ಯಮಕನಮರಡಿ ಕ್ಷೇತ್ರ: ಸತೀಶ್ ಜಾರಕಿಹೊಳಿಗಿಲ್ಲ ಸೋಲಿನ ಭಯ
ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಕ್ಷೇತ್ರ ಯಮಕನಮರಡಿ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿಗೆ ಸೇರಿದ ಪುಟ್ಟ ಗ್ರಾಮವಿದು. ಇದೇ ಈಗ ಇಲ್ಲಿ ವಿಧಾನಸಭಾ ಕ್ಷೇತ್ರವಾಗಿದೆ. 2008ರಲ್ಲಿ ಕ್ಷೇತ್ರಗಳ ಪುನರ್ ವಿಂಗಡಣೆ ಬಳಿಕ ಹೊಸದಾಗಿ ಈ ಯಮಕನಮರಡಿ ಕ್ಷೇತ್ರವನ್ನು ರೂಪಿಸಲಾಯಿತು.
ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಸತೀಶ್ ಜಾರಕಿಹೊಳಿ ಇಲ್ಲಿನ ಹಾಲಿ ಶಾಸಕರು. ಮಾನವ ಬಂಧುತ್ವ ವೇದಿಕೆ, ಮೂಢನಂಬಿಕೆ ವಿರೋಧಿ ಹೋರಾಟ, ಬುದ್ಧ-ಬಸವ-ಅಂಬೇಡ್ಕರ್ ತತ್ವಗಳನ್ನು ಜಪಿಸುತ್ತಾ ಸೈದ್ಧಾಂತಿಕ ರಾಜಕಾರಣವನ್ನು ಮಾಡುತ್ತಾ ಬಂದಿರುವವರು ಸತೀಶ್ ಜಾರಕಿಹೊಳಿ. ಅವರಿಲ್ಲಿ 2008 ಮತ್ತು 2013ರಲ್ಲಿ ಜಯಶಾಲಿಯಾಗಿದ್ದಾರೆ.
2008ರಲ್ಲಿ 46,132 ಮತಗಳನ್ನು ಪಡೆದ ಅವರು ಜೆಡಿಎಸ್ ಅಭ್ಯರ್ಥಿಯನ್ನು ಸುಮಾರು 17 ಸಾವಿರ ಮತಗಳಿಂದ ಸೋಲಿಸಿದ್ದರು. 2013ರ ಚುನಾವಣೆಯಲ್ಲಿ ಜಾರಕಿಹೊಳಿ 70,726 ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿಯನ್ನು ಸುಮಾರು 24 ಸಾವಿರ ಮತಗಳಿಂದ ಸೋಲಿಸಿದ್ದರು. ಇದಾದ ನಂತರ ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಅಬಕಾರಿ ಸಚಿವರೂ ಆಗಿದ್ದರು.

ಕ್ಷೇತ್ರದ ಮೇಲೆ ಜಾರಕಿಹೊಳಿ ಎಷ್ಟರಮಟ್ಟಿಗೆ ಹಿಡಿತ ಹೊಂದಿದ್ದಾರೆ ಎಂದರೆ, 'ನನಗೆ ಕ್ಷೇತ್ರಕ್ಕೆ ಹೋಗಬೇಕಾಗಿಯೇ ಇಲ್ಲ. ಜನರೇ ಗೆಲ್ಲಿಸುತ್ತಾರೆ' ಎಂದು ತುಂಬು ಆತ್ಮವಿಶ್ವಾಸದಿಂದ ನುಡಿಯುತ್ತಾರೆ. ಜೊತೆಗೆ ಸಿದ್ದರಾಮಯ್ಯ ಗೆಲುವಿಗಾಗಿ ಅವರು ಬಾದಾಮಿಗೆ ಬಂದು ಪ್ರಚಾರ ಮಾಡುತ್ತಿದ್ದಾರೆಯೇ ವಿನಃ ತಮ್ಮ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿಲ್ಲ.
ಇಲ್ಲಿ ಈ ಬಾರಿ ಜಾರಕಿಹೊಳಿ ವಿರುದ್ಧ ಬಿಜೆಪಿಯ ಮಾರುತಿ ಮಲ್ಲಪ್ಪ ಮತ್ತು ಜೆಡಿಎಸ್ ನಿಂದ ಶಂಕರ್ ಭರಮಗಸ್ತಿ ಸ್ಪರ್ಧಿಸುತ್ತಿದ್ದಾರೆ. ಯಾರೇ ಸ್ಪರ್ಧಿಸಿದರೂ ಇಲ್ಲಿ ಜಾರಕಿಹೊಳಿ ಕುದುರೆಗೆ ಲಗಾಮು ಹಾಕುವುದು ಕಷ್ಟ ಎಂಬ ಪರಿಸ್ಥಿತಿ ಇದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications