ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕ್ಷೇತ್ರ ಪರಿಚಯ : ತುಂಗಾ ತೀರದ ತೀರ್ಥಹಳ್ಳಿಯಲ್ಲಿ ಗೆಲುವು ಯಾರಿಗೆ?

|
Google Oneindia Kannada News

ತುಂಗಾ ನದಿ ತಟದಲ್ಲಿರುವ ಅಪ್ಪಟ ಮಲೆನಾಡ ಕ್ಷೇತ್ರ ತೀರ್ಥಹಳ್ಳಿ. ಸಮಾಜವಾದಿ ಚಳವಳಿ, ಸಾಹಿತ್ಯ ಕ್ಷೇತ್ರಕ್ಕೆ ಕ್ಷೇತ್ರದ ಕೊಡುಗೆ ಅಪಾರ. ಕ್ಷೇತ್ರದ ಜನರು ಅಡಿಕೆ ಬೆಳೆ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಕೆಲಸಕ್ಕೆ ಜನರು ಸಿಗುವುದಿಲ್ಲ ಎಂಬುದು ಪ್ರಸ್ತುತ ಬಹುದೊಡ್ಡ ಸಮಸ್ಯೆಯಾಗಿದೆ.

ಯುವಕ-ಯುವತಿಯರು ಓದು ಮುಗಿಸಿ, ಕೈಯಲ್ಲಿ ಪದವಿ ಹಿಡಿದು ಬೆಂಗಳೂರು ನಗರದ ಬಸ್ಸು ಹತ್ತುತ್ತಿದ್ದಾರೆ. ಕ್ಷೇತ್ರದ ವ್ಯಾಪ್ತಿಯಲ್ಲಿ ತುಂಗಾ ನದಿ ಹರಿಯುತ್ತದೆ. ಆದರೆ, ಮರಳಿಗೆ ಬಂಗಾರದ ಬೆಲೆ ಇದೆ. ಅಕ್ರಮ ಮರಳು ಸಾಗಣೆಗೆ ತಡೆ ಹಾಕಬೇಕು ಎಂಬ ಕೂಗಿಗೆ ಸರಿಯಾದ ಬೆಲೆ ಸಿಕ್ಕಿಲ್ಲ.

ಕ್ಷೇತ್ರ ಪರಿಚಯ : ಶಿವಮೊಗ್ಗ ನಗರದಲ್ಲಿ ಈ ಬಾರಿ ಕಮಲ ಅರಳುವುದೇ?ಕ್ಷೇತ್ರ ಪರಿಚಯ : ಶಿವಮೊಗ್ಗ ನಗರದಲ್ಲಿ ಈ ಬಾರಿ ಕಮಲ ಅರಳುವುದೇ?

ರಿಯಲ್ ಎಸ್ಟೇಟ್ ಉದ್ಯಮ ಈಗ ಚಿಗುರೊಡೆಯುತ್ತಿದೆ. ಅರಣ್ಯ ಭೂಮಿಯಲ್ಲಿ ಜಮೀನಿ, ಮನೆ ಮಾಡಿಕೊಂಡವರು ಬಗರ್‌ಹುಕುಂಗಾಗಿ ಅರ್ಜಿ ಸಲ್ಲಿಸಿ ಕಾದು ಕುಳಿತಿದ್ದಾರೆ. ಅರಣ್ಯ ಇಲಾಖೆ, ಕಂದಾಯ ಇಲಾಖೆಯವರು ನಮ್ಮನ್ನು ಒಕ್ಕಲೆಬ್ಬಿಸುತ್ತಾರೆಯೇ? ಎಂಬ ಪ್ರಶ್ನೆ ಜನರನ್ನು ಕಾಡುತ್ತಲೆ ಇದೆ.

Karnataka Assembly Election 2018 : Tirthahalli constituency profile

2013ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕಿಮ್ಮನೆ ರತ್ನಾಕರ ಅವರು ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಮ್ಮನೆ ರತ್ನಾಕರ ಅವರನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರನ್ನಾಗಿ ಮಾಡಿದರು. ಆದರೆ, ಸಂಪುಟ ಪುನಾರಚನೆ ಸಮಯದಲ್ಲಿ ಸಚಿವ ಸ್ಥಾನವನ್ನು ಅವರು ಕಳೆದುಕೊಂಡರು.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಯಾರಿಗೆ ಗೆಲುವು?ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಯಾರಿಗೆ ಗೆಲುವು?

ಸಾಕಷ್ಟು ಕೆಲಸ ಮಾಡಿದ್ದಾರೆ, ಜನರ ಕೈಗೆ ಸುಲಭವಾಗಿ ಶಾಸಕರು ಕೈಗೆ ಸಿಗುತ್ತಾರೆ. ಆದ್ದರಿಂದ, 2018ರ ಚುನಾವಣೆಯಲ್ಲಿಯೂ ಕಿಮ್ಮನೆ ರತ್ನಾಕರ ಅವರಿಗೆ ಟಿಕೆಟ್ ಖಚಿತ.

ಬಿಜೆಪಿಯಿಂದ ಮಾಜಿ ಶಾಸಕ ಆರಗ ಜ್ಞಾನೇಂದ್ರ ಅಭ್ಯರ್ಥಿಯಾಗುವುದು ಖಚಿತ, ಸಾಮಾಜಿಕ ಜಾಲತಾಣದಲ್ಲಿ ಅವರ ಪರವಾಗಿ ಭರ್ಜರಿ ಪ್ರಚಾರ ಆರಂಭವಾಗಿದೆ. 'ದೆಹಲಿಗೆ ನರೇಂದ್ರ, ತೀರ್ಥಹಳ್ಳಿಗೆ ಜ್ಞಾನೇಂದ್ರ' ಎಂಬುದು ಕ್ಷೇತ್ರದ ಬಿಜೆಪಿ ಸದಸ್ಯರ ಘೋಷವಾಕ್ಯವಾಗಿದೆ.

ಕ್ಷೇತ್ರ ಪರಿಚಯ : ಜೆಡಿಎಸ್, ಕಾಂಗ್ರೆಸ್ ಭದ್ರ ಕೋಟೆ ಭದ್ರಾವತಿ!ಕ್ಷೇತ್ರ ಪರಿಚಯ : ಜೆಡಿಎಸ್, ಕಾಂಗ್ರೆಸ್ ಭದ್ರ ಕೋಟೆ ಭದ್ರಾವತಿ!

ಈ ಬಾರಿಯ ಚುನಾಣೆಯಲ್ಲಿ ತ್ರಿಕೋನ ಸ್ಪರ್ಧೆ ಖಚಿತ. ಅದಕ್ಕೆ ಕಾರಣ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರು ಜೆಡಿಎಸ್‌ ಪಕ್ಷದಿಂದ ಕಣಕ್ಕಿಳಿಯಲು ಸಿದ್ಧವಾಗಿರುವುದು.

2013ರ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿಯಾಗಿದ್ದ ಆರ್.ಎಂ.ಮಂಜುನಾಥ ಗೌಡರು 35,817ಮತಗಳನ್ನು ಪಡೆದಿದ್ದರು. ಚುನಾವಣೆ ಬಳಿಕ ಕಾಂಗ್ರೆಸ್ ಸೇರಿದ್ದರು, ಈ ಬಾರಿ ಜೆಡಿಎಸ್‌ನಿಂದ ಸ್ಪರ್ಧಿಸಲಿದ್ದಾರೆ. ಆದ್ದರಿಂದ, ಕ್ಷೇತ್ರದ ಕದನ ಕುತೂಹಲಕ್ಕೆ ಕಾರಣವಾಗಿದೆ.

2013ರ ಚುನಾವಣೆಯಲ್ಲಿ ಕಿಮ್ಮನೆ ರತ್ನಾಕರ ಅವರು 37,160 ಮತಗಳನ್ನು ಪಡೆದಿದ್ದರು. ಕೆಜೆಪಿಯಿಂದ ಸ್ಪರ್ಧಿಸಿದ್ದ ಆರ್.ಎಂ.ಮಂಜುನಾಥ ಗೌಡ 35,817 ಮತ, ಬಿಜೆಪಿಯಿಂದ ಸ್ಪರ್ಧಿಸಿದ್ದ ಆರಗ ಜ್ಞಾನೇಂದ್ರ ಅವರು 34,446 ಮತಗಳನ್ನು ಪಡೆದಿದ್ದರು.

English summary
Karnataka Assembly Election 2018 : Read all about Tirthahalli assembly constituency of Shimoga district. Get election news from Tirthahalli. Know about candidates list, election results during Karnataka elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X