವರಿಗೆ ಟಿಕೆಟ್ ಖಚಿತ ಎಂಬ ಸುದ್ದಿ ಇದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಜೆಡಿಎಸ್ ಪಕ್ಷದಿಂದ ಈ ಭಾಗದ ಶಿಕ್ಷಣ ಪ್ರೇಮಿ, ಸ್ಥಳೀಯರಾದ ಬಸವರಾಜ ಕೊಣ್ಣೂರು ಅವರು ಅಭ್ಯರ್ಥಿಯಾಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ವಲಸಿಗರಿಗಿಂತ ಸ್ಥಳೀಯರಿಗೆ ಹೆಚ್ಚು ಆದ್ಯತೆ ನೀಡಬೇಕು ಎನ್ನುವ ಕೂಗು ಎದ್ದಿದೆ. ತಮ್ಮ ಕೈಗೆ ಸಿಗುವ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂಬ ಅಲೆ ಎದ್ದಿರುವುದು ಜೆಡಿಎಸ್ ಪಾಲಿಗೆ ವರವಾಗುವ ಸಾಧ್ಯತೆ ಇದೆ.
2013ರ ಫಲಿತಾಂಶ
ಉಮಾಶ್ರೀ : 70,189
ಸಿದ್ದು ಸವದಿ (ಬಿಜೆಪಿ) : 67,590 ಮತಗಳು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications