ಯಲ್ಲಾಪುರ ಕ್ಷೇತ್ರ: ಹವ್ಯಕರ ಮತಗಳೇ ನಿರ್ಣಾಯಕ
ಸಾತೊಡ್ಡಿ, ಮಾಗೋಡು ಜಲಪಾತಗಳು ಎಂದೊಡನೆ ನೆನಪಾಗುವುದು ಯಲ್ಲಾಪುರ. ಉತ್ತರ ಕನ್ನಡ ಜಿಲ್ಲೆಯ ಒಂದು ತಾಲೂಕು ಕೇಂದ್ರವಾದ ಯಲ್ಲಾಪುರ ಹಲವು ಜಲಪಾತಗಳೊಂದಿಗೆ ಪ್ರವಾಸಿಗರನ್ನು ಸೆಳೆಯುತ್ತಿದೆ.
ಹುಬ್ಬಳ್ಳಿಯನ್ನು ಅಂಕೋಲಾಗೆ ಸಂಪರ್ಕಿಸುವ NH63ರಲ್ಲಿ ಸಾಗಿದರೆ ಸಿಗುವ ಪ್ರಕೃತಿ ಸೊಬಗಿನ ರಮ್ಯ ತಾಣ. ಅಡಿಕೆಬೆಳೆಗಾರರೇ ಇಲ್ಲಿ ಜಾಸ್ತಿ. ಆದಾಯದ ಮೂಲವೂ ಅಡಿಕೆಯೇ. ಭತ್ತ, ತೆಂಗು, ಕಬ್ಬು, ಏಲಕ್ಕಿ, ವೆನಿಲ್ಲಾವನ್ನೂ ಸಹ ಉಪಬೆಳೆಯನ್ನಾಗಿ ಅವಲಂಬಿಸಿದ್ದಾರೆ.
ಪಶ್ಚಿಮ ಘಟ್ಟಗಳ ಸೆರಗಿನಲ್ಲಿರುವ ಈ ಪ್ರದೇಶವು ಹೇರಳ ಸಂಖ್ಯೆಯ ಝರಿ-ತೊರೆಗಳಿಂದ ಕೂಡಿದ್ದು, ಮನಸ್ಸಿಗೆ ಮುದ ನೀಡುವ ಹತ್ತು ಹಲವು ಜಲಪಾತಗಳನ್ನು ತನ್ನ ಒಡಲೊಳಗೆ ಬಚ್ಚಿಟ್ಟುಕೊಂಡಿದೆ. 2001 ರ ಜನಗಣತಿಯ ಪ್ರಕಾರ ಯಲ್ಲಾಪುರದ ಜನಸಂಖ್ಯೆ 17,938! ಇಲ್ಲಿನ ಶೇ.73 ರಷ್ಟು ಜನ ಸಾಕ್ಷರರು. ಕನ್ನಡ ಮತ್ತು ಕೊಂಕಣಿ ಮಾತನಾಡುವವರ ಸಂಖ್ಯೆ ಇಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಆಫ್ರಿಕದ ಬುಡಕಟ್ಟು ಜನಾಂಗದ ಹಲವರು ಹಲವು ದಶಕಗಳ ಹಿಂದೇ ಇಲ್ಲಿಗೆ ಬಂದು ನೆಲೆಸಿದ್ದಾರೆ. ಹವ್ಯಕ, ಒಕ್ಕಲಿಗ, ಗೌಡ, ಸಿದ್ದಿ ಜನಾಂಗದವರೂ ಇಲ್ಲಿ ವಾಸವಾಗಿದ್ದಾರೆ.

ಇನ್ನು ಈ ಕ್ಷೇತ್ರದ ರಾಜಕೀಯ ಚಿತ್ರಣ ಹೇಗಿದೆ ಎಂದು ವಿಶ್ಲೇಷಿಸುವುದಕ್ಕೆ ಹೋದರೆ, ಈ ಭಾಗದಲ್ಲಿ ಹವ್ಯಕರ ಮತವೇ ನಿರ್ಣಾಯಕ. ಜೆಡಿಎಸ್, ಕಾಂಗ್ರೆಸ್ ಪಕ್ಷಗಳಲ್ಲೆಲ್ಲ ಓಡಾಡಿ ಈಗ ಬಿಜೆಪಿಗೆ ಬಂದಿರುವ ಪ್ರಮೋದ್ ಹೆಗಡೆ ಶಿರಸಿ ಅಥವಾ ಯಲ್ಲಾಪುರ ಕ್ಷೇತ್ರದ ಟಿಕೇಟ್ ಆಕಾಂಕ್ಷಿ ಎಂಬ ವದಂತಿಯೂ ಹರಿದಾಡುತ್ತಿದೆ. ಆದರೆ ಶಿರಸಿಯಲ್ಲಿ ಕಾಗೇರಿ ವಿಶ್ವೇಶ್ವರ ಹೆಗಡೆ ಅವರಿಗಲ್ಲದೆ ಬೇರೆ ಅಭ್ಯರ್ಥಿಗೆ ಬಿಜೆಪಿಯಿಂದ ಟಿಕೇಟ್ ಸಿಗುವುದು ಕಷ್ಟವೇ. ಆದ್ದರಿಂದ ಪ್ರಮೋದ್ ಹೆಗಡೆ ಅವರ ಕಣ್ಣು ಯಲ್ಲಾಪುರದ ಮೇಲಿದೆ.
ಆದರೆ ಬಿಜೆಪಿಯಿಂದ 2008 ರ ಚುನಾವಣೆಯಲ್ಲಿ ಜಯಗಳಿಸಿದ ವಿ.ಎಸ್.ಪಾಟೀಲ್ ಇದಕ್ಕೆ ತಡೆಯೊಡ್ಡಬಹುದು. 2013 ರಲ್ಲೂ ಬಿಜೆಪಿ ಅಭ್ಯರ್ಥಿಯಾಗಿದ್ದ ಪಾಟೀಲ್, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಶಿವರಾಮ್ ಹೆಬ್ಬಾರ್ ಅವರ ವಿರುದ್ಧ ಸೋತಿದ್ದರು.
ಶಿವರಾಮ್ ಹೆಬ್ಬಾರ್(ಕಾಂಗ್ರೆಸ್) 58025 ಮತಗಳನ್ನು ಪಡೆದಿದ್ದರೆ, ಬಿಜೆಪಿಯ ವಿ.ಎಸ್.ಪಾಟೀಲ್ 33533 ಮತಗಳನ್ನು ಪಡೆದಿದ್ದರು. ಈ ವರ್ಷ ಬಿಜೆಪಿಯಿಂದ ಪ್ರಮೋದ್ ಹೆಗಡೆ ಮತ್ತು ಕಾಂಗ್ರೆಸ್ ನಿಂದ ಶಿವರಾಮ ಹೆಬ್ಬಾರ್ ಸ್ಪರ್ಧಿಸಿದರೆ ಹವ್ಯಕ ಮತಗಳು ಒಡೆದುಹೋಗುವುದು ಖಂಡಿತ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications