ತರೀಕೆರೆ ವಿಧಾನಸಭಾ ಕ್ಷೇತ್ರದ ಪರಿಚಯ
ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಗಡಿಭಾಗದ ತರೀಕೆರೆ ಕ್ಷೇತ್ರದಲ್ಲಿ ಲಿಂಗಾಯತ ಮತವೇ ನಿರ್ಣಾಯಕವಾಗಿದೆ. ಅರೆ ಮಲೆನಾಡು ಸೀಮೆಯ ಈ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ಇಲ್ಲಿ ತನಕ ಸುಲಭವಾಗಿ ತನ್ನ ಪ್ರಾಬಲ್ಯ ಮೆರೆದಿದೆ.
ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ಯಾವ ರೀತಿ ಅಂತ್ಯ ಕಾಣುವುದು ಎಂಬುದರ ಮೇಲೆ ಈ ಕ್ಷೇತ್ರದ ಅಭ್ಯರ್ಥಿಗಳ ಹಣೆಬರಹ ನಿರ್ಧಾರವಾಗುವ ಸಾಧ್ಯತೆಯಿದೆ.
2008ರಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿಯ ಡಿ.ಎಸ್ ಸುರೇಶ್ ಅವರು ನಂತರ ಯಡಿಯೂರಪ್ಪ ಅವರ ಕೆಜೆಪಿ ಸೇರಿ ಸ್ಪರ್ಧೆಗಿಳಿದು ಸೋಲು ಕಂಡಿದ್ದರು. ಈಗ ಮತ್ತೆ ಬಿಜೆಪಿಯಿಂದ ಮತ್ತೆ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
2013ರಲ್ಲಿ ಕೊನೆ ಕ್ಷಣದಲ್ಲಿ ಎಲ್ಲರ ಹುಬ್ಬೇರುವಂತೆ ಕಾಂಗ್ರೆಸ್ ಟಿಕೆಟ್ ಪಡೆದು ಗೆಲುವು ಸಾಧಿಸಿದ್ದ ಶ್ರೀನಿವಾಸ್ ಅವರು ಈ ಬಾರಿಯೂ ಬಿ ಫಾರಂ ಪಡೆಯುವುದರಲ್ಲಿ ಅನುಮಾನವಿಲ್ಲ. ಆದರೆ, ಬಿಜೆಪಿ ಭದ್ರಕೋಟೆಯನ್ನು ಮತ್ತೊಮ್ಮೆ ಛಿದ್ರಗೊಳಿಸಲು ಸಾಧ್ಯವೆ ಕಾದು ನೋಡಬೇಕಿದೆ.

ಮೂಲ ಸೌಕರ್ಯ ಕೊರತೆ, ಪ್ರವಾಸೋದ್ಯಮಕ್ಕೆ ಹೆಚ್ಚಿನ ಇಂಬು ನೀಡದಿರುವುದು, ಕಾಡುಮೃಗಗಳು ಹಾಗೂ ಮಾನವರ ನಡುವಿನ ಸಂಘರ್ಷ, ಕೃಷಿಕರಲ್ಲಿರುವ ಗೊಂದಲ ಎಲ್ಲವೂ ಕ್ಷೇತ್ರದ ಅಳಿಯದ ಸಮಸ್ಯೆಗಳಾಗಿವೆ.
ಲಿಂಗಾಯತ ಹಾಗೂ ವೀರಶೈವ ಮತ, ಬಸವಣ್ಣ ಅವರ ಹೆಸರ ಅನುಯಾಯಿಗಳಾಗಿ ಹೊಸ ಮತ ಸ್ಥಾಪನೆ ಬಗ್ಗೆ ಮೂಡಿರುವ ಗೊಂದಲ ಈ ಕ್ಷೇತ್ರಕ್ಕೂ ಬಲವಾಗಿ ತಟ್ಟುವ ಸಾಧ್ಯತೆಯಿದೆ.
ತೆಂಗು, ಬಾಳೆ, ನೆಲಗಡಲೆ, ಸೂರ್ಯಕಾಂತಿ, ಮೆಕ್ಕೆಜೋಳ ಮುಂತಾದ ವಾಣಿಜ್ಯ ಬೆಳೆ, ಭತ್ತ, ರಾಗಿ ಬೆಳೆಯುವ ತರೀಕೆರೆಗೆ ಶಿವಮೊಗ್ಗ, ಭದ್ರಾವತಿ ಪಟ್ಟಣಗಳು ಹತ್ತಿರವಾಗಿದ್ದು ಪ್ರಮುಖ ವಾಣಿಜ್ಯ ವ್ಯವಹಾರಕ್ಕೆ ಅನುಕೂಲಕರ ನೆಲೆಯಾಗಿದೆ.
ಪ್ರವಾಸಿ ತಾಣಗಳೇ ಆಕರ್ಷಣೆ: ಕಲ್ಹತ್ತಗಿರಿ, ಕೆಮ್ಮಣ್ಣುಗುಂಡಿ ಗಿರಿಧಾಮಗಳು, ಹೊಯ್ಸಳರ ಕಾಲದ ಅಮೃತಾಪುರದ ದೇಗುಲ, ಲಕ್ಕವಳ್ಳಿಯ ಅಣೆಕಟ್ಟು ಎಲ್ಲವೂ ಪ್ರಮುಖ ತಾಣಗಳಾಗಿವೆ. ಇದಲ್ಲದೆ ಅಜ್ಜಂಪುರದ ಅಮೃತ್ ಮಹಲ್ ಕಾವಲ್ ರಾಸುಗಳು ತುಂಬಾ ಪ್ರಸಿದ್ಧಿ ಪಡೆದಿವೆ. ಭದ್ರಾ ವನ್ಯಜೀವಿ ಅಭಯಾರಣ್ಯ ನಾಡಿನ ಪ್ರಮುಖ ಜೀವ ತಾ.
2013ರಲ್ಲಿ ಕಾಂಗ್ರೆಸ್ಸಿನ ಜಿ. ಎಚ್ ಶ್ರೀನಿವಾಸ ಅವರು 35,817 ಮತಗಳನ್ನು ಪಡೆದು ವಿಜಯಿಯಾದರೆ, ಸಮೀಪದ ಪ್ರತಿಸ್ಪರ್ಧಿ ಕೆಜೆಪಿಯ ಡಿಎಸ್ ಸುರೇಶ್ 34918 ಮತಗಳನ್ನು ಗಳಿಸಿದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications