ಕ್ಷೇತ್ರ ಪರಿಚಯ : ತುಂಗಾ ತೀರದ ತೀರ್ಥಹಳ್ಳಿಯಲ್ಲಿ ಗೆಲುವು ಯಾರಿಗೆ?
ತುಂಗಾ ನದಿ ತಟದಲ್ಲಿರುವ ಅಪ್ಪಟ ಮಲೆನಾಡ ಕ್ಷೇತ್ರ ತೀರ್ಥಹಳ್ಳಿ. ಸಮಾಜವಾದಿ ಚಳವಳಿ, ಸಾಹಿತ್ಯ ಕ್ಷೇತ್ರಕ್ಕೆ ಕ್ಷೇತ್ರದ ಕೊಡುಗೆ ಅಪಾರ. ಕ್ಷೇತ್ರದ ಜನರು ಅಡಿಕೆ ಬೆಳೆ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಕೆಲಸಕ್ಕೆ ಜನರು ಸಿಗುವುದಿಲ್ಲ ಎಂಬುದು ಪ್ರಸ್ತುತ ಬಹುದೊಡ್ಡ ಸಮಸ್ಯೆಯಾಗಿದೆ.
ಯುವಕ-ಯುವತಿಯರು ಓದು ಮುಗಿಸಿ, ಕೈಯಲ್ಲಿ ಪದವಿ ಹಿಡಿದು ಬೆಂಗಳೂರು ನಗರದ ಬಸ್ಸು ಹತ್ತುತ್ತಿದ್ದಾರೆ. ಕ್ಷೇತ್ರದ ವ್ಯಾಪ್ತಿಯಲ್ಲಿ ತುಂಗಾ ನದಿ ಹರಿಯುತ್ತದೆ. ಆದರೆ, ಮರಳಿಗೆ ಬಂಗಾರದ ಬೆಲೆ ಇದೆ. ಅಕ್ರಮ ಮರಳು ಸಾಗಣೆಗೆ ತಡೆ ಹಾಕಬೇಕು ಎಂಬ ಕೂಗಿಗೆ ಸರಿಯಾದ ಬೆಲೆ ಸಿಕ್ಕಿಲ್ಲ.
ರಿಯಲ್ ಎಸ್ಟೇಟ್ ಉದ್ಯಮ ಈಗ ಚಿಗುರೊಡೆಯುತ್ತಿದೆ. ಅರಣ್ಯ ಭೂಮಿಯಲ್ಲಿ ಜಮೀನಿ, ಮನೆ ಮಾಡಿಕೊಂಡವರು ಬಗರ್ಹುಕುಂಗಾಗಿ ಅರ್ಜಿ ಸಲ್ಲಿಸಿ ಕಾದು ಕುಳಿತಿದ್ದಾರೆ. ಅರಣ್ಯ ಇಲಾಖೆ, ಕಂದಾಯ ಇಲಾಖೆಯವರು ನಮ್ಮನ್ನು ಒಕ್ಕಲೆಬ್ಬಿಸುತ್ತಾರೆಯೇ? ಎಂಬ ಪ್ರಶ್ನೆ ಜನರನ್ನು ಕಾಡುತ್ತಲೆ ಇದೆ.

2013ರ ಚುನಾವಣೆಯಲ್ಲಿ ಕಾಂಗ್ರೆಸ್ನ ಕಿಮ್ಮನೆ ರತ್ನಾಕರ ಅವರು ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಮ್ಮನೆ ರತ್ನಾಕರ ಅವರನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರನ್ನಾಗಿ ಮಾಡಿದರು. ಆದರೆ, ಸಂಪುಟ ಪುನಾರಚನೆ ಸಮಯದಲ್ಲಿ ಸಚಿವ ಸ್ಥಾನವನ್ನು ಅವರು ಕಳೆದುಕೊಂಡರು.
ಸಾಕಷ್ಟು ಕೆಲಸ ಮಾಡಿದ್ದಾರೆ, ಜನರ ಕೈಗೆ ಸುಲಭವಾಗಿ ಶಾಸಕರು ಕೈಗೆ ಸಿಗುತ್ತಾರೆ. ಆದ್ದರಿಂದ, 2018ರ ಚುನಾವಣೆಯಲ್ಲಿಯೂ ಕಿಮ್ಮನೆ ರತ್ನಾಕರ ಅವರಿಗೆ ಟಿಕೆಟ್ ಖಚಿತ.
ಬಿಜೆಪಿಯಿಂದ ಮಾಜಿ ಶಾಸಕ ಆರಗ ಜ್ಞಾನೇಂದ್ರ ಅಭ್ಯರ್ಥಿಯಾಗುವುದು ಖಚಿತ, ಸಾಮಾಜಿಕ ಜಾಲತಾಣದಲ್ಲಿ ಅವರ ಪರವಾಗಿ ಭರ್ಜರಿ ಪ್ರಚಾರ ಆರಂಭವಾಗಿದೆ. 'ದೆಹಲಿಗೆ ನರೇಂದ್ರ, ತೀರ್ಥಹಳ್ಳಿಗೆ ಜ್ಞಾನೇಂದ್ರ' ಎಂಬುದು ಕ್ಷೇತ್ರದ ಬಿಜೆಪಿ ಸದಸ್ಯರ ಘೋಷವಾಕ್ಯವಾಗಿದೆ.
ಈ ಬಾರಿಯ ಚುನಾಣೆಯಲ್ಲಿ ತ್ರಿಕೋನ ಸ್ಪರ್ಧೆ ಖಚಿತ. ಅದಕ್ಕೆ ಕಾರಣ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರು ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಯಲು ಸಿದ್ಧವಾಗಿರುವುದು.
2013ರ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿಯಾಗಿದ್ದ ಆರ್.ಎಂ.ಮಂಜುನಾಥ ಗೌಡರು 35,817ಮತಗಳನ್ನು ಪಡೆದಿದ್ದರು. ಚುನಾವಣೆ ಬಳಿಕ ಕಾಂಗ್ರೆಸ್ ಸೇರಿದ್ದರು, ಈ ಬಾರಿ ಜೆಡಿಎಸ್ನಿಂದ ಸ್ಪರ್ಧಿಸಲಿದ್ದಾರೆ. ಆದ್ದರಿಂದ, ಕ್ಷೇತ್ರದ ಕದನ ಕುತೂಹಲಕ್ಕೆ ಕಾರಣವಾಗಿದೆ.
2013ರ ಚುನಾವಣೆಯಲ್ಲಿ ಕಿಮ್ಮನೆ ರತ್ನಾಕರ ಅವರು 37,160 ಮತಗಳನ್ನು ಪಡೆದಿದ್ದರು. ಕೆಜೆಪಿಯಿಂದ ಸ್ಪರ್ಧಿಸಿದ್ದ ಆರ್.ಎಂ.ಮಂಜುನಾಥ ಗೌಡ 35,817 ಮತ, ಬಿಜೆಪಿಯಿಂದ ಸ್ಪರ್ಧಿಸಿದ್ದ ಆರಗ ಜ್ಞಾನೇಂದ್ರ ಅವರು 34,446 ಮತಗಳನ್ನು ಪಡೆದಿದ್ದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications