ತರೀಕೆರೆ ವಿಧಾನಸಭಾ ಕ್ಷೇತ್ರದ ಪರಿಚಯ
ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಗಡಿಭಾಗದ ತರೀಕೆರೆ ಕ್ಷೇತ್ರದಲ್ಲಿ ಲಿಂಗಾಯತ ಮತವೇ ನಿರ್ಣಾಯಕವಾಗಿದೆ. ಅರೆ ಮಲೆನಾಡು ಸೀಮೆಯ ಈ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ಇಲ್ಲಿ ತನಕ ಸುಲಭವಾಗಿ ತನ್ನ ಪ್ರಾಬಲ್ಯ ಮೆರೆದಿದೆ.
ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ಯಾವ ರೀತಿ ಅಂತ್ಯ ಕಾಣುವುದು ಎಂಬುದರ ಮೇಲೆ ಈ ಕ್ಷೇತ್ರದ ಅಭ್ಯರ್ಥಿಗಳ ಹಣೆಬರಹ ನಿರ್ಧಾರವಾಗುವ ಸಾಧ್ಯತೆಯಿದೆ.
2008ರಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿಯ ಡಿ.ಎಸ್ ಸುರೇಶ್ ಅವರು ನಂತರ ಯಡಿಯೂರಪ್ಪ ಅವರ ಕೆಜೆಪಿ ಸೇರಿ ಸ್ಪರ್ಧೆಗಿಳಿದು ಸೋಲು ಕಂಡಿದ್ದರು. ಈಗ ಮತ್ತೆ ಬಿಜೆಪಿಯಿಂದ ಮತ್ತೆ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
2013ರಲ್ಲಿ ಕೊನೆ ಕ್ಷಣದಲ್ಲಿ ಎಲ್ಲರ ಹುಬ್ಬೇರುವಂತೆ ಕಾಂಗ್ರೆಸ್ ಟಿಕೆಟ್ ಪಡೆದು ಗೆಲುವು ಸಾಧಿಸಿದ್ದ ಶ್ರೀನಿವಾಸ್ ಅವರು ಈ ಬಾರಿಯೂ ಬಿ ಫಾರಂ ಪಡೆಯುವುದರಲ್ಲಿ ಅನುಮಾನವಿಲ್ಲ. ಆದರೆ, ಬಿಜೆಪಿ ಭದ್ರಕೋಟೆಯನ್ನು ಮತ್ತೊಮ್ಮೆ ಛಿದ್ರಗೊಳಿಸಲು ಸಾಧ್ಯವೆ ಕಾದು ನೋಡಬೇಕಿದೆ.

ಮೂಲ ಸೌಕರ್ಯ ಕೊರತೆ, ಪ್ರವಾಸೋದ್ಯಮಕ್ಕೆ ಹೆಚ್ಚಿನ ಇಂಬು ನೀಡದಿರುವುದು, ಕಾಡುಮೃಗಗಳು ಹಾಗೂ ಮಾನವರ ನಡುವಿನ ಸಂಘರ್ಷ, ಕೃಷಿಕರಲ್ಲಿರುವ ಗೊಂದಲ ಎಲ್ಲವೂ ಕ್ಷೇತ್ರದ ಅಳಿಯದ ಸಮಸ್ಯೆಗಳಾಗಿವೆ.
ಲಿಂಗಾಯತ ಹಾಗೂ ವೀರಶೈವ ಮತ, ಬಸವಣ್ಣ ಅವರ ಹೆಸರ ಅನುಯಾಯಿಗಳಾಗಿ ಹೊಸ ಮತ ಸ್ಥಾಪನೆ ಬಗ್ಗೆ ಮೂಡಿರುವ ಗೊಂದಲ ಈ ಕ್ಷೇತ್ರಕ್ಕೂ ಬಲವಾಗಿ ತಟ್ಟುವ ಸಾಧ್ಯತೆಯಿದೆ.
ತೆಂಗು, ಬಾಳೆ, ನೆಲಗಡಲೆ, ಸೂರ್ಯಕಾಂತಿ, ಮೆಕ್ಕೆಜೋಳ ಮುಂತಾದ ವಾಣಿಜ್ಯ ಬೆಳೆ, ಭತ್ತ, ರಾಗಿ ಬೆಳೆಯುವ ತರೀಕೆರೆಗೆ ಶಿವಮೊಗ್ಗ, ಭದ್ರಾವತಿ ಪಟ್ಟಣಗಳು ಹತ್ತಿರವಾಗಿದ್ದು ಪ್ರಮುಖ ವಾಣಿಜ್ಯ ವ್ಯವಹಾರಕ್ಕೆ ಅನುಕೂಲಕರ ನೆಲೆಯಾಗಿದೆ.
ಪ್ರವಾಸಿ ತಾಣಗಳೇ ಆಕರ್ಷಣೆ: ಕಲ್ಹತ್ತಗಿರಿ, ಕೆಮ್ಮಣ್ಣುಗುಂಡಿ ಗಿರಿಧಾಮಗಳು, ಹೊಯ್ಸಳರ ಕಾಲದ ಅಮೃತಾಪುರದ ದೇಗುಲ, ಲಕ್ಕವಳ್ಳಿಯ ಅಣೆಕಟ್ಟು ಎಲ್ಲವೂ ಪ್ರಮುಖ ತಾಣಗಳಾಗಿವೆ. ಇದಲ್ಲದೆ ಅಜ್ಜಂಪುರದ ಅಮೃತ್ ಮಹಲ್ ಕಾವಲ್ ರಾಸುಗಳು ತುಂಬಾ ಪ್ರಸಿದ್ಧಿ ಪಡೆದಿವೆ. ಭದ್ರಾ ವನ್ಯಜೀವಿ ಅಭಯಾರಣ್ಯ ನಾಡಿನ ಪ್ರಮುಖ ಜೀವ ತಾ.
2013ರಲ್ಲಿ ಕಾಂಗ್ರೆಸ್ಸಿನ ಜಿ. ಎಚ್ ಶ್ರೀನಿವಾಸ ಅವರು 35,817 ಮತಗಳನ್ನು ಪಡೆದು ವಿಜಯಿಯಾದರೆ, ಸಮೀಪದ ಪ್ರತಿಸ್ಪರ್ಧಿ ಕೆಜೆಪಿಯ ಡಿಎಸ್ ಸುರೇಶ್ 34918 ಮತಗಳನ್ನು ಗಳಿಸಿದ್ದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications