ಲಾಠಿ ಚಾರ್ಚ್ ನಡುವೆ ಯೋಗಿ ನಾಮಪತ್ರ

ರಾಷ್ಟ್ರೀಯ ನಾಯಕರ ಹಸ್ತಕ್ಷೇಪದಿಂದ ನನಗೆ ಟಿಕೆಟ್ ತಪ್ಪಿತು. ಬೇರೆ ಬೇರೆ ಪಕ್ಷಗಳಲ್ಲಿ ಜನ ನನ್ನ ಕೈ ಹಿಡಿದು ಗೆಲ್ಲಿಸಿದ್ದಾರೆ. ಈ ಬಾರಿ ಕೂಡಾ ಗೆಲ್ಲುತ್ತೇನೆ ಎಂದು ರಾಮನಗರ ಜಿಲ್ಲೆ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.
ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಕೆಗೆ ಸಿ.ಪಿ ಯೋಗೇಶ್ವರ್ ಬರುವುದಕ್ಕೂ ಮುನ್ನ ಅಪಾರ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಕಚೇರಿಯತ್ತ ಧಾವಿಸಿದ್ದರು. ಸಾವಿರಾರು ಸಂಖ್ಯೆಯಲ್ಲಿ ಬಂದ ಅಭಿಮಾನಿಗಳು, ಕಾರ್ಯಕರ್ತರನ್ನು ತಡೆಯಲು ಸಾಧ್ಯವಾಗದೆ ಪೊಲೀಸರು ಪರಿತಪಿಸಿದರು
ಲಾಠಿಚಾರ್ಜ್: ನಾಮಪತ್ರ ಸಲ್ಲಿಸಲು ತಾಲೂಕು ಕಚೇರಿಗೆ ಯೋಗೇಶ್ವರ್ ಬಂದಾಗ ಅವರ ಜೊತೆ ಅಭಿಮಾನಿಗಳು ನುಗ್ಗಲು ಯತ್ನಿಸಿದರು. ನಿಯಮಗಳ ಪ್ರಕಾರ ನಾಮಪತ್ರ ಸಲ್ಲಿಸಲಿರುವ ಅಭ್ಯರ್ಥಿ ಜೊತೆಗೆ ಐವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಹೀಗಾಗಿ ಎಲ್ಲರನ್ನು ಗೇಟಿನ ಹೊರಗಡೆ ನಿಲ್ಲಿಸಲಾಗಿತ್ತು.
ಆದರೆ, ಸುತ್ತಮುತ್ತಲ ಗ್ರಾಮಸ್ಥರು ಗೇಟು ಮುರಿದು ಮುನ್ನುಗ್ಗಿದ ಪರಿಣಾಮ ಓರ್ವ ಪೇದೆ ಹಾಗೂ ಓರ್ವ ಬಿಎಸ್ ಎಫ್ ಯೋಧನಿಗೆ ಗಾಯಗಳಾಯಿತು. ಕಚೇರಿಯತ್ತ ಹೋಗಲು ಬಿಡದ ಪೊಲೀಸರ ಮೇಲೆ ಕಾರ್ಯಕರ್ತರು ಚಪ್ಪಲಿ ತೂರಿದರು. ಪರಿಸ್ಥಿತಿ ಕೈ ಮೀರುವ ಶಂಕೆ ವ್ಯಕ್ತವಾದಾಗ ವಿಧಿವಿಲ್ಲದೆ ಪೊಲೀಸರು ಲಾಠಿ ಚಾರ್ಜ್ ಪ್ರಾರಂಭಿಸಿದರು.
ಸೈನಿಕನ ಟಿಕೆಟ್ ಪುರಾಣ: ಅರಣ್ಯ ಸಚಿವರಾಗಿ ಬಿಜೆಪಿಯಲ್ಲಿ ಹಾಯಾಗಿದ್ದ ಯೋಗೇಶ್ವರ್ ಆವರು ಮೊದಮೊದಲು ಕೆಲ ಕಾಲ ರಾಜಕೀಯ ಸನ್ಯಾಸ ಎಂದಿದ್ದರು ನಂತರ ಬಿಜೆಪಿ ಸಹವಾಸ ಸಾಕು ಎಂದು ಸಚಿವ ಸ್ಥಾನದಿಂದ ಕೆಳಗಿಳಿದರು.
ನಂತರ ಕಾಂಗ್ರೆಸ್ ಟಿಕೆಟ್ ಸಿಗುವ ನಿರೀಕ್ಷೆ ಟುಸ್ ಆಯಿತು. ಕಾಂಗ್ರೆಸ್ ಟಿಕೆಟ್ ಘೋಷಣೆಯಾದ ಮೇಲೆ ಕೂಡಾ ಯೋಗೇಶ್ವರ್ ನಿರೀಕ್ಷೆ ಇಟ್ಟುಕೊಂಡಿದ್ದರು. ಸಾದತ್ ಆಲಿಖಾನ್ ಪ್ರಚಾರ ಕಾರ್ಯ ಆರಂಭಿಸಿದ ಮೇಲೆ ಗಾಬರಿಗೊಂಡು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರ ಮನೆ ಬಾಗಿಲು ತಟ್ಟಿ ನಿರಾಶೆ ಮುಖ ಹೊತ್ತು ಹಿಂತಿರುಗಿದ್ದರು.
ಟಿಕೆಟ್ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದ ನಂತರವೇ ತಮ್ಮಿಂದ ಸಚಿವ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವುದಾಗಿ ಯೋಗೀಶ್ವರ್ ಹೇಳುತ್ತಿದ್ದು, ಟಿಕೆಟ್ ಅನ್ನು ಒಂದು ವೇಳೆ ತಮಗೆ ಕೊಡದಿದ್ದಲ್ಲಿ ಪಕ್ಷೇತರಾಗಿ ಸ್ಪರ್ಧಿಸುತ್ತೇನೆ ಎಂದಿದ್ದರು. ಆದರೆ ಈಗ ಸಮಾಜವಾಗಿ ಪಕ್ಷದ ಬಿ ಫಾರಂ ಪಡೆದು ಅಧಿಕೃತವಾಗಿ ಕಣಕ್ಕಿಳಿದಿದ್ದಾರೆ.
ಯೋಗೇಶ್ವರ್ ಅವರ ಮೇಲೆ ಹಲವಾರು ಪ್ರಕರಣಗಳು ಸುತ್ತಿಕೊಂಡಿದ್ದೆ. ಹಗರಣದಿಂದ ಹೊರಗೆ ಬರುವ ಆತಂಕ ಅವರನ್ನು ಹೀಗೆ ಮಾಡಿಸಿದೆ. ಕೇಂದ್ರ ಸರ್ಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಮೆಗಾಸಿಟಿ ಹಗರಣದ ಬಗ್ಗೆ ಎಲ್ಲಿ ತನಿಖೆ ಆರಂಭಿಸಿ ತಮ್ಮ ಬುಡ ಅಲ್ಲಾಡಿಸುತ್ತದೆ ಎಂಬ ಭಯ ಆವರಿಸಿದೆ. ತಮ್ಮ ವಂಚನೆ ಬಯಲಾಗಿ ಜೈಲುಪಾಲಾಗುವ ಭಯದಿಂದ ಕಾಂಗ್ರೆಸ್ ನಾಯಕರ ಹಿಂದೆ ಬಿದ್ದಿದ್ದಾರೆ ಎಂಬುದು ಎಲ್ಲೆಡೆ ಕೇಳಿ ಬಂದ ಮಾತು.
ಕೋಲಾರದಲ್ಲೂ ಗಲಾಟೆ: ಬಿಜೆಪಿ ಬಂಡಾಯ ಅಭ್ಯರ್ಥಿ ನಾಗರಾಜು ಮೇಲೆ ಅವರ ಕೆನ್ನೆಗೆ ಮಹಿಳೆಯೊಬ್ಬರು ಬಾರಿಸಿ ಹೋಗಿದ್ದರು. ಈಗ ಬಂಧಿಸಲಾಗಿದೆ. ಕೆಜಿಎಫ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಕೆಜಿಫ್ ನಿವಾಸಿ ಸಂಗಮತಿ ಅವರು ಬಾರಿಸಿ ರಾಬರ್ಟ್ ಸನ್ ಪೇಟೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications