ಯಲಬುರ್ಗಾ ಕ್ಷೇತ್ರ: ಐದು ಬಾರಿ ಶಾಸಕ ರಾಯರೆಡ್ಡಿ ಸೋಲಿಸುವುದು ಸಾಧ್ಯವೇ?
ಯಲಬುರ್ಗಾ ಕೊಪ್ಪಳ ಜಿಲ್ಲೆಯ ಒಂದು ತಾಲೂಕು ಕೇಂದ್ರ. 144 ಹಳ್ಳಿಗಳನ್ನು ಹೊಂದಿರುವ ಈ ಯಲಬುರ್ಗಾ ತಾಲೂಕಿನಲ್ಲಿ ಹಲವು ಪ್ರೇಕ್ಷಣೀಯ, ಐತಿಹಾಸಿಕ ಸ್ಥಳಗಳಿವೆ.
ತಾಲೂಕಿನ ಇಟಗಿಯಲ್ಲಿರುವ ಮಹೇಶ್ವರ ದೇವಸ್ಥಾನ, 17ನೇ ಶತಮಾನದಲ್ಲಿ ನಿರ್ಮಿಸಿದ ತಿಮ್ಮಪ್ಪನ ಗುಡಿ ದೇವಸ್ಥಾನ ಪ್ರವಾಸಿಗರನ್ನು ತಮ್ಮತ್ತ ಸೆಳೆಯುತ್ತಿವೆ. ಸಾಂಸ್ಕೃತಿಕವಾಗಿ ತಾಲೂಕು ಶ್ರೀಮಂತವಾಗಿದ್ದರೂ ಕೃಷಿ ಚಟುವಟಿಕೆಗೆ ಮಾತ್ರ ಇಲ್ಲಿ ತೊಂದರೆ ಇದೆ. ನೀರಾವರಿ ಸಮಸ್ಯೆಯಿಂದಾಗಿ ವ್ಯವಸಾಯ ಪೂರ್ತಿ ಮಳೆ ಆಧಾರಿತವಾಗಿಯೇ ನಡೆಯಬೇಕಾಗಿದೆ.
ಯಲಬುರ್ಗಾವನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಪ್ರತಿನಿಧಿಸುತ್ತಿದ್ದಾರೆ.
ಇಲ್ಲಿನ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಢಾಳಾಗಿ ಕಾಣಿಸುತ್ತದೆ. ಕ್ಷೇತ್ರದಲ್ಲಿ ಬಸವರಾಜ ರಾಯರೆಡ್ಡಿ 1985, 1989, 1994, 2004 ಮತ್ತು 2013ರಲ್ಲಿ ಜಯ ಸಾಧಿಸಿದ್ದಾರೆ. ಮೊದಲ ಮೂರು ಬಾರಿ ಜಯ ಸಾಧಿಸುವಾಗ ಅವರು ಜನತಾದಳ ಪಕ್ಷದಲ್ಲಿದ್ದರು.
ನಂತರ 2004ರಲ್ಲಿ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸಿ ಜಯ ಸಾಧಿಸಿದರು. ನಂತರ ಅವರು 2008ರಲ್ಲಿ ಸೋಲೊಪ್ಪಿಕೊಂಡು 2013ರಲ್ಲಿ ಮತ್ತೆ ಕಾಂಗ್ರೆಸ್ ನಿಂದ ಜಯಸಾಧಿಸಿದರು. ಜೊತೆಗೆ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾದರು.
2013ರಲ್ಲಿ 52,388 ಮತಗಳನ್ನು ಪಡೆದಿದ್ದ ಬಸವರಾಜ ರಾಯರೆಡ್ಡಿ ಬಿಜೆಪಿಯ ಹಾಲಪ್ಪ ಬಸಪ್ಪ ಆಚಾರ್ ಅವರನ್ನು 16,900 ಮತಗಳಿಂದ ಸೋಲಿಸಿದ್ದರು.

ಈ ಬಾರಿ ಕಾಂಗ್ರೆಸ್ ನಿಂದ ಮತ್ತೆ ರಾಯರೆಡ್ಡಿ ಸ್ಪರ್ಧಿಸುತ್ತಿದ್ದರೆ. 90ರ ದಶಕದಲ್ಲಿ ಜೆಡಿಯುನಲ್ಲಿದ್ದ ಸದ್ಯ ಬಿಜೆಪಿಯಲ್ಲಿರುವ ಅನುಭವಿ ಹಾಲಪ್ಪ ಬಸಪ್ಪ ಆಚಾರಿ ಅವರ ಎದುರಾಳಿಯಾಗಿದ್ದಾರೆ. ಇಲ್ಲಿ ಜೆಡಿಎಸ್ ಈರಣ್ಣಗೌಡ ಪಾಟೀಲ್ ಗೆ ಟಿಕೆಟ್ ನೀಡಿದೆ.
ಇತ್ತೀಚಿನ ವರ್ಷಗಳಲ್ಲಿ ಕ್ಷೇತ್ರದಲ್ಲಿ ಜೆಡಿಎಸ್ ಮತಗಳು ದೊಡ್ಡ ಮಟ್ಟಕ್ಕೆ ಕುಸಿತ ಕಂಡಿವೆ. ಹೀಗಾಗಿ ಆ ಪಕ್ಷದಿಂದ ಪ್ರಬಲ ಪೈಪೋಟಿ ನಿರೀಕ್ಷಿಸುವುದು ಅಸಾಧ್ಯ. ಆದರೆ 2013ರಲ್ಲಿ ಕೆಜೆಪಿ ಮತ್ತು ಬಿಎಸ್ಆರ್ ಪಕ್ಷಗಳಿ ತಲಾ 10 ಸಾವಿರ ಮತಗಳನ್ನು ಬಿದ್ದಿದ್ದವು. ಇವುಗಳನ್ನು ಮತ್ತೆ ಕ್ರೋಢೀಕರಣ ಮಾಡಿದರೆ ಬಿಜೆಪಿಗೆ ಗೆಲುವಿನ ಅವಕಾಶ ಇದೆ.
ಐದು ಬಾರಿಯ ಶಾಸಕ, ಸಚಿವ ಬಸವರಾಜ ರಾಯರೆಡ್ಡಿಗೆ ಸೋಲುಣಿಸುವಲ್ಲಿ ಬಿಜೆಪಿ ಸಫಲವಾಗುತ್ತಾ? ಜೆಡಿಎಸ್ ಅಭ್ಯರ್ಥಿ ಪ್ರಬಲ ಸ್ಪರ್ಧೆ ನೀಡುತ್ತಾರಾ? ಕಾದು ನೋಡಬೇಕಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications